ನಾಪತ್ತೆಯಾದ ಬಾಲಕ ಫೇಸ್‌ಬುಕ್‌ನಿಂದ ಪತ್ತೆ

Webdunia
ಬುಧವಾರ, 13 ಜುಲೈ 2016 (10:33 IST)
ಸಾಮಾಜಿಕ ಜಾಲತಾಣಗಳು ಯುವಜನಾಂಗದ ದಿಕ್ಕು ತಪ್ಪಿಸುತ್ತಿವೆ ಎಂಬ ಆರೋಪವಿದೆ. ಆದರೆ ಕೆಲವು ದೃಷ್ಟಾಂತಗಳು ಸಾಮಾಜಿಕ ಜಾಲತಾಣಗಳ ಉಪಯುಕ್ತತೆಯನ್ನು ಸಾರಿ ಹೇಳುತ್ತವೆ. ನವದೆಹಲಿಯಲ್ಲಿ ಕಳೆದೊಂದು ವರ್ಷದ ಹಿಂದೆ ನಾಪತ್ತೆಯಾದ ಬಾಲಕನೋರ್ವನನ್ನು ಪತ್ತೆ ಹಚ್ಚಲು ಇದೇ ಸಾಮಾಜಿಕ ಜಾಲತಾಣ ನೆರವಾಗಿದೆ.
ಬರೊಬ್ಬರಿ ಒಂದು ವರ್ಷದ ಹಿಂದೆ ನಾಪತ್ತೆಯಾಗಿದ್ದ ಬಾಲಕ ಸಾಮಾಜಿಕ ಜಾಲತಾಣ ಫೇಸ್‌ಬುಕ್‌ ಮೂಲಕ ಮತ್ತೆ ತನ್ನ ಕುಟುಂಬವನ್ನು ಸೇರುವಂತಾಗಿದೆ. 
 
ಕಳೆದ ವರ್ಷ ಮೇ 9 ರಂದು ಖಜೂರಿ ಖಾಸ್ ನಿವಾಸಿ ರೇಖಾ ದೇವಿ ಮಗ ಟ್ಯೂಷನ್‌ಗೆಂದು ಹೋದವನು ನಾಪತ್ತೆಯಾಗಿದ್ದ. ಎಷ್ಟು ಹುಡುಕಿದರೂ ಆತ ಪತ್ತೆಯಾಗಿರಲಿಲ್ಲ. ಕೊನೆಗೆ ರೇಖಾ ಖಜೂರಿ ಖಾಸ್ ಪೊಲೀಸ್ ಠಾಣೆಯಲ್ಲಿ ಅಪಹರಣ ಪ್ರಕರಣವನ್ನು ದಾಖಲಿಸಿದ್ದರು.
 
ಆದರೆ ಎಷ್ಟು ಹುಡುಕಿದರೂ ಬಾಲಕ ಪತ್ತೆಯಾಗಿರಲಿಲ್ಲ. ಇತ್ತೀಚಿಗೆ ಪೊಲೀಸರಿಗೆ ಫೇಸ್‌ಬುಕ್ ಪ್ರೊಫೈಲ್ ಫೋಟೋವೊಂದು ಬಾಲಕನ ಮುಖಕ್ಕೆ ಹೋಲುತ್ತಿರುವುದು ಕಂಡು ಬಂದಿದೆ. ಆ ಬಾಲಕ ನಾಪತ್ತೆಯಾದ ಹಿರಿಯ ಸಹೋದರ ಪವನ್ ಜತೆ 2015ರ ನವೆಂಬರ್ ತಿಂಗಳಿಂದ ಈ ವರ್ಷ ಎಪ್ರಿಲ್ ತಿಂಗಳವರೆಗೂ ಚಾಟ್ ಮಾಡಿರುವುದು ಸಹ ತನಿಖೆ ವೇಳೆ ಬಯಲಾಗಿದೆ. ಆದರೆ ಆತ ತಾನೆಲ್ಲಿದ್ದೇನೆ ಎಂದು ಮಾತ್ರ ಬಾಯ್ಬಿಟ್ಟಿರಲಿಲ್ಲ.
 
ಸೈಬರ್ ಸೆಕ್ಯೂರಿಟಿ ಸೆಲ್ ಸಹಾಯದೊಂದಿಗೆ ಮಾಹಿತಿ ಕಲೆ ಹಾಕಿದಾಗ ಆತ ಶ್ರೀನಗರದಲ್ಲಿರುವುದು ಪತ್ತೆಯಾಗಿದೆ. 
 
ಕಣಿವೆನಾಡಿನಲ್ಲಿ ಅಕ್ಕಿ ವ್ಯಾಪಾರಿಯ ಜತೆ ಕೆಲಸ ಮಾಡುತ್ತಿದ್ದ ಆತನನ್ನು ಪೊಲೀಸರು ಮರಳಿ ಕರೆ ತಂದಿದ್ದಾರೆ.
ಚೆನ್ನಾಗಿ ಓದುತ್ತಿಲ್ಲವೆಂದು ತಂದೆ ಗದರಿಸಿದ್ದಕ್ಕೆ ಮನೆ ಬಿಟ್ಟು ಹೋಗಿರುವುದಾಗಿ ಬಾಲಕ ಬಾಯ್ಬಿಟ್ಟಿದ್ದಾನೆ. ಮನೆಯಿಂದ ಓಡಿ ಹೋದ ಬಳಿಕ  ಮದುವೆ ಸಮಾರಂಭಗಳಲ್ಲಿ ವೇಟರ್ ಆಗಿ ಕೆಲಸ ಮಾಡುತ್ತಿದ್ದೆ ಎಂದು ಬಾಲಕ ಹೇಳಿದ್ದಾನೆ.
 
ಪ್ರೀತಿಯ ಮಗನ ಅಗಲಿಕೆಯಿಂದ ನೊಂದಿದ್ದ ಕುಟುಂಬವೊಂದು ಈಗ ನಿರಾಳವಾಗಿದೆ.

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪಹಲ್ಗಾಮ್‌ ಭಯೋತ್ಪಾದನಾ ದಾಳಿ: ಎನ್‌ಐಎ ತನಿಖೆಯಲ್ಲಿ ಮಹತ್ವದ ಬೆಳವಣಿಗೆ

ಪಾರ್ಟಿ ಮಾಡುತ್ತಿದ್ದಾಗ ಪೊಲೀಸರ ಎಂಟ್ರಿ, ಹೆದರಿ ನಾಲ್ಕನೇ ಫ್ಲೋರ್‌ನಿಂದ ಹಾರಿದ್ರಾ ಯುವತಿ

ಮಹಿಳೆಯರಿರುವುದು ಗಂಡನ ಜತೆ ಮಲಗುವುದಕ್ಕೆ: ಕೇರಳ ಸಿಪಿಎಂ ಮುಖಂಡನ ವಿವಾದಾತ್ಮಕ ಹೇಳಿಕೆ

ಮೊಟ್ಟೆ ಪ್ರಿಯರೇ ಹುಷಾರ್ : ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಶಾಕಿಂಗ್ ಮಾಹಿತಿ

ಕೌಟುಂಬಿಕ ಕಲಹಕ್ಕೆ ಪತ್ನಿಯನ್ನು ಮುಗಿಸಿ, ತಾನೂ ಆತ್ಮಹತ್ಯೆಗೆ ಶರಣಾದ ಪತಿ

ಮುಂದಿನ ಸುದ್ದಿ
Show comments