Webdunia - Bharat's app for daily news and videos

Install App

ರೇಪ್ ಆರೋಪಿಗೆ ಬಾಂಬೆ ಹೈಕೋರ್ಟ್ ಆದೇಶ

Webdunia
ಮಂಗಳವಾರ, 18 ಅಕ್ಟೋಬರ್ 2022 (09:01 IST)
ಮುಂಬೈ : ಅತ್ಯಾಚಾರ ಪ್ರಕರಣದಲ್ಲಿ ಬಂಧಿತನಾಗಿದ್ದ 26 ವರ್ಷದ ಯುವಕನಿಗೆ ಬಾಂಬೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ.

ಆದರೆ ಆತನಿಗೆ ನಾಪತ್ತೆಯಾಗಿರುವ ಸಂತ್ರಸ್ತ ಯುವತಿಯೊಂದಿಗೆ 1 ವರ್ಷದೊಳಗೆ ಮದುವೆಯಾಗಬೇಕು ಎಂದು ಷರತ್ತು ವಿಧಿಸಿದೆ.

ಹೌದು, ಅತ್ಯಾಚಾರ ಆರೋಪಿ 22 ವರ್ಷದ ಯುವತಿಯೊಂದಿಗೆ ಸಮ್ಮತಿಯ ಸಂಬಂಧದಲ್ಲಿಯೇ ಇದ್ದರು. ಆದರೆ ಆಕೆ ಗರ್ಭಿಣಿಯಾಗಿದ್ದನ್ನು ತಿಳಿದ ಯುವಕ ಬಳಿಕ ಆಕೆಯನ್ನು ನಿರ್ಲಕ್ಷಿಸಲು ಪ್ರಾರಂಭಿಸಿದ್ದ. ಇದರಿಂದ ಬೇಸತ್ತ ಯುವತಿ ಅತ್ಯಾಚಾರ ಹಾಗೂ ವಂಚನೆ ಪ್ರಕರಣವನ್ನು ದಾಖಲಿಸಿದ್ದಳು.

ಯುವತಿ 2020ರ ಫೆಬ್ರವರಿಯಲ್ಲಿ ಯುವಕನ ವಿರುದ್ಧ ಮುಂಬೈ ಪೊಲೀಸರಿಗೆ ದೂರು ನೀಡಿದ್ದಳು.
ಆಕೆ ನೀಡಿದ ದೂರಿನಲ್ಲಿ ಅವರು 2018ರಿಂದ ಸಂಬಂಧ ಹೊಂದಿದ್ದು, ಈ ವಿಚಾರ ತಮ್ಮ ಕುಟುಂಬಗಳಿಗೂ ತಿಳಿದಿತ್ತು. ಯಾವುದೇ ವಿರೋಧವೂ ಇರಲಿಲ್ಲ ಎಂದು ತಿಳಿಸಿದ್ದಳು. ಆಕೆಯ ದೂರಿನನ್ವಯ ಪೊಲೀಸರು ಆರೋಪಿಯನ್ನು ಬಂಧಿಸಿದ್ದರು.
ಯುವತಿ ತಾನು ಗರ್ಭಿಣಿ ಎಂಬುದನ್ನು ತಿಳಿದು, ಅದನ್ನು ಆರೋಪಿಗೆ ತಿಳಿಸಿದ ಬಳಿಕ ಆತ ಅವಳನ್ನು ನಿರ್ಲಕ್ಷಿಸಲು ಪ್ರಾರಂಭಿಸಿದ್ದಾನೆ.

ತನ್ನ ಗರ್ಭಾವಸ್ಥೆಯ ಬಗ್ಗೆ ಕುಟುಂಬದ ಸದಸ್ಯರಿಗೆ ತಿಳಿಸಲು ಇಷ್ಟಪಡದ ಕಾರಣ ಆಕೆ ತನ್ನ ಮನೆಯನ್ನು ತೊರೆದಿದ್ದಳು. 2020ರ ಜನವರಿ 27ರಂದು ಆಕೆ ನಗರದ ಆಸ್ಪತ್ರೆಯಲ್ಲಿ ಮಗುವಿಗೆ ಜನ್ಮವನ್ನೂ ನೀಡಿದ್ದಳು. 

ಬಳಿಕ ಜನವರಿ 30ರಂದು ಸಂತ್ರಸ್ತ ಯುವತಿ ಮಗುವನ್ನು ಕಟ್ಟಡವೊಂದರ ಮುಂದೆ ಬಿಟ್ಟು ಹೋಗಿದ್ದಳು. ಆಕೆ ಮಗುವನ್ನು ತ್ಯಜಿಸಿದಕ್ಕಾಗಿ ಆಕೆಯ ವಿರುದ್ಧ ಪೊಲೀಸರು ಪ್ರತ್ಯೇಕ ಎಫ್ಐಆರ್ ದಾಖಲಿಸಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Caste census report: ಜಾತಿಗಣತಿ ವರದಿ ಹೊರಹಾಕಲು ಹೊರಟಿದ್ದ ಸಿಎಂ ಸಿದ್ದರಾಮಯ್ಯ ಗಪ್ ಚುಪ್ ಆಗಿದ್ದೇಕೆ

ವಕ್ಫ್ ತಿದ್ದುಪಡಿ ಕಾಯಿದೆ ತಂದಿದ್ದಕ್ಕೆ ಥ್ಯಾಂಕ್ಯೂ ಮೋದಿಜಿ ಎಂದು ಪ್ರಧಾನಿ ಭೇಟಿಯಾದ ಮುಸ್ಲಿಮರು: Video

ಕಾಂಗ್ರೆಸ್‌ ಜನಪೀಡಕ ಸರ್ಕಾರ: ಗುಡುಗಿದ ಬಿವೈ ವಿಜಯೇಂದ್ರ

Waqf Bill: ವಕ್ಫ್ ತಿದ್ದುಪಡಿ ಕಾಯ್ದೆಗೆ ಸುಪ್ರೀಂಕೋರ್ಟ್ ಅಂಕುಶ: ತೀರ್ಪಿನಲ್ಲಿ ಹೇಳಿದ್ದೇನು

ನಾವು ಹಾಲಿನ ದರ ಹೆಚ್ಚಳ ಮಾಡಿದ್ದು ರೈತರಿಗೆ ಸಿಗ್ತಿದೆ, ಮೋದಿ ಗ್ಯಾಸ್ ಸಬ್ಸಿಡಿ ರದ್ದು ಮಾಡಿದ್ದು ಯಾರಿಗೆ ಸಿಗ್ತಿದೆ: ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments