Select Your Language

Notifications

webdunia
webdunia
webdunia
webdunia

ಶಾಲೆಗೆ ಹೋಗು ಎಂದಿದ್ದಕ್ಕೆ ಆತ್ಮಹತ್ಯೆ

ಶಾಲೆಗೆ ಹೋಗು ಎಂದಿದ್ದಕ್ಕೆ ಆತ್ಮಹತ್ಯೆ
ಬೆಂಗಳೂರು , ಗುರುವಾರ, 30 ಜೂನ್ 2016 (10:45 IST)
ಶಾಲೆಗೆ ಹೋಗು ಎಂದಿದ್ದಕ್ಕೆ 9ನೇ ತರಗತಿ ಬಾಲಕನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಹೃದಯವಿದ್ರಾವಕ ಘಟನೆ ಬನಶಂಕರಿ 2ನೇ ಹಂತದಲ್ಲಿ ನಡೆದಿದೆ. 

ಮೃತನನ್ನು ವೆಂಕಟೇಶ್ ಎಂಬುವವರ ಪುತ್ರ ಚಂದ್ರಶೇಖರ್ ಎಂದು ಗುರುತಿಸಲಾಗಿದೆ. 
 
ಶಾಲೆಗೆ ಹೋಗಲು ಇಷ್ಟಪಡದ ಬಾಲಕನಿಗೆ ಪೋಷಕರು ಶಾಲೆಗೆ ಹೋಗುವಂತೆ ಬುದ್ಧಿ ಹೇಳಿದ್ದೇ ಘಟನೆಗೆ ಕಾರಣ ಎನ್ನಲಾಗಿದೆ. ಬುಧವಾರ ತಂದೆತಾಯಿ ಕೂಲಿ ಕೆಲಸಕ್ಕೆ ಹೋದ ಬಳಿಕ, ಮನೆಯಲ್ಲಿ ಯಾರೂ ಇಲ್ಲದ ಸಂದರ್ಭ ನೋಡಿಕೊಂಡು ಬಾಲಕ ನೇಣು ಬಿಗಿದುಕೊಂಡು ಸಾವಿಗೆ ಶರಣಾಗಿದ್ದಾನೆ. 
 
ಮೃನ ಪೋಷಕರು ಕೂಲಿ ಕಾರ್ಮಿಕರಾಗಿದ್ದಾರೆ.
 
ಬನಶಂಕರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ತನಿಖೆಯನ್ನು ಕೈಗೊಂಡಿದ್ದಾರೆ. 

Share this Story:

Follow Webdunia kannada

ಮುಂದಿನ ಸುದ್ದಿ

ಅಕ್ಕನ ಮಗಳ ವ್ಯಾಮೋಹ: ಪತ್ನಿಗೆ ಹೆಚ್‌ಐವಿ ರಕ್ತ ಇಂಜೆಕ್ಟ್ ಮಾಡಿದ ವೈದ್ಯ