ಸಿಪಿಐ ಕಚೇರಿ ಯಲ್ಲಿ ಬಾಂಬ್‌ ಸ್ಫೋಟ!

Webdunia
ಶುಕ್ರವಾರ, 1 ಜುಲೈ 2022 (11:58 IST)
ತಿರುವನಂತಪುರಂ : ಕೇಳರದ ಆಡಳಿತಾರೂಢ ಸಿಪಿಐ(ಎಂ)ನ ರಾಜ್ಯ ಪ್ರಧಾನ ಕಚೇರಿಗೆ ಗುರುವಾರ ತಡರಾತ್ರಿ ಬಾಂಬ್ ಎಸೆದು ಸ್ಫೋಟಿಸಲಾಗಿದೆ.

ಪಕ್ಷದ ಕಚೇರಿಯ ಮುಖ್ಯ ಗೇಟ್ ಮುಂದೆ ಬಾಂಬ್ ಸ್ಫೋಟಗೊಂಡಿದೆ. ಬಾಂಬ್ ಸ್ಫೋಟಗೊಳ್ಳುತ್ತಿದ್ದಂತೆ ಪಕ್ಷದ ಹಿರಿಯ ನಾಯಕರು ಕಚೇರಿ ಬಳಿ ಧಾವಿಸಿದರು. ದಾಳಿಯ ವೇಳೆ ಹಲವು ಸಿಪಿಐ(ಎಂ) ಮುಖಂಡರು ಪಕ್ಷದ ಕಚೇರಿ ಬಳಿಯ ಅಪಾರ್ಟ್ಮೆಂಟ್ನಲ್ಲಿದ್ದರು ಎಂದು ಮೂಲಗಳು ತಿಳಿಸಿವೆ. 

ದ್ವಿಚಕ್ರ ವಾಹನದಲ್ಲಿ ಬಂದ ವ್ಯಕ್ತಿಯೊಬ್ಬ ಬಾಂಬ್ ಎಸೆದು ಪರಾರಿಯಾಗುತ್ತಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಈ ಸಂಬಂಧ ವರದಿಯನ್ನು ಸಲ್ಲಿಸುವ ಸಮಯದಲ್ಲಿ ಪೊಲೀಸರಿಂದ ಯಾವುದೇ ಅಧಿಕೃತ ಹೇಳಿಕೆ ಇರಲಿಲ್ಲ. ಘಟನೆಯಲ್ಲಿ ಯಾವುದೇ ಪ್ರಾಣಹಾನಿಯಾಗಿರುವ ಬಗ್ಗೆ ವರದಿಯಾಗಿಲ್ಲ.

ಕೇರಳದಲ್ಲಿ ಹಿಂಸಾಚಾರವನ್ನು ಪ್ರೋತ್ಸಾಹಿಸುವ ನಾಯಕತ್ವವನ್ನು ಕಾಂಗ್ರೆಸ್ ಹೊಂದಿದೆ. ನಾವು ಪ್ರಜಾಸತ್ತಾತ್ಮಕ ಮತ್ತು ಶಾಂತಿಯುತ ರೀತಿಯಲ್ಲಿ ಪ್ರತಿಭಟನೆ ನಡೆಸುತ್ತೇವೆ ಎಂದು ಸಿಪಿಐ(ಎಂ) ಪಾಲಿಟ್ಬ್ಯುರೊ ಸದಸ್ಯ ಎ.ವಿಜಯರಾಘವನ್ ಹೇಳಿದ್ದಾರೆ.

ಘಟನೆಯ ಅರ್ಧ ಗಂಟೆಯ ನಂತರ ನಗರದಲ್ಲಿ ಸಿಪಿಐ(ಎಂ) ಮತ್ತು ಡಿವೈಎಫ್ಐ ಬೆಂಬಲಿಗರು ಹೆಚ್ಚಿನ ಸಂಖ್ಯೆಯಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿದರು. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕನ್ನಡಿಗರ ರಕ್ಷಣೆಗೆ ಕೇಂದ್ರದ ಜೊತೆ ಮಾತುಕತೆ: ವಿಜಯೇಂದ್ರ

ತನ್ನ ಮಗ ಗೆಲ್ಲಲಿಲ್ಲ ಎಂದು ಪ್ರಜ್ವಲ್ ಅರೆಸ್ಟ್ ಆಗುವಂತೆ ಮಾಡಿದ್ದೇ ಕುಮಾರಸ್ವಾಮಿ: ಕದಲೂರು ಉದಯ್

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಇಸ್ಲಾಂಗಾಗಿ, ಖಮೇನಿ ಸಾಬ್ ಗಾಗಿ ನನ್ನ ಮಕ್ಕಳನ್ನೂ ಯುದ್ಧಕ್ಕೆ ಕಳುಹಿಸುವೆ: ದೆಹಲಿ ಮಹಿಳೆ ಕಣ್ಣೀರು Video

ಮುಂದಿನ ಸುದ್ದಿ
Show comments