Webdunia - Bharat's app for daily news and videos

Install App

ವರ್ಷಾಚರಣೆ ಸಂಭ್ರಮ: 200 ಬೃಹತ್ ಮೆರವಣಿಗೆ, 5,000 ಸಾರ್ವಜನಿಕ ಸಭೆ

Webdunia
ಶನಿವಾರ, 23 ಮೇ 2015 (15:43 IST)
ಅಧಿಕಾರಕ್ಕೇರಿ ಒಂದು ವರ್ಷವಾಗುತ್ತಿರುವ ಹಿನ್ನೆಲೆಯಲ್ಲಿ ದೊಡ್ಡ ಮಟ್ಟದಲ್ಲಿ ಸಂಭ್ರಮವನ್ನಾಚರಿಸಲು ಭಾರತೀಯ ಜನತಾ ಪಕ್ಷ ನಿರ್ಧರಿಸಿದೆ.

ವಾರ್ಷಿಕೋತ್ಸವದಲ್ಲಿ ತಾವು ಆಯೋಜಿಸಲು ನಿರ್ಧಸಿರುವ ಕಾರ್ಯಕ್ರಮಗಳ ಕುರಿತು ಪಕ್ಷದ ಕೇಂದ್ರ ಕಚೇರಿಯಲ್ಲಿ  ಮಾಧ್ಯಮಗಳ ಜತೆ ಮಾತನಾಡುತ್ತಿದ್ದ ಕೇಂದ್ರ ರಾಸಾಯನಿಕ ಗೊಬ್ಬರ ಖಾತೆ ಸಚಿವ ಅನಂತಕುಮಾರ್,  ಮೇ 25 ರಂದು ಪ್ರಧಾನಿಯವರು ಮಥುರಾದಲ್ಲಿ ಮೆರವಣಿಗೆಯನ್ನು ನಡೆಸಲಿದ್ದಾರೆ ಮತ್ತು ಮೇ 26 ರಂದು ರೈತರಿಗಾಗಿ ವಾಹಿನಿಯೊಂದನ್ನು  ಉದ್ಘಾಟಿಸಲಿದ್ದಾರೆ ಎಂದಿದ್ದಾರೆ. 
 
ನಂತರ ಮೇ 26 ರಂದು ಹರಿಯಾಣಾದ ಕರ್ನಾಲ್‌ನಲ್ಲಿ  ಪ್ರಧಾನಿ ಮತ್ತೊಂದು ಮೆರವಣಿಗೆಯನ್ನು ಮುನ್ನಡೆಸಲಿದ್ದಾರೆ. 
 
ಮೇ 27 ರಂದು 5 ಗಂಟೆಗೆ ಗುಜರಾತಿನ ಸೂರತ್‌ನಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಲಿರುವ ಪ್ರಧಾನಿ ಮೇ 27 ರಂದು  ಗೋವಾದ ರಾಜಧಾನಿ ಪಣಜಿಯಲ್ಲಿ ನಡೆಯಲಿರುವ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲಿದ್ದಾರೆ. 
 
ಸರಕಾರದ ಒಂದು ವರ್ಷದ ಕಾರ್ಯ ಸಾಧನೆ ಕುರಿತು ಪ್ರಚಾರ ಮಾಡಲು ದೇಶಾದ್ಯಂತ 200 ಬೃಹತ್ ಮೆರವಣಿಗೆ, 5,000 ಸಾರ್ವಜನಿಕ ಸಭೆಗಳನ್ನು ಆಯೋಜಿಸಲಾಗಿದೆ ಎಂದು ಕೇಂದ್ರ ಸಚಿವರು ತಿಳಿಸಿದ್ದಾರೆ. 
 
ಎಲ್ಲ ಕೇಂದ್ರ ಸಚಿವರು, ಸಂಸದರು ದೇಶಾದ್ಯಂತ ಮೆರವಣಿಗೆಗಳನ್ನು ನಡೆಸಿ ತಮ್ಮ ಸರ್ಕಾರದ ಒಂದು ವರ್ಷದ ಸಾಧನೆಯನ್ನು ಗುರುತಿಸುವಂತೆ ಶ್ರಮಿಸಲಿದ್ದಾರೆ.  

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments