Webdunia - Bharat's app for daily news and videos

Install App

ಬಾಲಕನ ಕತ್ತು ಕೊಯ್ದು ಕಾಡಿನಲ್ಲಿ ಬಿಸಾಡಿದ ಗೆಳೆಯರು!

Webdunia
ಶುಕ್ರವಾರ, 24 ಡಿಸೆಂಬರ್ 2021 (08:39 IST)
ದಿಯೋಘರ್ : ಗೆಳೆಯರೊಂದಿಗೆ ಜಗಳವಾಡಿಕೊಂಡ ಪರಿಣಾಮ 14 ವರ್ಷದ ಬಾಲಕನೊಬ್ಬನನ್ನು ಆತನ ಸ್ನೇಹಿತರು ಕತ್ತು ಕೊಯ್ದು, ಕೈಕಾಲುಗಳನ್ನು ಕತ್ತರಿಸಿ ಕೊಂದಿದ್ದಾರೆ.

ನಂತರ ಆತನ ಶವವನ್ನು ಗೋಣಿಚೀಲಗಳಲ್ಲಿ ತುಂಬಿ ಕಾಡಿನಲ್ಲಿ ಎಸೆದಿದ್ದಾರೆ. ಜಾರ್ಖಂಡ್ನ ದಿಯೋಘರ್ ಜಿಲ್ಲೆಯಲ್ಲಿ ಈ ಆಘಾತಕಾರಿ ಘಟನೆ ನಡೆದಿದೆ. ಮೃತ ಬಾಲಕನ ಕುಟುಂಬದವರು ಬುಧವಾರ ಈ ಬಗ್ಗೆ ದೂರು ದಾಖಲಿಸಿದ್ದು, ತಮ್ಮ ಮಗ ಹಿಂದಿನ ರಾತ್ರಿ ನಿಗೂಢವಾಗಿ ನಾಪತ್ತೆಯಾಗಿದ್ದಾನೆ ದೂರು ನೀಡಿದ್ದರು.

ದೂರಿನ ಆಧಾರದಲ್ಲಿ ತನಿಖೆ ನಡೆಸಿದಾಗ 14 ವರ್ಷದ ಬಾಲಕನ ಸ್ನೇಹಿತನನ್ನು ಪೊಲೀಸರು ಬಂಧಿಸಿದ್ದಾರೆ. ಮಂಗಳವಾರ ರಾತ್ರಿ 8.30ರ ಸುಮಾರಿಗೆ ಜಸಿದಿಹ್ ಪೊಲೀಸ್ ಠಾಣೆ ವ್ಯಾಪ್ತಿಯ ರೋಹಿಣಿ ಗ್ರಾಮದ ತನ್ನ ಮನೆಯ ಹೊರಗೆ ಆತನ ಸ್ನೇಹಿತರು ಬಾಲಕನನ್ನು ಭೇಟಿಯಾಗಿದ್ದರು.

ಅಲ್ಲಿಂದ ಆತನನ್ನು ಕರೆದುಕೊಂಡು ಕುಮ್ರಾಬಾದ್ ಸ್ಟೇಷನ್ ರಸ್ತೆಗೆ ಹೋದರು. ಅಲ್ಲಿ 19 ವರ್ಷದ ಇನ್ನೊಬ್ಬ ಸ್ನೇಹಿತ ಅವಿನಾಶ್ನನ್ನೂ ಜೊತೆ ಸೇರಿಸಿಕೊಂಡರು.

ಆ ಮೂವರೂ ಪಳಂಗ ಪಹಾಡ್ ಜಂಗಲ್ ಕಡೆಗೆ ಹೋಗುತ್ತಿದ್ದಾಗ ಅವಿನಾಶ್ ಮತ್ತು ಆ ಬಾಲಕನ ನಡುವೆ ವಾಗ್ವಾದ ನಡೆದಿದೆ. ಇಬ್ಬರ ಜಗಳ ವಿಕೋಪಕ್ಕೆ ತಿರುಗಿದಾಗ ಕೋಪದಿಂದ ಅವಿನಾಶ್ ಚಾಕು ತೆಗೆದು ಆ 14 ವರ್ಷದ ಬಾಲಕನನ್ನು ಇರಿದು ಕತ್ತು ಕೊಯ್ದಿದ್ದಾನೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments