Select Your Language

Notifications

webdunia
webdunia
webdunia
webdunia

ನೀರು ಮತ್ತು ನೆತ್ತರು ಜತೆಗೆ ಹರಿಯದು: ಮೋದಿ

Blood and water
ನವದೆಹಲಿ , ಮಂಗಳವಾರ, 27 ಸೆಪ್ಟಂಬರ್ 2016 (14:56 IST)
ಭಾರತದ ಮೇಲೆ ವಿಧ್ವಂಸಕ ಕೃತ್ಯಗಳನ್ನು ನಡೆಸಲು ಭಯೋತ್ಪಾದನಾ ಸಂಘಟನೆಗಳನ್ನು ಪ್ರಚೋದಿಸುವ ಪಾಕಿಸ್ತಾನಕ್ಕೆ ತಕ್ಕ ಪಾಠ ಕಲಿಸಲು ಭಾರತ ನಿರ್ಧರಿಸಿದೆ. ಭಾರತದಿಂದ ಪಾಕಿಸ್ತಾನಕ್ಕೆ ಹರಿಯುತ್ತಿರುವ ನದಿ ನೀರನ್ನು ನಿಲ್ಲಿಸುವ ಮೂಲಕ ಉಗ್ರರ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಡ ಹೇರುವಂತೆ ಮಾಡಲು ಕೇಂದ್ರ ಸರ್ಕಾರ ಚಿಂತನೆ ನಡೆಸಿದೆ.

ಸಿಂಧೂ ನದಿ ನೀರು ಒಪ್ಪಂದ ಪರಿಶೀಲನೆ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದ ಪ್ರಧಾನಿ, ಉರಿ ದಾಳಿಯಲ್ಲಿ ನಮ್ಮ 18 ಸೈನಿಕರ ಬಲಿದಾನ ಎಂದು ಮರೆಯಲಾಗದ್ದು, ರಕ್ತ ಮತ್ತು ನೀರು ಒಟ್ಟಿಗೆ ಹರಿಯಲು ಸಾಧ್ಯವಿಲ್ಲ ಎಂದು ಗುಡುಗಿದ್ದಾರೆ.
 
ಸೌಹಾರ್ದತೆಯ ದೃಷ್ಟಿಯಿಂದ 56 ವರ್ಷಗಳ ಹಿಂದೆ ಪಾಕಿಸ್ತಾನಕ್ಕೆ ನೀರು ಬಿಡುವ ಒಪ್ಪಂದಕ್ಕೆ ಭಾರತ ಸಹಿ ಮಾಡಿಕೊಂಡಿತ್ತು. ಆದರೆ ಸೌಹಾರ್ದತೆಯನ್ನು ಮರೆತು ಭಾರತದಲ್ಲಿ ರಕ್ತಪಾತ ನಡೆಸಲು ಕುಮ್ಮಕ್ಕು ನೀಡುತ್ತಿರುವ ಪಾಕಿಸ್ತಾನಕ್ಕೆ ಈ ಮೂಲಕ ಪಾಠ ಕಲಿಸಲು ಭಾರತ ನಿರ್ಧರಿಸಿದೆ.
 
ಸಿಂಧೂ ನದಿ ನೀರು ಹಂಚಿಕೆ ಕುರಿತಂತೆ ಭಾರತ ಹಾಗೂ ಪಾಕಿಸ್ತಾನ ದೇಶಗಳ ಮಧ್ಯೆ 1960ರಲ್ಲಿ ಒಪ್ಪಂದವಾಗಿತ್ತು. ಒಪ್ಪಂದಕ್ಕೆ ಅಂದಿನ ಪ್ರಧಾನಮಂತ್ರಿ ಜವಾಹರ್ ಲಾಲ್ ನೆಹರು ಹಾಗೂ ಪಾಕಿಸ್ತಾನ ಪ್ರಧಾನಮಂತ್ರಿ ಅಯುಬ್ ಖಾನ್ ಅವರು ಸಹಿ ಮಾಡಿದ್ದರು. 

Share this Story:

Follow Webdunia kannada

ಮುಂದಿನ ಸುದ್ದಿ

ತೀರ್ಪು ಏನೇ ಬಂದ್ರೂ ನೀರು ಬಿಡಲ್ಲ: ಸಿಎಂ ಸಿದ್ದರಾಮಯ್ಯ ಖಡಕ್ ನುಡಿ