Webdunia - Bharat's app for daily news and videos

Install App

ಉಪಚುನಾವಣೆ: ಮೆಹಬೂಬಾ ಮುಕ್ತಿ ಪರ ಬಿಜೆಪಿ ಪ್ರಚಾರ

Webdunia
ಶನಿವಾರ, 4 ಜೂನ್ 2016 (13:42 IST)
ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಪಿಡಿಪಿ ನೇತೃತ್ವದ ಸರ್ಕಾರದ ಭಾಗವಾಗಿರುವ ಬಿಜೆಪಿ ಉಪಚುನಾವಣೆಯಲ್ಲಿ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ ಪರ ಪ್ರಚಾರ ನಡೆಸಲಿದೆ. 
 
ಅನಂತನಾಗ್ ಕ್ಷೇತ್ರದಲ್ಲಿ ಮೆಹಬೂಬಾ ಪರ ತಾವು ಪ್ರಚಾರ ನಡೆಸುತ್ತಿರುವುದಾಗಿ ಬಿಜೆಪಿ ಹಿರಿಯ ನಾಯಕ, ಕಾಶ್ಮೀರದಿಂದ ಮೇಲ್ಮನೆಗೆ ಆಯ್ಕೆಯಾಗಿರುವ ಬಿಜೆಪಿಯ ಏಕೈಕ ಸದಸ್ಯ ಸೋಫಿ ಯುಸೂಫ್ ತಿಳಿಸಿದ್ದಾರೆ. 
 
ಈ ಬೆಳವಣಿಗೆ, ಹದಗೆಟ್ಟಂತೆ ತೋರುತ್ತಿದ್ದ ಮಿತ್ರ ಪಕ್ಷಗಳಾದ ಪಿಡಿಪಿ ಮತ್ತು ಬಿಜೆಪಿ ನಡುವಿನ ಸಂಬಂಧ ಈಗ ತಿಳಿಯಾಗುತ್ತಿರುವ ಲಕ್ಷಣಗಳನ್ನು ತೋರುತ್ತಿದೆ. ಜೂನ್ 22 ರಂದು ಜಮ್ಮು ಮತ್ತು ಕಾಶ್ಮೀರದಲ್ಲಿ ಉಪಚುನಾವಣೆ ನಡೆಯಲಿದೆ. 
 
ಅನಂತನಾಗ್ ವಿಧಾನಸಭಾ ಕ್ಷೇತ್ರಕ್ಕಾಗಿ ನಡೆಯುತ್ತಿರುವ ಉಪ ಚುನಾವಣೆಗೆ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ ಬುಧವಾರ ನಾಮಪತ್ರ ಸಲ್ಲಿಸಿದ್ದಾರೆ. 
 
ದಕ್ಷಿಣ ಕಾಶ್ಮೀರ ಸಾಂಪ್ರದಾಯಿಕವಾಗಿ ಪಿಡಿಪಿಗೆ ಭದ್ರಕೋಟೆಯಾಗಿದ್ದು ಮೆಹಬೂಬಾ ನಿರಾಯಾಸವಾಗಿ ಗೆಲುವನ್ನು ಸಾಧಿಸಲಿದ್ದಾರೆ ಎಂದು ಪಿಡಿಪಿ ಹಿರಿಯ ನಾಯಕ, ಮಾಜಿ ಶಾಸಕ ಅಜಾಜ್ ಮಿರ್ ಹೇಳಿದ್ದಾರೆ.

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.  

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಾದ್ರಾ ವಿರುದ್ಧ ಚಾರ್ಜ್‌ಶೀಟ್‌, ವಾದ್ರಾ, ಗಾಂಧಿ ಕುಟುಂಬಕ್ಕೆ ಕೆಟ್ಟ ಹೆಸರು ತರುವ ಪ್ರಯತ್ನ: ಮಲ್ಲಿಕಾರ್ಜುನ ಖರ್ಗೆ

ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿಯಾಗಿ ವಿಭು ಬಖ್ರು ಪ್ರಮಾಣ ವಚನ ಸ್ವೀಕಾರ

ಸಾಧನಾ ಸಮಾವೇಶ ನಡೆಸುತ್ತಿರುವ ಸಿದ್ದರಾಮಯ್ಯಗೆ 17 ಪ್ರಶ್ನೆ ಹಾಕಿದ ಆರ್ ಅಶೋಕ್

ನಾಲ್ವಡಿ ಕೃಷ್ಣರಾಜ ಒಡೆಯರ್ ನಂತರ ಮೈಸೂರನ್ನು ಅಭಿವೃದ್ಧಿಸಿದ್ದೆ ಸಿದ್ದರಾಮಯ್ಯ: ಎಚ್ ಸಿ ಮಹದೇವಪ್ಪ

Viral video: ಕಂಪನಿ ಎಚ್ ಆರ್ ಜೊತೆ ಅಫೇರ್: ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಸಿಇಒ

ಮುಂದಿನ ಸುದ್ದಿ
Show comments