Webdunia - Bharat's app for daily news and videos

Install App

ಬಿಜೆಪಿಯಿಂದ ಶ್ರೀರಾಮಚಂದ್ರನೇ ಕಣಕ್ಕೆ!

Krishnaveni K
ಸೋಮವಾರ, 25 ಮಾರ್ಚ್ 2024 (10:20 IST)
ನವದೆಹಲಿ: ಈ ಬಾರಿ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಕೆಲವು ಅಚ್ಚರಿಯ ಅಭ್ಯರ್ಥಿಗಳಿಗೆ ಮಣೆ ಹಾಕಿದೆ. ಆ ಪೈಕಿ ಸಾಕ್ಷಾತ್ ಶ್ರೀರಾಮಚಂದ್ರನೂ ಸೇರಿದ್ದಾನೆ!

ಈ ಶ್ರೀರಾಮ ಚಂದ್ರ ಬೇರೆ ಯಾರೂ ಅಲ್ಲ. ದೂರದರ್ಶನದಲ್ಲಿ ಪ್ರಸಾರವಾಗುತ್ತಿದ್ದ ರಾಮಾಯಣ ಧಾರವಾಹಿಯಲ್ಲಿ ಶ್ರೀರಾಮನ ಪಾತ್ರ ಮಾಡುತ್ತಿದ್ದ ಅರುಣ್ ಗೋವಿಲ್. ರಾಮಾಯಣ ಧಾರವಾಹಿ ವೀಕ್ಷಿಸುತ್ತಿದ್ದ ಎಷ್ಟೋ ಮಂದಿ ಅರುಣ್ ಅವರಲ್ಲೇ ಶ್ರೀರಾಮನನ್ನು ಕಾಣುತ್ತಿದ್ದರು.

ಅದಕ್ಕೆ ಇತ್ತೀಚೆಗೆ ಅಯೋಧ್ಯೆಯಲ್ಲಿ ರಾಮಮಂದಿರ ಲೋಕಾರ್ಪಣೆ ಸಂದರ್ಭದಲ್ಲಿ ಅವರಿಗೆ ಸಿಕ್ಕ ಅಭೂತಪೂರ್ವ ಸ್ವಾಗತವೇ ಸಾಕ್ಷಿ. ಅರುಣ್ ಗೋವಿಲ್ ಅಯೋಧ‍್ಯೆಗೆ ಬಂದಾಗ ಜನ ಅವರಿಗೆ ನಿಜವಾಗಿಯೂ ರಾಮನೇ ಬಂದನೇನೋ ಎಂಬಂತೆ ಪುಷ್ಪ ಮಳೆ ಸುರಿಸಿ ಸ್ವಾಗತ ಕೋರಿದ್ದರು.

ಇದೀಗ ಅದೇ ಅರುಣ್ ಗೋವಿಲ್ ಗೆ ಬಿಜೆಪಿ ಉತ್ತರ ಪ್ರದೇಶದ ಮೀರತ್ ಲೋಕಸಭಾ ಕ್ಷೇತ್ರದಿಂದ ಟಿಕೆಟ್ ನೀಡಿದೆ. ಕಿರುತೆರೆ ಮತ್ತು ಹಿರಿತೆರೆಯಲ್ಲಿ ಹಲವು ಪಾತ್ರ ಮಾಡಿ ಮಿಂಚಿದ್ದ ಅರುಣ್ ಗೋವಿಲ್ ಇತ್ತೀಚೆಗೆ ಆರ್ಟಿಕಲ್ 370 ಸಿನಿಮಾದಲ್ಲಿ ಪ್ರಧಾನಿ ಮೋದಿ ಪಾತ್ರ ಮಾಡಿದ್ದರು. ಇದೀಗ ಬಿಜೆಪಿಯಿಂದಲೇ ಚುನಾವಣೆಗೆ ಸ್ಪರ್ದಿಸುತ್ತಿರುವುದು ವಿಶೇಷ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments