Webdunia - Bharat's app for daily news and videos

Install App

ಜೈಲಿನಲ್ಲಿದ್ದುಕೊಂಡು ಆದೇಶ ಹೊರಡಿಸಿದ ಅರವಿಂದ್ ಕೇಜ್ರಿವಾಲ್ ಗೆ ಮತ್ತೊಂದು ಸಂಕಷ್ಟ

Krishnaveni K
ಸೋಮವಾರ, 25 ಮಾರ್ಚ್ 2024 (12:12 IST)
ನವದೆಹಲಿ: ಅಬಕಾರಿ ಅಕ್ರಮ ಪ್ರಕರಣದಲ್ಲಿ ಇಡಿ ಅಧಿಕಾರಿಗಳಿಂದ ಬಂಧಿತರಾಗಿರುವ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಗೆ ಮತ್ತೊಂದು ಸಂಕಷ್ಟ ಎದುರಾಗಿದೆ.

ಬಂಧನಕ್ಕೊಳಗಾಗಿದ್ದರೂ ಕೇಜ್ರಿವಾಲ್ ತಮ್ಮ ಮುಖ್ಯಮಂತ್ರಿ ಹುದ್ದೆಗೆ ರಾಜೀನಾಮೆ ನೀಡಿಲ್ಲ. ಜೈಲಿನಲ್ಲಿದ್ದುಕೊಂಡೇ ರಾಜ್ಯಭಾರ ನಡೆಸುವುದಾಗಿ ಹೇಳಿದ್ದರು. ಇದೀಗ ನಿನ್ನೆಯಷ್ಟೇ ಕೇಜ್ರಿವಾಲ್ ಜೈಲಿನಲ್ಲಿದ್ದುಕೊಂಡೇ ದೆಹಲಿಯ ಕುಡಿಯುವ ನೀರಿನ ಸಮಸ್ಯೆಗೆ ಸಂಬಂಧಿಸಿದಂತೆ ಆದೇಶವೊಂದನ್ನು ಹೊರಡಿಸಿದ್ದರು.

ಅವರ ಆದೇಶವನ್ನು ಆಪ್ ನಾಯಕಿ ಅತಿಶಿ ಪತ್ರಿಕಾಗೋಷ್ಠಿಯಲ್ಲಿ ಓದಿದ್ದರು. ಆದರೆ ಇದೀಗ ಅವರಿಗೆ ಉರುಳಾಗಿದೆ. ಜೈಲಿನಲ್ಲಿದ್ದುಕೊಂಡೇ ಆದೇಶ ನೀಡಿದ್ದನ್ನು ಬಿಜೆಪಿ ಪ್ರಶ್ನಿಸಿದೆ. ಈ ಬಗ್ಗೆ ಈಗ ಇಡಿ ಅಧಿಕಾರಿಗಳು ತನಿಖೆ ನಡೆಸಲು ಮುಂದಾಗಿದ್ದಾರೆ.

‘ಮುಖ್ಯಮಂತ್ರಿಗಳು ಜೈಲಿನಲ್ಲಿರುವಾಗ ಅವರ ಆಹಾರ, ಔಷಧಿಗಳಿಗೇ ಕೋರ್ಟ್ ಅನುಮತಿ ಪಡೆಯಬೇಕು. ಒಂದು ವೇಳೆ ಅವರು ಆದೇಶ ನೀಡಬೇಕಾದರೆ ಮುಖ್ಯಮಂತ್ರಿಗಳ ಕಚೇರಿ ತೆರೆಯಬೇಕು. ಹಾಗಿದ್ದರೆ ಕೇಜ್ರಿವಾಲ್ ಜೈಲಿನಲ್ಲಿರುವಾಗ ಮುಖ್ಯಮಂತ್ರಿಗಳ ಕಚೇರಿ ಬಾಗಿಲನ್ನು ಅನಧಿಕೃತವಾಗಿ ತೆರೆದಿದ್ದು ಯಾರು? ಪ್ರಧಾನ ಕಾರ್ಯದರ್ಶಿಗೆ ಈ ಅಧಿಕಾರವಿರುತ್ತದೆ. ಆದರೆ ಆದೇಶವನ್ನು ಓದಿದವರು ಅತಿಶಿಯವರು. ಅವರಿಗೆ ಯಾರು ಅಧಿಕಾರ ಕೊಟ್ಟರು?’ ಎಂದು ಬಿಜೆಪಿ ಪ್ರಶ್ನಿಸಿದೆ. ಬಿಜೆಪಿಯ ಈ ಆರೋಪವನ್ನು ಗಂಭೀರವಾಗಿ ಪರಿಗಣಿಸಿರುವ ಇಡಿ ಅಧಿಕಾರಿಗಳು ತನಿಖೆಗೆ ಮುಂದಾಗಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೊಲ್ಲಲ್ಪಟ್ಟ ಉಗ್ರರು ಪಾಕ್‌ನವರು ಎಂಬುದಕ್ಕೆ ಪ್ರಮುಖ ಸಾಕ್ಷಿ ಕೊಟ್ಟ ಅಮಿತ್ ಶಾ

ಧರ್ಮಸ್ಥಳ: ಶ್ವಾನ ಪಡೆ ಎಂಟ್ರಿ ಕೊಟ್ಟ ಬೆನ್ನಲ್ಲೇ ಒಂದನೇ ಪಾಯಿಂಟ್ಸ್‌ನ ಹುಡುಕಾಟದಲ್ಲಿ ಮಹತ್ವದ ಬದಲಾವಣೆ

ಅನ್ನದಾತನ ಕಣ್ಣೀರು ಒರೆಸದಿದ್ದರೆ ಒಳಿತಾಗದು: ವಿಜಯೇಂದ್ರ

ವಿಶ್ವ ಹುಲಿ ದಿನ: ದೇಶದಲ್ಲಿ ಅತೀ ಹೆಚ್ಚು ಹುಲಿ ಹೊಂದಿರುವ 2ನೇ ಸ್ಥಾನದಲ್ಲಿ ಕರ್ನಾಟಕ

ಧರ್ಮಸ್ಥಳ: ದೂರುದಾರ ಗುರುತಿಸಿದ ಸ್ಥಳಕ್ಕೆ ಬಂದ ಜೆಸಿಬಿ, ಬಯಲಾಗುತ್ತಾ ರಹಸ್ಯ

ಮುಂದಿನ ಸುದ್ದಿ
Show comments