Webdunia - Bharat's app for daily news and videos

Install App

ಉ.ಪ್ರದೇಶ ಚುನಾವಣೆಯಲ್ಲಿ ಅಭಿವೃದ್ಧಿಗಾಗಿ ಮತ, ರಾಮಮಂದಿರ ನಿರ್ಮಾಣಕ್ಕಲ್ಲ: ರಾಜನಾಥ್ ಸಿಂಗ್

Webdunia
ಶನಿವಾರ, 28 ಮೇ 2016 (10:05 IST)
ಮುಂದಿನ ವರ್ಷದಲ್ಲಿ ನಡೆಯಲಿರುವ ಉತ್ತರಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಅಭಿವೃದ್ಧಿಗಾಗಿ ಮತ ಕೇಳುತ್ತೇವೆಯೇ ಹೊರತು ರಾಮಮಂದಿರ ನಿರ್ಮಾಣ ವಿಷಯ ಕುರಿತಂತಲ್ಲ ಎಂದು ಗೃಹ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ.
 
ರಾಮ ಮಂದಿರ ನಿರ್ಮಾಣ ರಾಜಕೀಯ ವಿಷಯವಲ್ಲ ಸಾಂಸ್ಕ್ರತಿಕ ವಿಷಯವಾಗಿದೆ. ಇದೀಗ ರಾಮಮಂದಿರ ನಿರ್ಮಾಣ ವಿಷಯ ನ್ಯಾಯಾಲಯದಲ್ಲಿರುವುದರಿಂದ ಸುಪ್ರೀಂಕೋರ್ಟ್ ತೀರ್ಪಿಗಾಗಿ ನಿರೀಕ್ಷಿಸುತ್ತಿದ್ದೇವೆ ಎಂದು ತಿಳಿಸಿದ್ದಾರೆ.
 
ದೇಶದ ಬಹುದೊಡ್ಡ ರಾಜ್ಯವಾದ ಉತ್ತರಪ್ರದೇಶ ಅಭಿವೃದ್ಧಿಗಾಗಿ ಬಿಜೆಪಿಗೆ ಮತ ನೀಡುವಂತೆ ಜನತೆಯನ್ನು ಓಲೈಸಲಾಗುವುದು ಎಂದು ಹೇಳಿದ್ದಾರೆ.
 
ಕೋಮುವಾದ ಉತ್ತರಪ್ರದೇಶದಲ್ಲಿ ಬಿಜೆಪಿಗೆ ಲಾಭವಾಗಲಿದೆಯೇ ಎನ್ನುವ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಸಿಂಗ್, ಬಿಜೆಪಿ ಯಾವತ್ತೂ ಕೋಮುವಾದದ ರಾಜಕಾರಣ ಮಾಡಿಲ್ಲ. ಕೋಮುವಾದ ದೇಶಕ್ಕೆ ಅಪಾಯಕಾರಿ ಎನ್ನುವುದನ್ನು ನಾವು ನಂಬುತ್ತೇವೆ ಎಂದು ತಿಳಿಸಿದ್ದಾರೆ.
 
ಪ್ರಧಾನಿ ಮೋದಿ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿರುವುದರಿಂದ ಉತ್ತರಪ್ರದೇಶ ಚುನಾವಣೆಯಲ್ಲಿ ಬಿಜೆಪಿ ಪಕ್ಷ ಭಾರಿ ಬಹುಮತದಿಂದ ಅಧಿಕಾರದ ಗದ್ದುಗೆ ಏರುತ್ತದೆ ಎನ್ನುವ ವಿಶ್ವಾಸವಿರುವುದಾಗಿ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ.

ವೆಬ್‌ದುನಿಯಾ ಮೊಬೈಲ್ ಆಪ್ (ಡೌನ್‌ಲೋಡ್) ಮಾಡಿಕೊಂಡು ತಾಜಾ ಸುದ್ದಿಗಳನ್ನು ಪಡೆಯಿರಿ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದಿಢೀರ್‌ ಪೊಲೀಸ್ ಠಾಣೆಗೆ ಹಾಜರಾದ ಮಾಜಿ ಸಂಸದ ಅನಂತ್‌ ಕುಮಾರ್‌ ಹೆಗಡೆ

ಮುಂಬೈ: ಎಂಎನ್‌ಎಸ್ ಮುಖಂಡನ ಪುತ್ರನ ದೌಲತ್ತಿಗೆ ಸರಿಯಾಗಿ ಮಾಡಿದ ಖಾಕಿ

ಟ್ರಾಫಿಕ್‌ ಜಾಮ್‌ಗೆ ಸುಸ್ತು: ಖಾಸಗಿ ಮೇಲ್ಸೇತುವೆ ನಿರ್ಮಿಸಲು ಮುಂದಾದ ಪ್ರೆಸ್ಟೀಜ್ ಗ್ರೂಪ್‌

ದ.ಕನ್ನಡದಲ್ಲಿ ಹೆಚ್ಚುತ್ತಿರುವ ಮಲೇರಿಯಾ ಪ್ರಕರಣ: ವಲಸೆ ಕಾರ್ಮಿಕರ ಮೇಲೆ ಹೆಚ್ಚಿನ ನಿಗಾ

ಪಹಲ್ಗಾಮ್‌ ದಾಳಿ, ಪಾಕ್‌ ಉಗ್ರರಿಗೆ ಆಶ್ರಯ ನೀಡಿದ್ದ ಇಬ್ಬರಿಗೆ ಬಿಗ್‌ ಶಾಕ್‌

ಮುಂದಿನ ಸುದ್ದಿ
Show comments