Webdunia - Bharat's app for daily news and videos

Install App

ಲೋಕಸಭಾ ಚುನಾವಣೆಗೆ ತಯಾರಾದ ಬಿಜೆಪಿ

Webdunia
ಶುಕ್ರವಾರ, 30 ಜೂನ್ 2023 (19:25 IST)
ನವದೆಹಲಿ : ವಿರೋಧ ಪಕ್ಷಗಳು ಲೋಕಸಭಾ ಚುನಾವಣೆಯಲ್ಲಿ ಪ್ರಧಾನಿ ಮೋದಿ ಅವರನ್ನು ಸೋಲಿಸಲು ಒಗ್ಗಟ್ಟಿನ ಮಂತ್ರ ಜಪಿಸುತ್ತಿದ್ದರೆ ಇನ್ನೊಂದು ಕಡೆಯಲ್ಲಿ ಬಿಜೆಪಿ ಸಂಘಟನಾ ಅನುಕೂಲಕ್ಕಾಗಿ ಮೂರು ವಲಯಗಳನ್ನಾಗಿ ವಿಂಗಡಿಸಿ ಸಭೆ ನಡೆಸಲು ಮುಂದಾಗಿದೆ.

ಉತ್ತರ, ದಕ್ಷಿಣ ಮತ್ತು ಪೂರ್ವ ವಲಯಗಳನ್ನು ಗುರುತಿಸಲಾಗಿದ್ದು ಈ ಪ್ರದೇಶಗಳ ಪ್ರತ್ಯೇಕ ಸಭೆಗಳು ಜುಲೈ 6, 7 ಮತ್ತು 8 ರಂದು ನಡೆಯಲಿದೆ ಎಂದು ಮೂಲಗಳು ತಿಳಿಸಿವೆ.

ಜಮ್ಮು-ಕಾಶ್ಮೀರ, ಲಡಾಖ್, ಹಿಮಾಚಲ ಪ್ರದೇಶ, ಪಂಜಾಬ್, ಚಂಡೀಗಢ, ರಾಜಸ್ಥಾನ, ಗುಜರಾತ್, ದಮನ್ ದಿಯು-ದಾದ್ರಾ ಮತ್ತು ನಗರ ಹವೇಲಿ, ಮಧ್ಯಪ್ರದೇಶ, ಛತ್ತೀಸ್ಗಢ, ಉತ್ತರ ಪ್ರದೇಶ, ಉತ್ತರಾಖಂಡ, ದೆಹಲಿ ಮತ್ತು ಹರ್ಯಾಣವನ್ನು ಉತ್ತರ ವಲಯದಲ್ಲಿ ಇರಿಸಲಾಗಿದೆ. ಜುಲೈ 7 ರಂದು ದೆಹಲಿಯಲ್ಲಿ ಸಭೆ ನಡೆಸಲು ತೀರ್ಮಾನಿಸಲಾಗಿದೆ.

ಬಿಹಾರ, ಜಾರ್ಖಂಡ್, ಒಡಿಶಾ, ಪಶ್ಚಿಮ ಬಂಗಾಳ, ಅಸ್ಸಾಂ, ಸಿಕ್ಕಿಂ, ಅರುಣಾಚಲ ಪ್ರದೇಶ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ, ಮೇಘಾಲಯ ಮತ್ತು ತ್ರಿಪುರ ರಾಜ್ಯಗಳು ಪೂರ್ವ ವಲಯದಲ್ಲಿದ್ದು ಇದರ ಸಭೆ ಜುಲೈ 6 ರಂದು ಗುವಾಹಟಿಯಲ್ಲಿ ನಡೆಯಲಿದೆ.  

ಕೇರಳ, ತಮಿಳುನಾಡು, ಪುದುಚೇರಿ, ಕರ್ನಾಟಕ, ತೆಲಂಗಾಣ, ಆಂಧ್ರಪ್ರದೇಶ, ಮಹಾರಾಷ್ಟ್ರ, ಮುಂಬೈ, ಗೋವಾ, ಅಂಡಮಾನ್ ಮತ್ತು ನಿಕೋಬಾರ್ ಮತ್ತು ಲಕ್ಷದ್ವೀಪ ದಕ್ಷಿಣ ವಲಯದಲ್ಲಿದ್ದು, ಈ ರಾಜ್ಯಗಳ ಸಭೆ ಜುಲೈ 8 ರಂದು ಹೈದರಾಬಾದ್ನಲ್ಲಿ ನಡೆಯಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Liverpool Univesity: ಯುಕೆಯ ವಿದ್ಯಾಭ್ಯಾಸ ಬೆಂಗಳೂರಿನಲ್ಲಿ ಮಾಡಬೇಕುನ್ನುವವರಿಗೆ Good News

Operation Sindoor ಬಗ್ಗೆ ಅವಹೇಳನಕಾರಿ ಪೋಸ್ಟ್ ಹಾಕಿದ್ದ ಪ್ರೊಪೆಸರ್‌ಗೆ ಬಿಗ್‌ ರಿಲೀಫ್‌

Operation Sindoor ಬಳಿಕ ಮತ್ತೇ ಅಣಕು ಪ್ರದರ್ಶನದಲ್ಲಿ ತೊಡಗಿದ ಭಾರತ, ಇದರ ಅರ್ಥವೇನು

Bantwal Abdul Rahim Case: ಬಿಜೆಪಿ ಶವಗಳ ಮೇಲೆ ರಾಜಕೀಯ ಮಾಡುತ್ತಿದೆ, ದಿನೇಶ್‌ ಗುಂಡೂರಾವ್‌

Abdul Rahim Case: 15 ಮಂದಿಯ ವಿರುದ್ಧ ಬಿತ್ತು ಎಫ್‌ಐಆರ್‌, ಚುರುಕುಗೊಂಡ ತನಿಖೆ

ಮುಂದಿನ ಸುದ್ದಿ
Show comments