Publish Date: Tue, 10 Jan 2023 (07:33 IST)
Updated Date: Tue, 10 Jan 2023 (09:34 IST)
ಗಾಂಧಿನಗರ : ಮಾಸ್ಕೋದಿಂದ ಗೋವಾಕ್ಕೆ ತೆರಳುತ್ತಿದ್ದ ವಿಮಾನವನ್ನು ಜಾಮ್ನಗರ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಲಾಗಿದೆ. ವಿಮಾನದಲ್ಲಿ ಬಾಂಬ್ ಇದೆ ಎಂದು ಭಯೋತ್ಪಾದನಾ ನಿಗ್ರಹ ದಳಗೆ ಬೆದರಿಕೆ ಮೇಲ್ ಬಂದಿರುವ ಹಿನ್ನೆಲೆ ತುರ್ತು ಭೂಸ್ಪರ್ಶ ಮಾಡಲಾಗಿದೆ.
ಬಾಂಬ್ ಇರುವುದರ ಬಗ್ಗೆ ಮಾಹಿತಿ ತಿಳಿದ ಸಿಬ್ಬಂದಿ ತಕ್ಷಣವೇ ಪೈಲಟ್ಗೆ ಮಾಹಿತಿ ತಿಳಿಸಿದ್ದಾರೆ. ಆ ಬಳಿಕ ಗೋವಾಕ್ಕೆ ತೆರಳುತ್ತಿದ ವಿಮಾನವನ್ನು ಗುಜರಾತ್ನ ಜಾಮ್ನಗರದ ವಿಮಾನ ನಿಲ್ದಾಣದಲ್ಲಿ ಫ್ಲೈಟ್ ಲ್ಯಾಂಡ್ ಮಾಡಲಾಗಿತ್ತು.
ಸದ್ಯ ಪೊಲೀಸ್ ಹಿರಿಯ ಅಧಿಕಾರಿಯೊಂದಿಗೆ ಬಾಂಬ್ ನಿಷ್ಕ್ರಿಯ ದಳ ಕೂಡಾ ಜಾಮ್ನಗರದ ವಿಮಾನ ನಿಲ್ದಾಣಕ್ಕೆ ತಲುಪಿ, ವಿಮಾನವನ್ನು ಪರೀಶೋಧನೆ ಮಾಡಿ, 244 ಮಂದಿಯನ್ನು ರಕ್ಷಣೆ ಮಾಡಲಾಗಿದೆ.