Select Your Language

Notifications

webdunia
webdunia
webdunia
webdunia

ಕೇರಳ ಚುನಾವಣೆ: ಶ್ರೀಶಾಂತ್‌ನನ್ನು ಕಣಕ್ಕಿಳಿಸಲು ಬಿಜೆಪಿ ಪ್ರಯತ್ನ

ಕೇರಳ ಚುನಾವಣೆ: ಶ್ರೀಶಾಂತ್‌ನನ್ನು ಕಣಕ್ಕಿಳಿಸಲು ಬಿಜೆಪಿ ಪ್ರಯತ್ನ
ಕೊಚ್ಚಿ , ಮಂಗಳವಾರ, 22 ಮಾರ್ಚ್ 2016 (17:35 IST)
ಕೇರಳದಲ್ಲಿ ಮುಂದಿನ ತಿಂಗಳು ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ಕ್ರಿಕೆಟಿಗ ಶ್ರೀಶಾಂತ್ ಅವರನ್ನು ಕಣಕ್ಕಿಳಿಸಲು ಬಿಜೆಪಿ ಹವಣಿಸುತ್ತಿದೆ. ಈ ಕುರಿತು ನಾಳೆ ತಮ್ಮ ನಿರ್ಧಾರ ಪ್ರಕಟಿಸುವುದಾಗಿ ಭಾರತದ ಕ್ರಿಕೆಟ್ ತಂಡದ ಮಾಡಿ ವೇಗದ ಬೌಲರ್ ಶ್ರೀಶಾಂತ್ ತಿಳಿಸಿದ್ದಾರೆ. 

ದೆಹಲಿಯಿಂದ ಬಿಜೆಪಿಯ ಹಿರಿಯ ನಾಯಕರು ಫೋನ್ ಕರೆ ಮಾಡಿ ತ್ರಿಪ್ಪುನಿಥುರಾ ವಿಧಾನಸಬಾ ಕ್ಷೇತ್ರದಿಂದ ಕಣಕ್ಕಿಳಿಸಲು ಮನವಿ ಮಾಡಿಕೊಂಡಿದ್ದಾರೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಸದ್ಯದಲ್ಲಿಯೇ ಕೇರಳಕ್ಕೆ ಭೇಟಿ ನೀಡಲಿದ್ದು ಆ ಸಂದರ್ಭದಲ್ಲಿ ಶ್ರೀಶಾಂತ್ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಲಿದ್ದಾರೆ ಎಂದು ಕ್ರಿಕೆಟಿಗನ ಕುಟುಂಬದ ಮೂಲಗಳು ತಿಳಿಸಿವೆ. 
 
ಈ ಕುರಿತು ಕೇರಳ ಬಿಜೆಪಿ ಅಧ್ಯಕ್ಷ ಕುಮ್ಮನಮ್ ರಾಜಶೇಖರನ್ ಅವರನ್ನು ಸಂಪರ್ಕಿಸಲಾಗಿ ಈ ಕುರಿತು ರಾಜ್ಯ ಬಿಜೆಪಿ ನಾಯಕತ್ವಕ್ಕೆ ಯಾವ ಮಾಹಿತಿ ಇಲ್ಲ. ಆದರೆ ಮತ್ತೆರಡು ದಿನಗಳಲ್ಲಿ ಎಲ್ಲವೂ ಸ್ಪಷ್ಟವಾಗಲಿದೆ ಎಂದು ಅವರು ತಿಳಿಸಿದ್ದಾರೆ.
 
ಮ್ಯಾಚ್ ಫಿಕ್ಸಿಂಗ್ ಪ್ರಕರಣದಲ್ಲಿ ನಿರ್ದೋಷಿಯಾಗಿ ಹೊರಬಿದ್ದ ಬಳಿಕ ಮಾಜಿ ಕ್ರಿಕೆಟಿಗ ಶ್ರೀಶಾಂತ್ ನಟನೆಯಲ್ಲಿ ಬ್ಯುಸಿಯಾಗಿದ್ದಾರೆ. ಸದ್ಯ ಅವರು ಪೂಜಾ ಭಟ್ ನಿರ್ಮಾಣದ ಹಿಂದಿ ಸಿನಿಮಾ ಶೂಟಿಂಗ್ ಒಂದರಲ್ಲಿದ್ದಾರೆ.  

Share this Story:

Follow Webdunia kannada