Webdunia - Bharat's app for daily news and videos

Install App

ಡಾ.ಜಿ.ಪರಮೇಶ್ವರ್ ಬೆಂಬಲಿಗರಿಂದ ಪತ್ರಿಕಾ ಕಚೇರಿಯಲ್ಲಿ ದಾಂಧಲೆ

Webdunia
ಗುರುವಾರ, 24 ಜುಲೈ 2014 (09:28 IST)
ಕೆಪಿಸಿಸಿ ಅಧ್ಯಕ್ಷ ಡಾ. ಜಿ. ಪರಮೇಶ್ವರ್ ಅವರ ವಿರುದ್ಧ ಪತ್ರಿಕೆಯೊಂದರಲ್ಲಿ ಲೇಖನ ಪ್ರಕಟವಾಗಿದ್ದಕ್ಕೆ ಅಸಮಾಧಾನಗೊಂಡ ಅವರ ಬೆಂಬಲಿಗರು ಪತ್ರಿಕಾ ಕಚೇರಿಗೆ ನುಗ್ಗಿ  ಗಲಾಟೆ ಮಾಡಿದ ಘಟನೆ ತುಮಕೂರಿನಲ್ಲಿ ನಡೆದಿದೆ.

ರಾಜ್ಯದಲ್ಲಿ ಉಪಮುಖ್ಯಮಂತ್ರಿ ಹುದ್ದೆ ಸೃಷ್ಟಿ ಬೇಡ ಎಂದು ಖರ್ಗೆ ಹೇಳಿದ್ದಾರೆ ಎಂದು ಜುಲೈ 22 ರಂದು ಲೇಖನ ಪ್ರಕಟಿಸಿದ್ದಕ್ಕೆ ಕೋಪಗೊಂಡ ಪರಮೇಶ್ವರ್ ಬೆಂಬಲಿಗರು, ತುಮಕೂರಿನ ಬಿ ಎಚ್ ರಸ್ತೆಯಲ್ಲಿರುವ ಸ್ಥಳೀಯ ದಿನಪತ್ರಿಕೆಯೊಂದರ ಕಚೇರಿಗೆ ಏಕಾಯೇಕಿ ನುಗ್ಗಿ ಸಿಬ್ಬಂದಿಗಳ ಜತೆ ವಾಗ್ವಾದಕ್ಕಿಳಿದಿದ್ದಾರೆ. 
 
ಡಿಸಿಎಂ ಹುದ್ದೆ ಬೇಡ ಎಂದು ಖರ್ಗೆ ನಿಮಗೆ ಹೇಳಿದ್ದಾರೆಯೇ ಎಂದು ಪ್ರಶ್ನಿಸಿ ಸಿಬ್ಬಂದಿಗಳ ಜತೆ ಗಲಾಟೆ ಮಾಡಿದ ಕೆಪಿಸಿಸಿ ಅಧ್ಯಕ್ಷರ ಬೆಂಬಲಿಗರು ಸೆಕ್ಯುರಿಟಿ ಗಾರ್ಡ ಮೇಲೆ ಹಲ್ಲೆ ನಡೆಸಲು ಕೂಡ ಪ್ರಯತ್ನಿಸಿದ್ದಾರೆ  ಎಂದು ತಿಳಿದು ಬಂದಿದೆ.  ಆ ಸಮಯದಲ್ಲಿ ಸಂಪಾದಕರು ಕಚೇರಿಯಲ್ಲಿರಲಿಲ್ಲ.  
 
ಈ ಕುರಿತು ಹೊಸ ಬಡಾವಣೆ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments