Webdunia - Bharat's app for daily news and videos

Install App

ಬಾಂಬ್ ಸ್ಫೋಟದ ಬೆದರಿಕೆ, ಪ್ರಧಾನಿ ಕೊಲ್ಲುವುದಾಗಿ ಕಾಮೆಂಟ್

Webdunia
ಗುರುವಾರ, 10 ಆಗಸ್ಟ್ 2023 (09:36 IST)
ಮುಂಬೈ : ಪುಣೆಯ ವ್ಯಕ್ತಿಯೊಬ್ಬರು ನಡೆಸುತ್ತಿರುವ ಹಿಂದೂ ಧರ್ಮದ ವಿಚಾರಧಾರೆಗಳ ವೆಬ್ಸೈಟ್ನ ಪೋಸ್ಟ್ ಒಂದಕ್ಕೆ ಪ್ರಧಾನಿ ನರೇಂದ್ರ ಮೋದಿಯನ್ನು ಹತ್ಯೆ ಮಾಡುವ ಬೆದರಿಕೆ ಹಾಕಿ ಕಾಮೆಂಟ್ ಮಾಡಲಾಗಿದೆ. ಅಲ್ಲದೇ ಭಾರತದಲ್ಲಿ ಬಾಂಬ್ ಸ್ಫೋಟಿಸುವ ಬೆದರಿಕೆಯನ್ನು ಹಾಕಲಾಗಿದೆ.

ರಾಹುಲ್ ದುಧಾನೆ ಎಂಬವರು ಹಿಂದೂ ಧರ್ಮದ ಬಗ್ಗೆ ವೆಬ್ಸೈಟ್ ನಡೆಸುತ್ತಿದ್ದಾರೆ. ಈ ವೆಬ್ಸೈಟ್ಗೆ ಕಾಮೆಂಟ್ ಪೋಸ್ಟ್ ಮಾಡಿರುವ ಮೊಖೀಮ್ ಎಂಬಾತ ಬೆದರಿಕೆ ಹಾಕಿದ್ದಾನೆ. ವೆಬ್ಸೈಟ್ನ್ನು ದುಧಾನೆ ಪರಿಶೀಲಿಸುವಾಗ ಮೊಖೀಮ್ ಕಾಮೆಂಟ್ನ್ನು ಗಮನಿಸಿದ್ದಾರೆ.

ಕಾಮೆಂಟ್ನಲ್ಲಿ ಭಾರತದಲ್ಲಿ ಗಂಭೀರವಾದ ಬಾಂಬ್ ಸ್ಫೋಟವನ್ನು ನಡೆಸುತ್ತೇನೆ. ಭಯೋತ್ಪಾದಕ ಸಂಘಟನೆಗಳಿಗೆ ಧನಸಹಾಯ ಮಾಡುತ್ತೇನೆ. ಹಿಂದೂ ಧರ್ಮವನ್ನು ನಾಶಪಡಿಸುತ್ತೇನೆ. ಅಲ್ಲದೇ ನರೇಂದ್ರ ಮೋದಿಯವರನ್ನೂ ಕೊಲ್ಲುತ್ತೇನೆ ಎಂದು ಬರೆದಿದ್ದಾನೆ. ಕಾಮೆಂಟ್ ವಿಚಾರ ತಿಳಿಯುತ್ತಿದ್ದಂತೆ ದುಧಾನೆ ಪೊಲೀಸ್ ನಿಯಂತ್ರಣ ಕೊಠಡಿಗೆ ಕರೆ ಮಾಡಿ ಮಾಹಿತಿ ನೀಡಿದ್ದಾರೆ. 
-
ಈ ಬಗ್ಗೆ ಪ್ರಕರಣವನ್ನು ಪೊಲೀಸರು ದಾಖಲಿಸಿಕೊಂಡಿದ್ದಾರೆ. ಆರೋಪಿಯ ಮಾಹಿತಿಗಾಗಿ ತನಿಖೆ ನಡೆಸುತ್ತಿದ್ದೇವೆ. ಐಪಿ ವಿಳಾಸ ವಿದೇಶದ್ದು ಎಂಬ ಶಂಕೆ ಇದೆ. ಈ ಬಗ್ಗೆ ಪರಿಶೀಲಿಸುತ್ತಿದ್ದೇವೆ ಎಂದು ಉಪ ಪೊಲೀಸ್ ಆಯುಕ್ತ ಸುಹೇಲ್ ಶರ್ಮಾ ತಿಳಿಸಿದ್ದಾರೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments