Webdunia - Bharat's app for daily news and videos

Install App

ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವಿರುದ್ಧ ದೂರು ದಾಖಲಿಸಿದ ಅಸ್ಸಾಂನ ಬಿಜೆಪಿ ಯುವ ಘಟಕ

Webdunia
ಬುಧವಾರ, 1 ಆಗಸ್ಟ್ 2018 (12:30 IST)
ನವದೆಹಲಿ : ಎನ್‌ಆರ್‌ಸಿ (ರಾಷ್ಟ್ರೀಯ ಪೌರತ್ವ ನೋಂದಣಿ )ಯಿಂದಾಗಿ ನಾಗರಿಕ ಯುದ್ಧ, ರಕ್ತಪಾತವಾಗುತ್ತದೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೇಳಿಕೆ ನೀಡಿರುವ ಕಾರಣ ಇದೀಗ ಅವರ ವಿರುದ್ಧ ದೂರು ದಾಖಲಾಗಿದೆ.


ಎನ್‌ಆರ್‌ಸಿ ಕುರಿತು ಸುದ್ಧಿಗೋಷ್ಠಿ ನಡೆಸಿದ್ದ ಮಮತಾ ಬ್ಯಾನರ್ಜಿ ಅವರು, 'ತಾಯ್ನಾಡಿನಲ್ಲಿಯೇ ನಿರಾಶ್ರಿತರಾಗುವ ದುಃಸ್ಥಿತಿ ಜನರಿಗೆ ಬಂದಿರುವುದು ವಿಪರ್ಯಾಸ, ಕೇಂದ್ರ ಸರ್ಕಾರದ ರಾಷ್ಟ್ರೀಯ ಪೌರತ್ವ ನೋಂದಣಿ ಹಿಂದೆ ಷಡ್ಯಂತ್ರ ಅಡಗಿದೆ' ಎಂದು ಆರೋಪಿಸಿದ್ದರು. ಅಲ್ಲದೇ 'ಕೇಂದ್ರ ಸರ್ಕಾರ ಎನ್‌ಆರ್‌ಸಿ ಅನ್ನು ಅಸ್ತ್ರದಂತೆ ಬಳಸಿಕೊಂಡು ಬಂಗಾಳಿ ಭಾಷಿಕರು, ಬಿಹಾರಿಗಳನ್ನು ಅಸ್ಸಾಂನಿಂದ ಹೊರದಬ್ಬಲು ಷಡ್ಯಂತ್ರ ರೂಪಿಸಿದೆ. ಸರ್ಕಾರದ ಈ ನಿರ್ಧಾರದಿಂದಾಗಿ ಪಶ್ಚಿಮ ಬಂಗಾಳದ ಮೇಲೆ ನೇರ ಪರಿಣಾಮ ಬೀರಲಿದೆ' ಎಂದು ಹೇಳಿದ್ದರು.


ಈ ಹೇಳಿಕೆಯಿಂದ ಆಕ್ರೋಶಗೊಂಡ ಅಸ್ಸಾಂನ ಬಿಜೆಪಿ ಯುವ ಘಟಕ ನಾಹಾರ್‌ಕಟಿಯಾ ಪೊಲೀಸ್ ಠಾಣೆಯಲ್ಲಿ ಮಮತಾ ಬ್ಯಾನರ್ಜಿ ವಿರುದ್ಧ ದೂರು ನೀಡಿದೆ. ಆದರೆ ಇನ್ನೂ ಎಫ್‌ಐಆರ್ ದಾಖಲಾಗಿಲ್ಲ ಎಂಬುದಾಗಿ ತಿಳಿದುಬಂದಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments