Webdunia - Bharat's app for daily news and videos

Install App

ಬಾಲಕನ ಕತ್ತು ಕೊಯ್ದು ಕಾಡಿನಲ್ಲಿ ಬಿಸಾಡಿದ ಗೆಳೆಯರು!

Webdunia
ಶುಕ್ರವಾರ, 24 ಡಿಸೆಂಬರ್ 2021 (08:39 IST)
ದಿಯೋಘರ್ : ಗೆಳೆಯರೊಂದಿಗೆ ಜಗಳವಾಡಿಕೊಂಡ ಪರಿಣಾಮ 14 ವರ್ಷದ ಬಾಲಕನೊಬ್ಬನನ್ನು ಆತನ ಸ್ನೇಹಿತರು ಕತ್ತು ಕೊಯ್ದು, ಕೈಕಾಲುಗಳನ್ನು ಕತ್ತರಿಸಿ ಕೊಂದಿದ್ದಾರೆ.

ನಂತರ ಆತನ ಶವವನ್ನು ಗೋಣಿಚೀಲಗಳಲ್ಲಿ ತುಂಬಿ ಕಾಡಿನಲ್ಲಿ ಎಸೆದಿದ್ದಾರೆ. ಜಾರ್ಖಂಡ್ನ ದಿಯೋಘರ್ ಜಿಲ್ಲೆಯಲ್ಲಿ ಈ ಆಘಾತಕಾರಿ ಘಟನೆ ನಡೆದಿದೆ. ಮೃತ ಬಾಲಕನ ಕುಟುಂಬದವರು ಬುಧವಾರ ಈ ಬಗ್ಗೆ ದೂರು ದಾಖಲಿಸಿದ್ದು, ತಮ್ಮ ಮಗ ಹಿಂದಿನ ರಾತ್ರಿ ನಿಗೂಢವಾಗಿ ನಾಪತ್ತೆಯಾಗಿದ್ದಾನೆ ದೂರು ನೀಡಿದ್ದರು.

ದೂರಿನ ಆಧಾರದಲ್ಲಿ ತನಿಖೆ ನಡೆಸಿದಾಗ 14 ವರ್ಷದ ಬಾಲಕನ ಸ್ನೇಹಿತನನ್ನು ಪೊಲೀಸರು ಬಂಧಿಸಿದ್ದಾರೆ. ಮಂಗಳವಾರ ರಾತ್ರಿ 8.30ರ ಸುಮಾರಿಗೆ ಜಸಿದಿಹ್ ಪೊಲೀಸ್ ಠಾಣೆ ವ್ಯಾಪ್ತಿಯ ರೋಹಿಣಿ ಗ್ರಾಮದ ತನ್ನ ಮನೆಯ ಹೊರಗೆ ಆತನ ಸ್ನೇಹಿತರು ಬಾಲಕನನ್ನು ಭೇಟಿಯಾಗಿದ್ದರು.

ಅಲ್ಲಿಂದ ಆತನನ್ನು ಕರೆದುಕೊಂಡು ಕುಮ್ರಾಬಾದ್ ಸ್ಟೇಷನ್ ರಸ್ತೆಗೆ ಹೋದರು. ಅಲ್ಲಿ 19 ವರ್ಷದ ಇನ್ನೊಬ್ಬ ಸ್ನೇಹಿತ ಅವಿನಾಶ್ನನ್ನೂ ಜೊತೆ ಸೇರಿಸಿಕೊಂಡರು.

ಆ ಮೂವರೂ ಪಳಂಗ ಪಹಾಡ್ ಜಂಗಲ್ ಕಡೆಗೆ ಹೋಗುತ್ತಿದ್ದಾಗ ಅವಿನಾಶ್ ಮತ್ತು ಆ ಬಾಲಕನ ನಡುವೆ ವಾಗ್ವಾದ ನಡೆದಿದೆ. ಇಬ್ಬರ ಜಗಳ ವಿಕೋಪಕ್ಕೆ ತಿರುಗಿದಾಗ ಕೋಪದಿಂದ ಅವಿನಾಶ್ ಚಾಕು ತೆಗೆದು ಆ 14 ವರ್ಷದ ಬಾಲಕನನ್ನು ಇರಿದು ಕತ್ತು ಕೊಯ್ದಿದ್ದಾನೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Indore Raja Raghuvanshi murder: ಇದೊಂದು ಕೆಲಸವಾದ ಮೆಲೆ ಫಸ್ಟ್ ನೈಟ್ ಮಾಡಿಕೊಳ್ಳೋಣ ಎಂದಿದ್ದ ಸೋನಂ

Raghuvanshi Murder Case: ತನಿಖೆಯಲ್ಲಿ ಮಹತ್ವದ ಬೆಳವಣಿಗೆ

Mallikarjun Kharge: 11 ವರ್ಷಗಳ ಮೋದಿಯ ತಪ್ಪುಗಳ ಲೆಕ್ಕ ಕೊಟ್ಟ ಮಲ್ಲಿಕಾರ್ಜುನ ಖರ್ಗೆ

Mangaluru: ಬಾಲ್ಯದ ಕನಸ್ಸಿನಂತೆ ನೌಕಾಪಡೆ ಸೇರಿಕೊಂಡ ಮಂಗಳೂರಿನ ಯುವತಿ

Karnataka Weather: 48 ಗಂಟೆಗಳಲ್ಲಿ ಈ ಭಾಗದಲ್ಲಿ ಭಾರೀ ಮಳೆ, ರೆಡ್ ಅಲರ್ಟ್ ಘೋಷಣೆ

ಮುಂದಿನ ಸುದ್ದಿ
Show comments