Webdunia - Bharat's app for daily news and videos

Install App

ಆರೆಸ್ಸೆಸ್ ಕಾರ್ಯಕರ್ತನ ಹತ್ಯೆ:ಎಡಪಕ್ಷಗಳ ವಿರುದ್ಧ ಬಿಜೆಪಿ ವಾಗ್ದಾಳಿ

Webdunia
ಮಂಗಳವಾರ, 16 ಫೆಬ್ರವರಿ 2016 (17:53 IST)
ಕೇರಳದಲ್ಲಿ 27 ವರ್ಷ ವಯಸ್ಸಿನ ಆರೆಸ್ಸೆಸ್ ಕಾರ್ಯಕರ್ತನ ಹತ್ಯೆಗೈದಿರುವ ಘಟನೆ ನೋಡಿದಲ್ಲಿ ರಾಜ್ಯದಲ್ಲಿ ಹೆಚ್ಚುತ್ತಿರುವ ಆರೆಸ್ಸೆಸ್ ಪ್ರಭಾವದಿಂದ ಎಡಪಕ್ಷಗಳು ಆತಂಕಗೊಂಡು, ರಾಜಕೀಯ ಹತ್ಯೆ ನಡೆಸಿ ತುಳಿಯುವ ಷಡ್ಯಂತ್ರ ನಡೆಸಿವೆ ಎನ್ನುವುದು ಸಾಬೀತಾಗುತ್ತದೆ ಎಂದು ಬಿಜೆಪಿ ವಾಗ್ದಾಳಿ ನಡೆಸಿದೆ.
 
ಬಿಜೆಪಿ ರಾಷ್ಟ್ರೀಯ ವಕ್ತಾರ ಎಂ.ಜೆ.ಅಕ್ಬರ್ ಮಾತನಾಡಿ, ರಾಜ್ಯದಲ್ಲಿ ಹೆಚ್ಚುತ್ತಿರುವ ರಾಜಕೀಯ ಹಿಂಸಾಚಾರ ಮತ್ತು ಹತ್ಯೆಗಳ ಬಗ್ಗೆ ಹೇಳಿಕೆ ನೀಡಲು ಕೂಡಾ ಎಡಪಕ್ಷಗಳು ಅಸಮರ್ಥವಾಗಿವೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
 
ಕೇರಳದಲ್ಲಿ ಎಡಪಕ್ಷಗಳು ನಿರಂತರವಾಗಿ ಹತ್ಯೆ ಮತ್ತು ಹಿಂಸಾಚಾರದಲ್ಲಿ ತೊಡಗಿವೆ. ಸುಮಾರು 200 ಬಿಜೆಪಿ ಕಾರ್ಯಕರ್ತರ ಹತ್ಯೆಯಾಗಿದೆ. ಎಡಪಕ್ಷಗಳಿಗೆ ಜನತೆಯ ಮುಂದೆ ಉತ್ತರಿಸಲು ಸಾಧ್ಯವಾಗುತ್ತಿಲ್ಲ ಎಂದು ಲೋಕಸಭೆ ಸಂಸದ, ಬಿಜೆಪಿ ವಕ್ತಾರ ಅಕ್ಬರ್ ಕಿಡಿಕಾರಿದ್ದಾರೆ.
 
ರಾಜ್ಯದಲ್ಲಿ ಹೆಚ್ಚುತ್ತಿರುವ ಬಿಜೆಪಿ ಜನಪ್ರಿಯತೆಯಿಂದ ತತ್ತರಿಸಿದ ಎಡಪಕ್ಷಗಳು, ಬಿಜೆಪಿ ಕಾರ್ಯಕರ್ತರ ಹತ್ಯೆ, ಹಿಂಸಾಚಾರದಂತಹ ಕೃತ್ಯದಲ್ಲಿ ತೊಡಗಿದೆ. ಆದರೆ, ಮುಂಬರುವ ಚುನಾವಣೆಯಲ್ಲಿ ಜನತೆ ತಕ್ಕ ಪಾಠ ಕಲಿಸಲಿದ್ದಾರೆ ಎಂದರು.
 
ಕಣ್ಣೂರು ಜಿಲ್ಲೆಯ ಪಾಪಿನೇಸರಿ ಗ್ರಾಮದಲ್ಲಿ ವೃದ್ಧ ತಂದೆ ತಾಯಿ ಎದುರಿಗೆ 27 ವರ್ಷ ವಯಸ್ಸಿನ ಆರೆಸ್ಸೆಸ್ ಕಾರ್ಯಕರ್ತನನ್ನು ಹತ್ಯೆ ಮಾಡಲಾಗಿದೆ.

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments