Webdunia - Bharat's app for daily news and videos

Install App

ಸಂಸತ್ ಕಲಾಪ ರಗಳೆಗೆ ಬಿಜೆಪಿ ಕಾಂಗ್ರೆಸ್ ನೇರ ಹೊಣೆ: ದೇವೇಗೌಡ

Webdunia
ಮಂಗಳವಾರ, 4 ಆಗಸ್ಟ್ 2015 (19:47 IST)
ಮುಂಗಾರು ಅಧಿವೇಶನ ಕಲಾಪ ಅಸ್ಥವ್ಯಸ್ಥವಾಗಲು ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷಗಳೇ ನೇರ ಹೊಣೆ ಎಂದು ಮಾಜಿ ಪ್ರಧಾನಿ ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡ ಗುಡುಗಿದ್ದಾರೆ.
 
ಕಲಾಪವನ್ನು ಬಹಿಷ್ಕರಿಸುವುದರಿಂದ ಅಥವಾ ಅಡ್ಡಿಪಡಿಸುವುದರಿಂದ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ಸಾಧ್ಯವಿಲ್ಲ ಎನ್ನುವುದು ಉಭಯ ಪಕ್ಷಗಳು ಅರಿಯಬೇಕು ಎಂದು ಸಲಹೆ ನೀಡಿದ್ದಾರೆ.
 
ಹಿಂದೆ ಕೂಡಾ ಹಲವಾರು ಬಾರಿ ಸಂಸತ್ ಕಲಾಪಕ್ಕೆ ಅಡ್ಡಿಯಾಗಿರುವುದನ್ನು ನಾವು ನೋಡಿದ್ದೇವೆ. ಕಲಾಪ ಹಾಳುಗೆಡುವುದಕ್ಕೆ ಎರಡು ರಾಷ್ಟ್ರೀಯ ಪಕ್ಷಗಳೇ ನೇರ ಕಾರಣ ಎಂದು ಕಿಡಿಕಾರಿದ್ದಾರೆ.
 
ಲೋಕಸಭೆಯ ಸಭಾಪತಿ ಸುಮಿತ್ರಾ ಮಹಾಜನ್ 25 ಕಾಂಗ್ರೆಸ್ ಸಂಸದರನ್ನು ಅಮಾನತ್ತುಗೊಳಿಸಿರುವ ಬಗ್ಗೆ ನಾನು ಪ್ರತಿಕ್ರಿಯೆ ನೀಡಲು ಹೋಗುವುದಿಲ್ಲ. ಒಂದು ವೇಳೆ ಸಭಾಪತಿಗಳ ನಿರ್ಧಾರಕ್ಕೆ ಯಾವುದೇ ಪಕ್ಷ ಅಗೌರವ ತೋರಿದಲ್ಲಿ ಪ್ರಜಾಪ್ರಭುತ್ವಕ್ಕೆ ನಾಚಿಕೆ ತರುವ ಸಂಗತಿ. ನಾನು ಯಾವತ್ತೂ ಸಭಾಪತಿಗಳಿಗೆ ಅಗೌರವ ತೋರಲು ಬಯಸುವುದಿಲ್ಲ ಎಂದು ಹೇಳಿದ್ದಾರೆ. 
 
ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷಗಳು ಸಂಸತ್ ಕಲಾಪ ಸುಗಮವಾಗಿ ಸಾಗಲು ಅನುಕೂಲ ಮಾಡಿಕೊಡುವುದು ಸೂಕ್ತ ಎನ್ನುವುದು ನನ್ನ ಅಭಿಪ್ರಾಯ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ತಿಳಿಸಿದ್ದಾರೆ.
 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments