Webdunia - Bharat's app for daily news and videos

Install App

ಸಮುದ್ರದಲ್ಲಿ ನಿರ್ಮಾಣವಾಗುತ್ತಿದ್ದ ಅಕ್ರಮ ದರ್ಗಾವನ್ನು ಕೆಡವಿದ ಬಿಎಂಸಿ

Webdunia
ಗುರುವಾರ, 23 ಮಾರ್ಚ್ 2023 (14:07 IST)
ಮುಂಬೈ : ಮಹಾರಾಷ್ಟ್ರದ ನವನಿರ್ಮಾಣ ಸೇನೆ ನಾಯಕ ರಾಜ್ ಠಾಕ್ರೆ ಅಕ್ರಮವಾಗಿ ನಿರ್ಮಿಸಲಾಗುತ್ತಿದ್ದ ದರ್ಗಾದ ಬಗ್ಗೆ ಟ್ವೀಟ್ ಒಂದನ್ನು ಹಂಚಿಕೊಂಡ ಬಳಿಕ ಬೃಹತ್ ಮುಂಬೈ ಮುನ್ಸಿಪಲ್ ಕಾರ್ಪೊರೇಷನ್ ಗುರುವಾರ ಮಾಹಿಮ್ ಕರಾವಳಿ ಪ್ರದೇಶದಲ್ಲಿ ನಿರ್ಮಿಸಲಾಗುತ್ತಿದ್ದ ದರ್ಗಾವನ್ನು ಕೆಡವಿ ಹಾಕಿದೆ.

ರಾಜ್ ಠಾಕ್ರೆ ಅವರು ಮಾಹಿಮ್ ಕರಾವಳಿ ಪ್ರದೇಶದಲ್ಲಿ ಅನಧಿಕೃತವಾಗಿ ದರ್ಗಾವನ್ನು ನಿರ್ಮಿಸಲಾಗುತ್ತಿದೆ ಎಂದು ಆರೋಪಿಸಿ ಡ್ರೋನ್ ಕ್ಯಾಮೆರಾದಲ್ಲಿ ತೆಗೆಯಲಾಗಿದ್ದ ದೃಶ್ಯಗಳನ್ನು ಟ್ವಿಟ್ಟರ್ನಲ್ಲಿ ಹಂಚಿಕೊಂಡಿದ್ದರು. ಠಾಕ್ರೆ ಟ್ವೀಟ್ ಮಾಡಿದ ಕೇವಲ 1 ದಿನದ ಬಳಿಕ ಮುಂಬೈ ನಾಗರಿಕ ಮಂಡಳಿ ಅಕ್ರಮ ದರ್ಗಾವನ್ನು ನೆಲಸಮಗೊಳಿಸುವ ಕಾರ್ಯಾಚರಣೆಗೆ ಮುಂದಾಗಿದೆ.

ರಾಜ್ ಠಾಕ್ರೆ ಮಾಡಿರುವ ಟ್ವೀಟ್ನಲ್ಲಿ, ಮಾಹಿಮ್ನ ಮಗ್ದೂಮ್ ಬಾಬಾ ದರ್ಗಾವನ್ನು ಸಮುದ್ರದಲ್ಲಿ ಅನಧಿಕೃತವಾಗಿ ನಿರ್ಮಾಣ ಮಾಡಲಾಗುತ್ತಿದೆ. 2 ವರ್ಷಗಳ ಹಿಂದೆ ಇಲ್ಲಿ ಏನೂ ಇರಲಿಲ್ಲ. ದರ್ಗಾ ನಿರ್ಮಾಣದ ಕಾರ್ಯಾಚರಣೆ ಹಗಲು ಹೊತ್ತಿನಲ್ಲಿ ನಡೆಯುತ್ತಿದ್ದರೂ ಇದು ಪೊಲೀಸರ ಹಾಗೂ ಪುರಸಭೆಯ ಗಮನಕ್ಕೆ ಬಂದಿಲ್ಲವೇ ಎಂದು ಟೀಕಿಸಿದ್ದರು. 

ಮುಖ್ಯಮಂತ್ರಿ ಏಕನಾಥ್ ಶಿಂಧೆ, ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್, ಮುಂಬೈ ಪೊಲೀಸರಿಗೆ ವಾರ್ನಿಗ್ ನೀಡಿದ ರಾಜ್ ಠಾಕ್ರೆ, ಅನಧಿಕೃತವಾಗಿ ನಿರ್ಮಾಣವಾಗುತ್ತಿರುವ ದರ್ಗಾದ ವಿರುದ್ಧ ತಕ್ಷಣವೇ ಕ್ರಮ ತೆಗೆದುಕೊಳ್ಳಿ. ಈಗಲೇ ಇದನ್ನು ನೆಲಸಮಗೊಳಿಸಿ. ಇಲ್ಲದೇ ಹೋದಲ್ಲಿ ನಾವು ಆ ಪ್ರದೇಶದಲ್ಲಿ ದೊಡ್ಡ ಗಣಪತಿಯ ದೇವಾಲಯವನ್ನು ನಿರ್ಮಿಸುತ್ತೇವೆ ಎಂದು ಎಚ್ಚರಿಕೆ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಂವಿಧಾನದ ಬಗ್ಗೆ ಆರ್ ಎಸ್ಎಸ್ ನ ದತ್ತಾತ್ರೇಯ ಹೊಸಬಾಳೆ ಮಾತು ಒಪ್ಪಲ್ಲ: ಎಚ್ಎಂ ರೇವಣ್ಣ

ರಮೇಶ್ ಜಾರಕಿಹೊಳಿ ಸಿಡಿ ಮಾಡಿದವರು ಯಾರೆಂದು ಹೇಳಿದ ಬಸನಗೌಡ ಪಾಟೀಲ್ ಯತ್ನಾಳ್

ಹಿಂದುಳಿದ ವರ್ಗಗಳ ಕಡೆಗಣನೆಯಿಂದ ಅಧಿಕಾರ ಕಳಕೊಂಡ ಕಾಂಗ್ರೆಸ್: ಭೂಪೇಂದ್ರ ಯಾದವ್

ಸುಹಾಸ್ ಶೆಟ್ಟಿ ಕೇಸ್: ಹಿಂದೂ ಸಂಘಟನೆಗಳ ಅನುಮಾನ ನಿಜವಾಯ್ತು

ಜೆಲ್ಲಿ ಚಾಕಲೇಟ್ ಸೇವಿಸುವ ಮುನ್ನ ಹುಷಾರ್

ಮುಂದಿನ ಸುದ್ದಿ
Show comments