Webdunia - Bharat's app for daily news and videos

Install App

ಬಿಜೆಪಿಯಿಂದ ತಮಗೆ ಸಿಎಂ ಪಟ್ಟದ ಆಫರ್: ಕುಮಾರ್ ವಿಶ್ವಾಸ್ ಆರೋಪ

Webdunia
ಶನಿವಾರ, 30 ಆಗಸ್ಟ್ 2014 (10:52 IST)
ನವದೆಹಲಿ: ದೆಹಲಿಯಲ್ಲಿ ಆಪ್ ನಾಯಕರಿಗೆ ಬಿಜೆಪಿ ಗಾಳ ಹಾಕುತ್ತಿದೆ ಎಂದು ಆಪ್ ಮುಖಂಡ ಕುಮಾರ್ ವಿಶ್ವಾಸ್ ಗಂಭೀರ ಆರೋಪ ಮಾಡಿದ್ದಾರೆ. ಬಿಜೆಪಿ ಸಂಸದರೊಬ್ಬರು ನಮ್ಮ ಮನಗೆ ಭೇಟಿ ನೀಡಿ ದೆಹಲಿಯಲ್ಲಿ ಸರ್ಕಾರ ರಚಿಸುವ ಬಗ್ಗೆ ಮಾತನಾಡಿದ್ರು. ಆಪ್‌ಗೆ ಗುಡ್‌ಬೈ ಹೇಳಿ ಬಿಜೆಪಿಗೆ ಬೆಂಬಲಿಸಿದರೆ ಸಿಎಂ ಪಟ್ಟ ನೀಡುವುದಾಗಿ ಆಫರ್ ನೀಡಿದ್ದಾರೆ ಎಂದು ಆಪ್ ಮುಖಂಡ ಕುಮಾರ್ ವಿಶ್ವಾಸ್ ಆರೋಪಿಸಿದರು.

ದೆಹಲಿಯಲ್ಲಿ ಬಿಜೆಪಿ ಸರ್ಕಾರ ರಚನೆಗೆ ಕಸರತ್ತು ನಡೆಸಿದ್ದು, ಸರ್ಕಾರ ರಚನೆಗೆ ಬಹುಮತದ ಸದಸ್ಯಬಲ ಸಾಧಿಸಲು ಕೆಲವೇ ಸದಸ್ಯರ ಅವಶ್ಯಕತೆಯಿದೆ. ಈ ಹಿನ್ನೆಲೆಯಲ್ಲಿ ಆಪ್ ನಾಯಕರಿಗೆ ಬಿಜೆಪಿ ಬಲೆ ಬೀಸುತ್ತಿದೆ ಎಂದು ಕುಮಾರ್ ವಿಶ್ವಾಸ್ ಆರೋಪಿಸಿದ್ದಾರೆ.
 
ಲೆಫ್ಟಿನೆಂಟ್ ಗವರ್ನರ್ ಸರ್ಕಾರ ರಚನೆಗೆ ಆಹ್ವಾನ ನೀಡಿದರೆ ಎಲ್ಲಾ ಸಾಧ್ಯತೆಯನ್ನು ಪರಿಶೀಲಿಸುವುದಾಗಿ ಬಿಜೆಪಿಯ ನಗರ ಘಟಕ ಸ್ಪಷ್ಟಪಡಿಸಿರುವುದು ಕುಮಾರ್ ವಿಶ್ವಾಸ್ ಆರೋಪಕ್ಕೆ ಪುಷ್ಠಿ ಸಿಕ್ಕಿದೆ. 
 
ಎಲ್.ಜಿ. ನಜೀಬ್ ಜಂಗ್ ಶೀಘ್ರದಲ್ಲೇ ದೆಹಲಿಯ ರಾಜಕೀಯ ಪರಿಸ್ಥಿತಿ ಬಗ್ಗೆ ಕೇಂದ್ರ ಗೃಹಸಚಿವಾಲಯಕ್ಕೆ ವರದಿ ಸಲ್ಲಿಸಲಿದ್ದು, ತರುವಾಯ ಸರ್ಕಾರ ರಚನೆಗೆ ಬಿಜೆಪಿಗೆ ಕರೆ ನೀಡಬಹುದು.ಲೆಫ್ಟಿನೆಂಟ್ ಗವರ್ನರ್ ಸರ್ಕಾರ ರಚನೆಗೆ ಕರೆ ನೀಡಿದರೆ, ನಾವು ಎಲ್ಲಾ ಸಾಧ್ಯತೆಯನ್ನು ಪರಿಶೀಲಿಸುತ್ತೇವೆ.

ಏಕೆಂದರೆ ಯಾವುದೇ ಪಕ್ಷದ ಶಾಸಕರಿಗೆ ಚುನಾವಣೆ ಬೇಕಿಲ್ಲ ಎಂದು ನಗರದ ಬಿಜೆಪಿ ಅಧ್ಯಕ್ಷ ಸತೀಶ್ ಉಪಾಧ್ಯಾಯ ಹೇಳಿದ್ದಾರೆ. ಬಹುಮತ ಸಾಬೀತುಪಡಿಸುವಂತೆ ಕೇಳಿದರೆ ಎಲ್ಲಾ ಸಾಧ್ಯತೆಗಳನ್ನು ಹುಡುಕುವುದು ನನ್ನ ಕೆಲಸವಾಗಿದೆ ಎಂದು ಉಪಾಧ್ಯಾಯ ಹೇಳಿರುವುದರಿಂದ ಕುಮಾರ್ ವಿಶ್ವಾಸ್ ಆರೋಪ ನಿಜವಿದ್ದರೂ ಇರಬಹುದು ಎನಿಸುತ್ತಿದೆ. 
 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments