Webdunia - Bharat's app for daily news and videos

Install App

ರಾಜಸ್ಥಾನ: ಜಡ್ಜ್ ಚೇಂಬರ್‌ನಲ್ಲಿಯೇ ಗುಂಡಿನ ದಾಳಿ ನಡೆಸಿದ ಆರೋಪಿಗಳು

Webdunia
ಮಂಗಳವಾರ, 2 ಆಗಸ್ಟ್ 2016 (17:35 IST)
ರಾಜಸ್ಥಾನದ ಹನುಮಾನ್‌ಗಢ್ ಜಿಲ್ಲೆಯ ಕೋರ್ಟ್‌ನ ನ್ಯಾಯಮೂರ್ತಿಗಳ ಚೇಂಬರ್‌ನಲ್ಲಿಯೇ ಇಬ್ಬರು ವ್ಯಕ್ತಿಗಳು ಗುಂಡು ಹಾರಿಸಿ  ಒಬ್ಬ ವ್ಯಕ್ತಿಯನ್ನು ಗಾಯಗೊಳಿಸಿದ ಭೀಕರ ಘಟನೆ ವರದಿಯಾಗಿದೆ.
 
ಹನಮಾನಗಢ್ ಕೋರ್ಟ್‌ನಲ್ಲಿ ಕಲಾಪಗಳು ಎಂದಿನಂತೆ ನಡೆಯುತ್ತಿರುವಾಗ, ಕೇಳಿಬಂದ ಗುಂಡಿನ ಶಬ್ದಗಳು ಅಲ್ಲಿಯೇ ಕೆಲಸ ಮಾಡುತ್ತಿದ್ದ ಉದ್ಯೋಗಿಗಳನ್ನು ತಲ್ಲಣಗೊಳಿಸಿವೆ.
 
ಇಬ್ಬರು ವ್ಯಕ್ತಿಗಳು ದೇಶಿಯ ಪಿಸ್ತೂಲ್ ತೆಗೆದುಕೊಂಡು ನ್ಯಾಯಮೂರ್ತಿಗಳ ಚೇಂಬರ್‌ಗೆ ನುಗ್ಗಿ ಹತ್ಯೆ ಪ್ರಕರಣದಲ್ಲಿ ಆರೋಪಿಯಾಗಿದ್ದ ಒಬ್ಬ ವ್ಯಕ್ತಿಯನ್ನು ಗುರಿಯಾಗಿಸಿ ಗುಂಡಿನ ದಾಳಿ ನಡೆಸಿದ್ದಾರೆ. 
 
ಗುಂಡಿನ ಶಬ್ದದಿಂದ ಜಾಗೃತರಾದ ಪೊಲೀಸರು ಗುಂಡಿನ ದಾಳಿ ನಡೆಸಿ ಪರಾರಿಯಾಗುತ್ತಿದ್ದ ಇಬ್ಬರು ಆರೋಪಿಗಳನ್ನು ವಶಕ್ಕೆ ತೆಗೆದುಕೊಂಡಿದ್ದಾರೆ. 
 
ಸ್ಥಳೀಯ ಕಾಂಗ್ರೆಸ್ ನಾಯಕ ಬಲರಾಮ್ ಬಕಾರಿಯಾನನ್ನು ಹತ್ಯೆ ಪ್ರಕರಣದಲ್ಲಿ ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿತ್ತು. ಬಕಾರಿಯಾ ಗೆಳೆಯ ಕೂಡಾ ಕೋರ್ಟ್‌ನಲ್ಲಿ ಉಪಸ್ಥಿತನಿದ್ದ ಎನ್ನಲಾಗಿದೆ. 
 
ಇಬ್ಬರು ವ್ಯಕ್ತಿಗಳಾದ ಧರ್ಮೇಂದ್ರ ಮತ್ತು ಸುಖ್ಬೀರ್ ಅಲಿಯಾ ಮಹಾಂತಾ ತಮ್ಮ ಸಹೋದರನ ಹತ್ಯೆಯ ರೂವಾರಿಯಾದ ಬಲರಾಮನನ್ನು ಹತ್ಯೆ ಮಾಡುವ ಉದ್ದೇಶದಿಂದ ಕೋರ್ಟ್‌ಗೆ ಆಗಮಿಸಿದ್ದಾರೆ. 
 
ಬಲರಾಮ್ ಕೋರ್ಟ್ ಒಳಗೆ ಪ್ರವೇಶಿಸುತ್ತಿದ್ದಂತೆ ಸುಖ್ಬೀರ್ ಗುಂಡಿನ ದಾಳಿ ನಡೆಸಿದ್ದಾನೆ. ಆ ಸಂದರ್ಭದಲ್ಲಿ ಬಲರಾಮ್‌ ಗೆಳೆಯ ಹರೀಶ್ ಸಿಂಗ್ ಅಡ್ಡಬಂದಿದ್ದಾನೆ. ಕೋರ್ಟ್‌ನಲ್ಲಿ ಉಂಟಾದ ಗೊಂದಲದ ಲಾಭ ಪಡೆದು  ಧರ್ಮೇಂದ್ರ ಮತ್ತು ಸುಖ್ಬೀರ್ ಪರಾರಿಯಾಗಲು ಪ್ರಯತ್ನಿಸಿದ್ದಾರೆ. 
 
ಆದರೆ, ಪೊಲೀಸರು ಜನರ ಸಹಾಯದಿಂದ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಲರಾಮ್ ಇಂದು ನೀನು ಬಚಾವ್ ಆಗಿದ್ದೀಯಾ, ಒಂದಲ್ಲಾ ಒಂದು ದಿನ ನಾನು ನಿನ್ನನ್ನು ಕೊಲ್ಲುತ್ತೇನೆ ಎಂದು ಸುಖ್ಬೀರ್ ಗುಡುಗಿದ್ದಾನೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಮ್ಮಲ್ಲಿರುವುದು ಬರೀ 6 ಲಕ್ಷ ಸೈನಿಕರು, ನಾವು ಉಳಿಯುವುದಿಲ್ಲ ಎಂದ ಪಾಕ್‌ನ ಮಾಜಿ ಸೇನಾಧಿಕಾರಿ

Operation Sindoor: ಶಾಲೆ, ಆಸ್ಪತ್ರೆ ಗುರಿಯಾಗಿಸಿ ನಡೆಸಿದ ಪಾಕ್‌ ಮಿಸೈಲ್‌ ದಾಳಿಗೆ ತಕ್ಕ ಉತ್ತರ

ಪಾಕಿಸ್ತಾನದ ಸೇನಾ ಪಡೆಯ ಗುಂಡಿನ ದಾಳಿಗೆ ರಜೌರಿಯ ಹೆಚ್ಚುವರಿ ಜಿಲ್ಲಾಧಿಕಾರಿ ಸಾವು, ಹಲವರಿಗೆ ಗಾಯ

Operation Sindoor: ಪಾಕಿಸ್ತಾನದ ಮಿಲಿಟರಿ ಪೋಸ್ಟ್‌, ಡ್ರೋನ್ ಲಾಂಚ್‌ಪ್ಯಾಡ್‌ ಉಡೀಸ್‌

Operation Sindoor: ಭಾರತ ಏಟಿಗೆ ಪಾಕ್‌ ತತ್ತರ - ಇಸ್ಲಾಮಾಬಾದ್‌ನಲ್ಲಿ ಪೆಟ್ರೋಲ್ ಪಂಪ್‌ಗಳು ಬಂದ್‌

ಮುಂದಿನ ಸುದ್ದಿ
Show comments