Select Your Language

Notifications

webdunia
webdunia
webdunia
webdunia

ಫಲಿತಾಂಶಕ್ಕೂ ಮೊದಲೇ ಸಿಎಂ ಸ್ಥಾನಕ್ಕಾಗಿ ಬಿಜೆಪಿ – ಶಿವಸೇನೆ ನಡುವೆ ಕಿತ್ತಾಟ

ಫಲಿತಾಂಶಕ್ಕೂ ಮೊದಲೇ ಸಿಎಂ ಸ್ಥಾನಕ್ಕಾಗಿ ಬಿಜೆಪಿ – ಶಿವಸೇನೆ ನಡುವೆ ಕಿತ್ತಾಟ
ಮಹಾರಾಷ್ಟ್ರ , ಗುರುವಾರ, 24 ಅಕ್ಟೋಬರ್ 2019 (11:57 IST)
ಮಹಾರಾಷ್ಟ್ರ : ಮಹಾರಾಷ್ಟ್ರದ ವಿಧಾನಸಭಾ ಚುನಾವಣೆಯ ಮತ ಏಣಿಕೆಯ ಕಾರ್ಯ ನಡೆಯುತ್ತಿದ್ದು, ಇದರಲ್ಲಿ ಬಿಜೆಪಿ – ಶಿವಸೇನೆ ಮತ್ತೊಮ್ಮೆ ಗೆಲುವು ಸಾಧಿಸುವುದು ಪಕ್ಕಾ ಎಂಬುದಾಗಿ ತಿಳಿದುಬಂದಿದೆ.




ಇದರ ನಡುವೆ ಇದೀಗ ಸಿಎಂ ಸ್ಥಾನಕ್ಕೆ ಶಿವಸೇನೆ ಪಟ್ಟು ಹಿಡಿದಿದೆ ಎನ್ನಲಾಗಿದೆ. ಕಳೆದ ಬಾರಿ ಬಿಜೆಪಿಗೆ ಸಿಎಂ ಸ್ಥಾನ ನೀಡಿದ ಹಿನ್ನಲೆಯಲ್ಲಿ ಈ ಬಾರಿ ತಮಗೆ ಸಿಎಂ ಸ್ಥಾನ ನೀಡಬೇಕೆಂದು ಶಿವಸೇನೆ ಬೇಡಿಕೆ ಇಟ್ಟಿದ್ದು, ಶಿವಸೇನೆ ಮುಖ್ಯಸ್ಥ ಉದ್ಧವ್ ಠಾಕ್ರೆ ಅವರ ಪುತ್ರ ಆದಿತ್ಯ ಠಾಕ್ರೆ ಅವರನ್ನು ಸಿಎಂ ಮಾಡಲು ಚಿಂತನೆ ನಡೆಸಿದ್ದಾರೆ ಎನ್ನಲಾಗಿದೆ.


ಆದರೆ ಬಿಜೆಪಿ ಸಿಎಂ ಸ್ಥಾನ ಬಿಟ್ಟುಕೊಡಲು ಹಿಂದೇಟು ಹಾಕಿದ್ದು, ಈ ವಿಚಾರಕ್ಕೆ ಬಿಜೆಪಿ – ಶಿವಸೇನೆ ನಡುವೆ ಕಿತ್ತಾಟ ಶುರುವಾಗಲಿದೆ ಎನ್ನಲಾಗಿದೆ. 


Share this Story:

Follow Webdunia kannada

ಮುಂದಿನ ಸುದ್ದಿ

ಬೆಂಗಳೂರಿನ ಐಟಿ ಕಚೇರಿಗೆ ಬಾಂಬ್ ಬೆದರಿಕೆ