Webdunia - Bharat's app for daily news and videos

Install App

ಶಾಲೆಯಲ್ಲಿ ಬಾಂಬ್ ಸ್ಫೋಟ !

Webdunia
ಭಾನುವಾರ, 18 ಸೆಪ್ಟಂಬರ್ 2022 (11:13 IST)
ಕೋಲ್ಕತ್ತಾ : ತರಗತಿಗಳು ನಡೆಯುತ್ತಿರುವಾಗ ಶಾಲಾ ಕಟ್ಟಡದ ಚಾವಣಿಯ ಮೇಲೆ ಕಚ್ಚಾ ಬಾಂಬ್ ಸ್ಫೋಟಗೊಂಡ ಘಟನೆ ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯಲ್ಲಿ ನಡೆದಿದೆ.

ಪಶ್ಚಿಮಬಂಗಾಳದಲ್ಲಿರುವ ಶಾಲೆಯ ಮೂರು ಅಂತಸ್ತಿನ ಕಟ್ಟಡದ ಮೊದಲ ಎರಡು ಮಹಡಿಯಲ್ಲಿರುವ ಕೊಠಡಿಗಳಲ್ಲಿ ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಇದ್ದರು. ಆದರೆ ಯಾವುದೇ ಪ್ರಾಣಾಹಾನಿ ಸಂಭವಿಸಿಲ್ಲ.

ಸ್ಫೋಟದ ಶಬ್ದ ಕೇಳಿ ಭಯಭೀತರಾದ ವಿದ್ಯಾರ್ಥಿಗಳು ಶಾಲಾ ಕೊಠಡಿಯನ್ನು ತೊರೆದು ಹೊರಗೆ ಬಂದಿದ್ದಾರೆ. ಶಿಕ್ಷಕರು ಶಾಲೆಯ ಛಾವಣಿ ಮೇಲೆ ಬಾಂಬ್ ಸ್ಪೋಟಗೊಂಡಿರುವುದನ್ನು ಕಂಡು ಪೊಲೀಸರಿಗೆ ತಿಳಿಸಿದ್ದಾರೆ.

ಬರಾಕ್ಪುರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಮಾತನಾಡಿದ ಅವರು, ಕಚ್ಚಾ ಬಾಂಬ್ ಸ್ಫೋಟ ಸಂಭವಿಸಿದೆ. ಹತ್ತಿರದ ಕಟ್ಟಡದಿಂದ ಬಾಂಬ್ ಎಸೆದಿರುವುದಾಗಿದೆಯೇ ಅಥವಾ ಅಲ್ಲೇ ಇಟ್ಟು ಏಕಾಏಕಿ ಸ್ಫೋಟಗೊಂಡಿದೆಯೇ ಎಂಬ ಬಗ್ಗೆ ತನಿಖೆ ನಡೆಸಲಾಗುವುದು ಎಂದು ಹೇಳಿದರು. 

ಘಟನೆ ಸಂಬಂಧಿಸಿ ಬಿಜೆಪಿ ಸಂಸದ ಕಿಡಿಕಾರಿದ್ದು, ಮಮತಾ ಬ್ಯಾನರ್ಜಿಯವರ ಆಡಳಿತದಲ್ಲಿ ಶಾಲಾ ಮಕ್ಕಳು ಸುರಕ್ಷಿತವಾಗಿಲ್ಲ. ಪಶ್ಚಿಮ ಬಂಗಾಳದಾದ್ಯಂತ ಮನೆಗಳು ಮತ್ತು ಪಕ್ಷದ ಕಚೇರಿಗಳಲ್ಲಿ ಬಾಂಬ್ಗಳು ಪತ್ತೆಯಾಗಿವೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಪ್ತಾಪ್ತೆ ಮೇಲೆ ನಿರಂತರ ರೇಪ್ ಮಾಡಿ, ಗರ್ಭಪಾತ: ಪುತ್ತೂರಿನ 7 ವರ್ಷಗಳ ಹಿಂದಿನ ಪ್ರಕರಣಕ್ಕೆ ತೀರ್ಪು ಪ್ರಕಟ

ಮತಗಳ್ಳತನ: ರಾಹುಲ್ ನೇತೃತ್ವದಲ್ಲಿ ಆ.5 ರಂದು ಪ್ರತಿಭಟನೆ, ಡಿಕೆ ಶಿವಕುಮಾರ್

ತಮಿಳುನಾಡು ಬಿಜೆಪಿ ಉಪಾಧ್ಯಕ್ಷೆತಾಗಿ ನಟಿ ಖುಷ್ಬು ಸುಂದರ್‌ ಜವಾಬ್ದಾರಿ

ಆರಾಮಾಗಿ ನಡೆದುಕೊಂಡು ಹೋಗುತ್ತಿರುವಾಗಲೇ ಕಟ್ಟಡದಿಂದ ಜಿಗಿದು ವಿದ್ಯಾರ್ಥಿನಿ ಸೂಸೈಡ್‌, ಭಯಾನಕ ವಿಡಿಯೋ

ಅಕ್ಟೋಬರ್‌ನಲ್ಲಿ ಸಿಎಂ ಬದಲಾವಣೆ ಪಕ್ಕಾ, ಖರ್ಗೆ ಸರಿಯಾದ ಸಮಯಕ್ಕೆ ಕಲ್ಲು ಹೊಡೆದಿದ್ದಾರೆ: ಆರ್‌ ಅಶೋಕ್‌

ಮುಂದಿನ ಸುದ್ದಿ
Show comments