Webdunia - Bharat's app for daily news and videos

Install App

ಮಹಾರಾಷ್ಟ್ರ ಮುಖ್ಯಮಂತ್ರಿ ಮೇಲೆ ಮಿತ್ರಪಕ್ಷ ಶಿವಸೇನೆಯ ಪ್ರಹಾರ

Webdunia
ಶುಕ್ರವಾರ, 30 ಜನವರಿ 2015 (18:06 IST)
ತನ್ನ ಪಕ್ಷದ ಮುಖವಾಣಿ ಸಾಮ್ನಾದಲ್ಲಿ ಶಿವಸೇನೆ ಬಿಜೆಪಿ ಮುಖ್ಯಮಂತ್ರಿಯನ್ನು ತರಾಟೆಗೆ ತೆಗೆದುಕೊಂಡಿದ್ದು ಬೇರ್ಪಟ್ಟು ಮತ್ತೆ ಒಂದಾಗಿರುವ ಪಕ್ಷಗಳ ನಡುವೆ ಎಲ್ಲವೂ ಸರಿಯಾಗಿಲ್ಲ ಎಂಬ ಅನುಮಾನವನ್ನು ಹುಟ್ಟುಹಾಕಿದೆ. ಮಹಾರಾಷ್ಟ್ರ ಪ್ರಥಮ ಬಾರಿಗೆ ವಿದರ್ಭ ಮೂಲದ ಮುಖ್ಯಮಂತ್ರಿ ಮತ್ತು ಹಣಕಾಸು ಸಚಿವರನ್ನು ಪಡೆದುಕೊಂಡಿದೆ. ಆದರೆ ವಿದರ್ಭದಲ್ಲಿ ರೈತರ ಆತ್ಮಹತ್ಯೆ  ಈ ಹಿಂದಿನಂತೆ ಮುಂದುವರೆದಿದೆ ಎಂದು ಸಾಮ್ನಾದಲ್ಲಿ ಆರೋಪಿಸಲಾಗಿದೆ.
 
ಕಳೆದ ವಾರ ಸಹ ಬಿಜೆಪಿಯ ಮೇಲೆ ಪ್ರಹಾರ ನಡೆಸಿದ್ದ  ಸೇನಾ ವರಿಷ್ಠ  ಉದ್ಧವ್ ಠಾಕ್ರೆ  ಸಂಸತ್ತಿನಲ್ಲಿ ಬಹುಮತಗಳಿಸಿರುವ ನಂತರವೂ ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡುವ 370 ನೇ ವಿಧಿಯನ್ನು ಬಿಜೆಪಿ ಏಕೆ ಹಿಂಪಡೆದುಕೊಂಡಿಲ್ಲ ಎಂದು ಪ್ರಶ್ನಿಸಿದ್ದರು. ಜಮ್ಮು ಕಾಶ್ಮೀರಲ್ಲಿ  ಸರಕಾರ ರಚಿಸುವ ಉದ್ದೇಶದಿಂದ  ಮೈತ್ರಿಕೂಟ ರಚಿಸಿಕೊಳ್ಳಲು ಬಿಜೆಪಿ ಹೆಣಗಾಡುತ್ತಿದ್ದಾಗ ಅವರು ಈ ಮಾತುಗಳನ್ನಾಡಿದ್ದರು. 
 
ಮಹಾರಾಷ್ಟ್ರಕ್ಕೆ ಶಿವಸೇನೆ ಅತ್ಯಗತ್ಯ.  ಸೇನೆ ಇಲ್ಲದಿದ್ದರೆ ಮಹಾರಾಷ್ಟ್ರ ಅಸ್ಥಿರಗೊಳ್ಳುತ್ತದೆ. ನಾವು ಶಿವಸೈನಿಕರು ಎಂದು ಠಾಕ್ರೆ ಹೇಳಿದ್ದಾರೆ. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments