Webdunia - Bharat's app for daily news and videos

Install App

ಗುಜರಾತ್ ಚುನಾವಣೆಯಲ್ಲಿ ಬಿಜೆಪಿಗೆ ವಿದ್ಯುತ್ ಶಾಕ್: ರಾಹುಲ್ ಗಾಂಧಿ

Webdunia
ಬುಧವಾರ, 1 ನವೆಂಬರ್ 2017 (16:48 IST)
ಗುಜರಾತ್ ವಿಧಾನಸಭೆ ಚುನಾವಣೆ ಕಾವು ದಿನದಿಂದ ದಿನಕ್ಕೆ ಏರುತ್ತಾ ಸಾಗಿದೆ. ಮುಂಬರುವ ಚುನಾವಣೆಯಲ್ಲಿ ಬಿಜೆಪಿಗೆ ವಿದ್ಯುತ್ ಶಾಕ್ ದೊರೆಯಲಿದೆ ಎಂದು ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ಹೇಳಿದ್ದಾರೆ.
ಗುಜರಾತ್ ರಾಜ್ಯದ ಜನತೆಗೆ ಸತ್ಯಗೊತ್ತಾಗಿದ್ದರಿಂದ ಮುಂದಿನ ಚುನಾವಣೆಯಲ್ಲಿ ಬಿಜೆಪಿಗೆ ತಕ್ಕ ಪಾಠ ಕಲಿಸಲಿದ್ದಾರೆ. ಮುಂದಿನ ಸರಕಾರ, ರೈತರ, ಬಡವರ ಮತ್ತು ವ್ಯಾಪಾರಿಗಳ ಸರಕಾರವಾಗಲಿದೆಯೇ ಹೊರತು ಮೋದಿಯ ಕೈಗಾರಿಕೋದ್ಯಮಿಗಳದಲ್ಲ ಎಂದು ಗುಡುಗಿದ್ದಾರೆ. 
 
ವ್ಯವಹಾರದ ವರದಿಗಾಗಿ ಕೇಂದ್ರವನ್ನು ಗೇಲಿ ಮಾಡುತ್ತಿರುವ ಗಾಂಧಿ, ಹಣಕಾಸು ಸಚಿವ ಅರುಣ್ ಜೇಟ್ಲಿಯನ್ನು ಸಣ್ಣ-ಸಮಯದ ರೈತರು ಮತ್ತು ವ್ಯಾಪಾರಿಗಳು ಹೇಗೆ ನೋವನ್ನು ಅನುಭವಿಸುತ್ತಿದ್ದಾರೆ ಎಂದು ಕೇಳಿದಾಗ, ಉನ್ನತ ಕೈಗಾರಿಕೋದ್ಯಮಿಗಳು ಲಾಭಗಳನ್ನು ಪಡೆಯುತ್ತಿದ್ದಾರೆ.
 
ಸಣ್ಣ ರೈತರು, ಮಧ್ಯಮ ವರ್ಗದ ವ್ಯಾಪಾರಿಗಳು ನೋವು ಅನುಭವಿಸುತ್ತಿರುವ ಬಗ್ಗೆ ವಿತ್ತ ಸಚಿವ ಅರುಣ್ ಜೇಟ್ಲಿಯವರಿಗೆ ಕಾಳಜಿಯಿಲ್ಲ. ಬೃಹತ್ ಕೈಗಾರಿಕೋದ್ಯಮಿಗಳು ಲಾಭ ಪಡೆಯುತ್ತಿರುವ ಬಗ್ಗೆ ಹೇಳಿಕೆ ನೀಡುತ್ತಾರೆ ಎಂದು ಲೇವಡಿ ಮಾಡಿದರು. 
 
ದೇಶದ ಬ್ಯಾಂಕ್‌ಗಳಿಗೆ 9 ಸಾವಿರ ಕೋಟಿ ರೂಪಾಯಿ ವಂಚಿಸಿ ವಿಜಯ್ ಮಲ್ಯ ಲಂಡನ್‌ನಲ್ಲಿ ಐಷಾರಾಮಿ ಜೀವನ ಸಾಗಿಸುತ್ತಿದ್ದಾರೆ. ಮೋದಿಯಿಂದ ಏನು ಕ್ರಮಕೈಗೊಳ್ಳಲು ಸಾಧ್ಯವಾಯಿತು ಎಂದು ತಿರುಗೇಟು ನೀಡಿದ್ದಾರೆ.
 
ದೇಶದಲ್ಲಿ 10 ಬೃಹತ್ ಉದ್ಯಮಿಗಳಿದ್ದು, ಆರೋಗ್ಯ, ಶಿಕ್ಷಣ, ವಿದ್ಯುತ್, ನೀರು, ಉತ್ಪಾದನಾ ಕ್ಷೇತ್ರಗಳು ಸೇರಿದಂತೆ ಪ್ರತಿಯೊಂದು ಕ್ಷೇತ್ರದಲ್ಲಿ ಅಡಳಿತ ನಡೆಸುತ್ತಿದ್ದಾರೆ. ಅವರ ಹೆಸರನ್ನು ನಾನು ಹೇಳಲು ಬಯಸುವುದಿಲ್ಲ ಎಂದರು.
 
ಪ್ರಧಾನಿ ಮೋದಿಯವರ ಮೇಕ್ ಇನ್ ಇಂಡಿಯಾ ವಿರುದ್ಧ ವಾಗ್ದಾಳಿ ನಡೆಸಿದ ರಾಹುಲ್, ಭಾರತ ಮತ್ತು ಚೀನಾ ಒಂದೇ ರೀತಿಯ ಜನಸಂಖ್ಯೆಯನ್ನು ಹೊಂದಿದೆ. ಚೀನಾ ಪ್ರತಿವರ್ಷ 50 ಸಾವಿರ ಉದ್ಯೋಗಗಳನ್ನು ಸೃಷ್ಟಿಸುತ್ತಿದೆ. ಆದರೆ,ಭಾರತ ಕೇವಲ 450 ಉದ್ಯೋಗಗಳನ್ನು ಸೃಷ್ಟಿಸುತ್ತಿದೆ ಎಂದು ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಜ್ವಲ್ ರೇವಣ್ಣಗೆ ಶಿಕ್ಷೆಯಾಗಿದ್ದಕ್ಕೆ ರಮ್ಯಾಗೆ ಖುಷಿ

ನಾವು ಬೀದಿಗಿಳಿದರೆ ನಿಮ್ಮನ್ನು ಮನೆಗೆ ಕಳುಹಿಸಲು ನಮಗೆ ಗೊತ್ತಿದೆ:ಎ.ನಾರಾಯಣಸ್ವಾಮಿ

ಧರ್ಮಸ್ಥಳದಲ್ಲಿ ಅಗೆಯುವ ಸ್ಥಳದಲ್ಲಿ ಇವರಿಂದಲೇ ಪೊಲೀಸರಿಗೆ ದೊಡ್ಡ ಸಮಸ್ಯೆ

ನ್ಯಾಯಾಧೀಶರು ತೀರ್ಪು ಪ್ರಕಟಿಸುತ್ತಿದ್ದಂತೇ ಪ್ರಜ್ವಲ್ ರೇವಣ್ಣ ಏನು ಮಾಡಿದ್ರು

ಅತ್ಯಾಚಾರ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣ ವಿರುದ್ಧ ಮಹತ್ವದ ತೀರ್ಪು ಕೊಟ್ಟ ಕೋರ್ಟ್

ಮುಂದಿನ ಸುದ್ದಿ
Show comments