Select Your Language

Notifications

webdunia
webdunia
webdunia
webdunia

ಉ.ಪ್ರದೇಶದಲ್ಲಿ ಬಿಜೆಪಿಯಿಂದ ಉತ್ತಮ ಅಡಳಿತ: ರಾಜನಾಥ್‌ ಸಿಂಗ್ ಭರವಸೆ

ಉ.ಪ್ರದೇಶದಲ್ಲಿ ಬಿಜೆಪಿಯಿಂದ ಉತ್ತಮ ಅಡಳಿತ: ರಾಜನಾಥ್‌ ಸಿಂಗ್ ಭರವಸೆ
ಲಕ್ನೋ , ಭಾನುವಾರ, 25 ಡಿಸೆಂಬರ್ 2016 (11:52 IST)
ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಪಕ್ಷ ಬಹುಮತಗಳಿಸಿ ಅಧಿಕಾರಕ್ಕೆ ಬಂದಲ್ಲಿ ಉತ್ತಮ ಅಡಳಿತ ನೀಡಲಿದೆ ಎಂದು ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಭರವಸೆ ನೀಡಿದ್ದಾರೆ.
 
ಸಮಾಜವಾದಿ ಪಕ್ಷ ಮತ್ತು ಬಹಜನ ಸಮಾಜ ಪಕ್ಷಗಳು ರಾಜ್ಯವನ್ನು ಅಧೋಗತಿಗೆ ತಳ್ಳಿವೆ. ಅಭಿವೃದ್ಧಿಯಲ್ಲಿ ರಾಜ್ಯ ತೀರಾ ಹಿಂದುಳಿಯುವಂತೆ ಮಾಡಿವೆ ಎಂದು ವಿಪಕ್ಷಗಳ ವಿರುದ್ಧ ವಾಗ್ದಾಳಿ ನಡೆಸಿದರು.
 
ಕಳೆದ ನವೆಂಬರ್ 5 ರಂದು ಆರಂಭವಾಗಿದ್ದ ಬಿಜೆಪಿಯ ಪರಿವರ್ತನಾ ದಿವಸ್ ಯಾತ್ರೆಯ ಅಂತಿಮ ದಿನದಂದು ಆಯೋಜಿಸಿದ ಕಾರ್ಯಕ್ರಮದಲ್ಲಿ ಸಿಂಗ್ ಮಾತನಾಡಿದ ಅವರು, ರಾಜ್ಯದ ಜನ ಬದಲಾವಣೆ ಬಯಸಿದ್ದಾರೆ ಎಂದರು.
 
ಉತ್ತರಪ್ರದೇಶದಲ್ಲಿ ಮುಖ್ಯಮಂತ್ರಿ ಅಖಿಲೇಶ್ ಯಾದವ್ ನೇತೃತ್ವದ ಸಮಾಜವಾದಿ ಪಕ್ಷ ಅಧಿಕಾರದಲ್ಲಿದೆ. ಫೆಬ್ರವರಿ ತಿಂಗಳಲ್ಲಿ ವಿಧಾನಸಭೆ ಚುನಾವಣೆಗೆ ದಿನಾಂಕ ನಿಗದಿಯಾಗುವ ಸಾಧ್ಯತೆಗಳಿವೆ ಎಂದು ಮೂಲಗಳು ತಿಳಿಸಿವೆ.
 
ಬಿಜೆಪಿ ಪಕ್ಷದ ಪರಿವರ್ತನಾ ಯಾತ್ರೆಗೆ ರಾಜ್ಯದ ಜನತೆ ಉತ್ತಮವಾಗಿ ಸ್ಪಂದಿಸಿದ್ದಾರೆ. ರಾಜ್ಯದ ಜನತೆಯ ವಿಶ್ವಾಸಕ್ಕೆ ಧಕ್ಕೆ ತರದಂತೆ ಬಿಜೆಪಿ ನಡೆದುಕೊಳ್ಳಲಿದೆ ಎಂದು ಗೃಹ ಸಚಿವ ರಾಜನಾಥ್ ಸಿಂಗ್ ಭರವಸೆ ನೀಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

Share this Story:

Follow Webdunia kannada

ಮುಂದಿನ ಸುದ್ದಿ

ಬಿಸಿಯೂಟದ ಸಾಂಬಾರ್‌ನಲ್ಲಿ ಬಿದ್ದು ಬಾಲಕ ಸಾವು