2019ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ರಾಜಸ್ಥಾನದ ಮುಖ್ಯಮಂತ್ರಿ ವಸುಂಧರಾ ರಾಜೆ ಸಿಂಧಿಯಾ ಭವಿಷ್ಯ ನುಡಿದಿದ್ದಾರೆ.
ಅಷ್ಟೇ ಅಲ್ಲದೆ 2018ರಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ರಾಜಸ್ಥಾನದಲ್ಲೂ ಸಹ ಬಿಜೆಪಿ ಪುನಃ ಅಧಿಕಾರವನ್ನು ಗಳಿಸಲಿದೆ ಎಂದು ಅವರು ವಿಶ್ವಾಸವನ್ನು ವ್ಯಕ್ತ ಪಡಿಸಿದ್ದಾರೆ.
ಭಿಲ್ವಾರಾದಲ್ಲಿ ಪಕ್ಷದ ಕಾರ್ಯಕರ್ತರನ್ನುದ್ದೇಶಿಸಿ ಮಾತನ್ನಾಡುತ್ತಿದ್ದ ಅವರು, ನಾನು ಪ್ರತಿ ಜಿಲ್ಲೆಗಳಿಗೆ ಹೋಗಿ ಬಿಜೆಪಿಯ ಕಣ್ಣು ಮತ್ತು ಕಿವಿಯಾಗಿರುವ ಕಾರ್ಯಕರ್ತರೊಂದಿಗೆ ಪ್ರತಿಕ್ರಿಯೆಯನ್ನು ಕೇಳುತ್ತೇನೆ ಎಂದು ಹೇಳಿದ್ದಾರೆ.
ನಾವು ಅಧಿಕಾರಕ್ಕೆ ತಲುಪಲು ಕಾರಣರಾದವರು ಪಕ್ಷದ ಕಾರ್ಯಕರ್ತರೇ. ಆದ್ದರಿಂದ 'ನಿಮ್ಮ ಜಿಲ್ಲೆ, ನಿಮ್ಮ ಸರ್ಕಾರ' ಕಾರ್ಯಕ್ರಮದಡಿ ನಾನು ಪಕ್ಷದ ಕಾರ್ಯಕರ್ತರ ಬಳಿ ಹೋಗಿ ಜಿಲ್ಲೆಯಲ್ಲಿ ಏನು ನಡೆಯುತ್ತಿದೆ ಎಂಬ ಬಗ್ಗೆ ಅವರಿಂದ ಮಾಹಿತಿ ಪಡೆಯುತ್ತೇನೆ. ಮುಂದಿನ ಚುನಾವಣೆಯಲ್ಲಿ ಸಹ ಜಯವನ್ನು ಖಾತ್ರಿ ಪಡಿಸುವುದರತ್ತ ಪಕ್ಷದ ಕಾರ್ಯಕರ್ತರು ಸಜ್ಜಾಗುತ್ತಿದ್ದಾರೆ ಎಂದು ರಾಜೆ ತಿಳಿಸಿದ್ದಾರೆ.
ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ.