Webdunia - Bharat's app for daily news and videos

Install App

ಗಡಿ ವಿಚಾರ : ಶೀಘ್ರವೇ ತಟಸ್ಥ ಸಮಿತಿ ರಚನೆ

Webdunia
ಗುರುವಾರ, 15 ಡಿಸೆಂಬರ್ 2022 (06:24 IST)
ನವದೆಹಲಿ : ಗಡಿ ವಿಚಾರದಲ್ಲಿ ಸುಪ್ರೀಂಕೋರ್ಟ್ ಆದೇಶವರೆಗೂ ಯಾವುದೇ ನಿರ್ಧಾರ ತೆಗೆದುಕೊಳ್ಳಲು ಸಾಧ್ಯವಿಲ್ಲ. ಹೀಗಾಗಿ ಗಡಿ ವಿಚಾರವನ್ನು ಎರಡು ರಾಜ್ಯಗಳು ರಾಜಕೀಯ ಚರ್ಚಾ ವಿಷಯವನ್ನಾಗಿ ಮಾಡಬಾರದು.
 
ಈ ಸಮಸ್ಯೆ ಬಗೆಹರಿಸಲು ಶೀಘ್ರವೇ 6 ಮಂದಿ ಕೇಂದ್ರ ಸಚಿವರು ಇರುವ ತಟಸ್ಥ ಸಮಿತಿ ರಚಿಸಲಾಗುವುದು. ಅಲ್ಲಿಯವರೆಗೂ ನೀವು ಸುಮ್ಮನಿರಿ ಎಂದು ಇಬ್ಬರು ಸಿಎಂಗಳಿಗೆ ಅಮಿತ್ ಶಾ ಸೂಚನೆ ನೀಡಿದ್ದಾರೆ.  ರಾಜಕೀಯ ಭಿನ್ನಾಭಿಪ್ರಾಯ ಏನೇ ಇರಲಿ. ಗಡಿಯಲ್ಲಿ ಶಾಂತಿಯನ್ನು ಸ್ಥಾಪಿಸಬೇಕಿದೆ. ನೀವೆಲ್ಲರೂ ಇದಕ್ಕೆ ಸಹಕರಿಸ್ತೀರಿ ಎಂಬ ವಿಶ್ವಾಸ ನನಗಿದೆ ಎಂದು ಅಮಿತ್ ಶಾ ಹೇಳಿದ್ದಾರೆ.

ಸಭೆಯ ಬಳಿಕ ಬೊಮ್ಮಾಯಿ ಮಾತನಾಡಿ, ಜನವರಿಯಲ್ಲಿ ಕೋರ್ಟ್ನಲ್ಲಿ ವಿಚಾರಣೆಗೆ ಬರಲಿದೆ. ಸಣ್ಣ ಪುಟ್ಟ ವಿಚಾರಗಳ ಸಮಸ್ಯೆಗಳಿದ್ದರೆ ತಟಸ್ಥ ಸಮಿತಿಯಲ್ಲಿ ಚರ್ಚಿಸಿ ಸರಿ ಮಾಡಲು ಸೂಚಿಸಿದ್ದಾರೆ. ಎಲ್ಲಾ ರಾಜಕೀಯ ಪಕ್ಷಗಳಿಗೂ ಅವರು ಮನವಿ ಮಾಡಿದ್ದಾರೆ.

ರಾಜಕೀಯ ಹೊರತಾಗಿ ಒಂದಾಗಿ ಇರುವ ಬಗ್ಗೆ ಹೇಳಿದ್ದಾರೆ. ಗಡಿಯಲ್ಲಿನ ಗಲಭೆ, ಪ್ರತಿಭಟನೆಗಳ ಬಗ್ಗೆ ನಿಗಾ ವಹಿಸಲು ಆಯಾ ರಾಜ್ಯದಲ್ಲಿ ಓರ್ವ ಐಪಿಎಸ್ ಅಧಿಕಾರಿಯನ್ನು ನೇಮಿಸಲು ಹೇಳಿದ್ದಾರೆ ಎಂದು ತಿಳಿಸಿದರು.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments