Webdunia - Bharat's app for daily news and videos

Install App

ಬಿಜೆಪಿ ದೇಶದ ಜನತೆಯನ್ನು ಮೂರ್ಖರನ್ನಾಗಿಸುವುದು ಬಿಡಬೇಕು: ಶಾಸಕ ರಶೀದ್

Webdunia
ಸೋಮವಾರ, 29 ಜೂನ್ 2015 (20:29 IST)
ಜಮ್ಮು ಕಾಶ್ಮಿರದ 370ನೇ ವಿಧಿಯನ್ನು ರದ್ದುಗೊಳಿಸುವುದಾಗಿ ಚುನಾವಣೆಯಲ್ಲಿ ಘೋಷಿಸಿದ್ದ ಬಿಜೆಪಿ ನಂತರ ಮೌನವಾಗಿದೆ. ದೇಶದ ಜನತೆಯನ್ನು ಮೂರ್ಖರನ್ನಾಗಿಸುವುದು ಬಿಜೆಪಿ ಬಿಡಬೇಕು ಎಂದು ಶಾಸಕ ಶೇಖ್ ಅಬ್ದುಲ್ ರಶೀದ್ ಕೋರಿದ್ದಾರೆ.    
 
ಕಳೆದ ಒಂದು ವರ್ಷದ ಅಧಿಕಾರವಧಿಯಲ್ಲಿ ನರೇಂದ್ರ ಮೋದಿ ನೇತೃತ್ವದ ಸರಕಾರ ಕೆಟ್ಟ ಪ್ರದರ್ಶನ ನೀಡಿದೆ. ಪಕ್ಷದ ಇಮೇಜ್ ಪುನಶ್ಚೇತನಗೊಳಿಸುವುದು ಅಗತ್ಯವಾಗಿದೆ ಎಂದು ಹೇಳಿದ್ದಾರೆ. 
 
ಏಕ್ ಪ್ರಧಾನ ಏಕ್ ನಿಶಾನ್, 370ನೇ ವಿಧಿ ರದ್ದು, ಎಲ್ಲಾ ಸಮುದಾಯದವರಿಗೆ ಒಂದೇ ನಾಗರಿಕ ಡ್ರೆಸ್ ಕೋಡ್ ಜಾರಿಗೆ ತರುವುದಾಗಿ ಹೇಳಿದ್ದ ಬಿಜೆಪಿ ಸರಕಾರ, ಅಧಿಕಾರಕ್ಕೆ ಬಂದ ನಂತರ ಎಲ್ಲವನ್ನು ಮರೆತು ಜನರನ್ನು ಮೂರ್ಖರನ್ನಾಗಿಸಿದೆ ಎಂದರು.  
 
ಯಾವುದೇ ಸರಕಾರ ಚುನಾವಣೆ ಪ್ರಚಾರದಲ್ಲಿ ಘೋಷಿಸಿದ ಘೋಷಣೆಗಳನ್ನು ಜಾರಿಗೆ ತರುವ ಧೈರ್ಯ ತೋರುವುದಿಲ್ಲ ಎಂದರು.
 
ಕೇಂದ್ರ ಸಚಿವ ಜಿತೇಂದರ್ ಸಿಂಗ್  ಮಾತನಾಡಿ ಶ್ಯಾಮ್ ಪ್ರಸಾದ್ ಮುಖರ್ಜಿಯವರ ರಾಷ್ಟ್ರೀಯತೆಯ ಸಿದ್ಧಾಂತದೊಂದಿಗೆ ಬಿಜೆಪಿ ಯಾವತ್ತೂ ರಾಜಿ ಮಾಡಿಕೊಳ್ಳುವುದಿಲ್ಲ ಎಂದು ನೀಡಿದ ಹೇಳಿಕೆಗೆ  ಉತ್ತರ ಕಾಶ್ಮಿರದ ಕುಪ್ವಾರಾ ಜಿಲ್ಲೆಯ ಲಾನ್‌ಗೇಟ್ ವಿಧಾನಸಭೆ ಕ್ಷೇತ್ರದ ಶಾಸಕರಾದ ರಶೀದ್ ಪ್ರತಿಕ್ರಿಯೆ ನೀಡಿದ್ದಾರೆ. 
 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments