Webdunia - Bharat's app for daily news and videos

Install App

ಉತ್ತರಾಖಂಡ್‌ನಲ್ಲಿ ಆಪರೇಶನ್ ಕಮಲ: ಕಾಂಗ್ರೆಸ್ ಶಾಸಕರಿಗೆ ತಲಾ 50 ಕೋಟಿ ಆಫರ್

Webdunia
ಬುಧವಾರ, 27 ಏಪ್ರಿಲ್ 2016 (12:06 IST)
ಉತ್ತರಾಖಂಡ್‌ನಲ್ಲಿ ಪ್ರತಿಯೊಬ್ಬ ಶಾಸಕರನ್ನು ಖರೀದಿಸಲು ಬಿಜೆಪಿ 50 ಕೋಟಿ ರೂಪಾಯಿಗಳ ಆಫರ್ ನೀಡಿತ್ತು ಎಂದು ಕಾಂಗ್ರೆಸ್ ಆರೋಪಿಸಿದೆ.
 
ಇಬ್ಬರು ಕಾಂಗ್ರೆಸ್ ಶಾಸಕರಾದ ರಾಜೇಂದ್ರ ಭಂಡಾರಿ ಮತ್ತು ಜೀತ್ ರಾಮ್ ಸಾರ್ವಜನಿಕವಾಗಿ ಹೇಳಿಕೆ ನೀಡಿ, ಬಿಜೆಪಿ ಮುಖಂಡರು 50 ಕೋಟಿ ರೂಪಾಯಿಹಗಳ ಆಮಿಷವೊಡ್ಡಿದ್ದಲ್ಲದೇ ಅವರ ಕುಟುಂಬದ ಸದಸ್ಯರಿಗೆ ವಿಧಾನಸಭೆ ಟಿಕೆಟ್ ಮತ್ತು ರಾಜ್ಯಸಭೆ ಸದಸ್ಯತ್ವ ನೀಡುವುದಾಗಿ ಭರವಸೆ ನೀಡಿತ್ತು ಎಂದು ಆರೋಪಿಸಿದ್ದಾರೆ. 
 
ಬಿಜೆಪಿ ಮುಖಂಡ ಸತ್ಪಾಲ್ ಮಹಾರಾಜ್ ಅವರೊಂದಿಗೆ ನಿಕಟವಾಗಿದ್ದಾರೆ ಎನ್ನಲಾದ ಇಬ್ಬರು ಕಾಂಗ್ರೆಸ್ ಶಾಸಕರು, ಮಹಾರಾಜ್ ಅವರೊಂದಿಗಿರುವುದು ವೈಯಕ್ತಿಕ ಸಂಬಂಧವೇ ಹೊರತು ರಾಜಕೀಯ ಸಂಬಂಧವಲ್ಲ ಎಂದು ಹೇಳಿಕೆ ನೀಡಿದ್ದಾರೆ.
 
ಮತ್ತೊಬ್ಬ ಕಾಂಗ್ರೆಸ್ ಶಾಸಕ ವಿಧಾನಸಭೆಯ ಉಪಸಭಾ ಪತಿ ಅನುಸೂಯಾ ಪ್ರಸಾದ್ ಮೈಖುರಿ ತಮ್ಮ ಬೆಂಬಲಿಗರೊಂದಿಗೆ ಬಿಜೆಪಿ ಸೇರ್ಪಡೆಯಾಗಲು ಸಿದ್ದತೆ ನಡೆಸಿದ್ದರು. ಆದರೆ, ಇಬ್ಬರು ಕಾಂಗ್ರೆಸ್ ಶಾಸಕರು ತಮ್ಮ ನಿಷ್ಠೆಯನ್ನು ಕಾಂಗ್ರೆಸ್ ಪಕ್ಷಕ್ಕೆ ತೋರಿದ್ದರಿಂದ ಅವರ ಯೋಜನೆ ವಿಫಲವಾಯಿತು ಎಂದು ಕಾಂಗ್ರೆಸ್ ವಕ್ತಾರರು ತಿಳಿಸಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ 

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments