Webdunia - Bharat's app for daily news and videos

Install App

ಬಾಲರಾಮನ ಶಿಲೆಗೆ ಕಟ್ಟಿದ್ದ ದಂಡದ ಹಣವನ್ನು ಶ್ರೀನಿವಾಸ್ ಗೆ ನೀಡಲಿರುವ ಬಿಜೆಪಿ

Krishnaveni K
ಶನಿವಾರ, 27 ಜನವರಿ 2024 (09:40 IST)
ಬೆಂಗಳೂರು: ಅಯೋಧ್ಯೆಯಲ್ಲಿ ಬಾಲರಾಮನ ಮೂರ್ತಿ ಮಾಡಲು ಕೃಷ್ಣ ಶಿಲೆ ನೀಡಲು ನೀಡಿದ್ದ ಶ್ರೀನಿವಾಸ್ ಅವರಿಗೆ ರಾಜ್ಯ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ವಿಧಿಸಿದ್ದ ದಂಡದ ಮೊತ್ತವನ್ನು ಬಿಜೆಪಿ ಭರಿಸಲಿದೆ ಎಂದು ಸಂಸದ ಪ್ರತಾಪ್ ಸಿಂಹ ಹೇಳಿದ್ದಾರೆ.

ಅಯೋಧ್ಯೆಯಲ್ಲಿ ಜನವರಿ 22 ರಂದು ಬಾಲ ರಾಮನ ಮೂರ್ತಿ ಪ್ರತಿಷ್ಠಾಪಿಸಲಾಗಿದೆ. ಈ ಮೂರ್ತಿಯನ್ನು ಕೆತ್ತಿದ್ದು ಮೈಸೂರಿನ ಅರುಣ್ ಯೋಗಿರಾಜ್. ಮೂರ್ತಿ ನಿರ್ಮಿಸಲು ಕೃಷ್ಣ ಶಿಲೆ ನೀಡಿದ್ದು ಜಮೀನಿನ ಮಾಲಿಕ ರಾಮದಾಸ್. ಆದರೆ ಈ ನೆಲ ಸಮತಟ್ಟು ಮಾಡಲು ಗುತ್ತಿಗೆದಾರ ಶ್ರೀನಿವಾಸ್ ನಟರಾಜ್ ಅವರಿಗೆ ಗುತ್ತಿಗೆ ನೀಡಿದ್ದಾರೆ.

2022 ರಲ್ಲಿ ಜಮೀನಿನ 10 ಅಡಿ ಆಳದಲ್ಲಿ ದೊರೆತ ಶಿಲೆಯನ್ನು ಮೂರು ಭಾಗಗಳಾಗಿ ಮೇಲೆತ್ತಲಾಗಿತ್ತು. ಆದರೆ ಅಯೋಧ್ಯೆಗೆ ಶಿಲೆ ಹೋಗುತ್ತದೆ ಎಂಬ ಕಲ್ಪನೆ ಯಾರಿಗೂ ಇರಲಿಲ್ಲ. ಆದರೆ ಜಮೀನಿಂದ ಕಲ್ಲು ಹೊರತೆಗೆದಿದ್ದನ್ನು ಗಮನಿಸಿ ಅಕ್ರಮ ಗಣಿಗಾರಿಕೆ ನಡೆಯುತ್ತಿದೆ ಎಂದು ಭೂ ಮತ್ತು ಗಣಿ ವಿಜ್ಞಾನ ಇಲಾಖೆಗೆ ದೂರು ನೀಡಿದ್ದರು.

ಸ್ಥಳಕ್ಕೆ ಬಂದಿದ್ದ ಅಧಿಕಾರಿಗಳು ಅನುಮತಿಯಿಲ್ಲದೇ ಗಣಿಗಾರಿಕೆ ಮಾಡಬಾರದು ಎಂದು ಶ್ರೀನಿವಾಸ್ ಅವರಿಗೆ 80 ಸಾವಿರ ದಂಡ ವಿಧಿಸಿದ್ದರು. ಇದು ಇತ್ತೀಚೆಗೆ ಭಾರೀ ಸುದ್ದಿಯಾಗಿತ್ತು. ತಮ್ಮ ಹೆಂಡತಿಯ ಒಡವೆ ಅಡವಿಟ್ಟು ದಂಡ ಕಟ್ಟಿದ್ದಾಗಿ ಶ್ರೀನಿವಾಸ್ ಕಣ್ಣೀರು ಹಾಕಿದ್ದರು.

ಇದೀಗ ಆ ಬಗ್ಗೆ ಪ್ರತಿಕ್ರಿಯಿಸಿರುವ ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹ, ಶ್ರೀನಿವಾಸ್ ಕಟ್ಟಿದ್ದ ದಂಡದ ಮೊತ್ತವನ್ನು ಬಿಜೆಪಿ ಅವರಿಗೆ ನೀಡಲಿದೆ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಡೈರಿ ರಾಜಕಾರಣಕ್ಕೆ ಕಾಲಿಟ್ಟ ಡಿಕೆ ಸುರೇಶ್‌: ನಾಮಪತ್ರ ಸಲ್ಲಿಕೆ

Jammu Kashmir: 11 ಸ್ಥಳಗಳ ಮೇಲೆ SIA ದಾಳಿ

ಆರತಕ್ಷತೆ ವೇಳೆ ಮಧುಮಗ ಕುಸಿದುಬಿದ್ದು ಸಾವು: ಮದುವೆ ಮನೆಯಲ್ಲಿ ಸೂತಕದ ಛಾಯೆ

ISRO: 101ನೇ ಉಪಗ್ರಹ ಉಡಾವಣೆಗೆ ಸಜ್ಜಾದ ಇಸ್ರೋ, ಇದರ ವಿಶೇಷ ಹೀಗಿದೆ

Bengaluru International Airport: ಆರಂಭದ ಬಳಿಕ ಮೊದಲ ಬಾರಿ ದಾಖಲೆಯ ಲಾಭ

ಮುಂದಿನ ಸುದ್ದಿ
Show comments