Webdunia - Bharat's app for daily news and videos

Install App

ದಲಿತ ಪದಬಳಕೆಗೆ ಬ್ರೇಕ್; ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂ ಕೋಟ್ ಮೊರೆ ಹೋದ ಕೇಂದ್ರ ಸಚಿವ

Webdunia
ಗುರುವಾರ, 6 ಸೆಪ್ಟಂಬರ್ 2018 (13:45 IST)
ನವದೆಹಲಿ : 'ದಲಿತ' ಎಂಬ ಪದಪ್ರಯೋಗ ಮಾಡದಂತೆ ಮಾಧ್ಯಮಗಳಿಗೆ ಕೇಂದ್ರ ಸರ್ಕಾರ ಕಡಿವಾಣ ಹಾಕಿರುವ ಹಿನ್ನಲೆಯಲ್ಲಿ ಇದೀಗ ಕೇಂದ್ರ ಸಚಿವ ರಾಮದಾಸ್ ಅಠಾವಳೆ ಸುಪ್ರೀಂ ಕೋರ್ಟ್ ಮೊರೆಹೋಗಲು ನಿರ್ಧಾರ ಮಾಡಿದ್ದಾರೆ.


'ದಲಿತ' ಪದದ ಬದಲು ಪರಿಶಿಷ್ಟ ಜಾತಿ ಎಂಬ ಪದಪ್ರಯೋಗ ಮಾಡುವಂತೆ ಸರ್ಕಾರ ಸೂಚಿಸಿತ್ತು. ಪರಿಶಿಷ್ಠ ಜಾತಿ ಎಂಬುದು ಸಾಂವಿಧಾನಿಕ ಪದವಾಗಿದ್ದು, ಪ್ರಮಾಣಪತ್ರ ಮತ್ತು ಇನ್ನಿತರೆ ದಾಖಲೆಗಳಲ್ಲೂ ಅದನ್ನೇ ಬಳಸಿ ಎಂದೂ ಬಾಂಬೆ ಹೈಕೋರ್ಟ್ ನೀಡಿದ ಆದೇಶದ ಮೇರೆಗೆ ಕೇಂದ್ರ ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವಾಲಯ ಈ ಸೂಚನೆ ನೀಡಿತ್ತು.


ಆದರೆ ಈ ಬಗ್ಗೆ ವಿರೋಧ ವ್ಯಕ್ತಪಡಿಸಿದ ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣದ ರಾಜ್ಯ ಸಚಿವ ಅಠಾವಳೆ,’ ನಾವು ಕೋರ್ಟಿನ ನಿರ್ಧಾರಕ್ಕೆ ಗೌರವ ಕೊಡುತ್ತೇವೆ. ನಮ್ಮ ಸಚಿವಾಲಯವೂ ಈ ಪದಬಳಕೆಗೆ ಕಡಿವಾಣ ಹಾಕಿದೆ. ಆದರೆ ದಾಖಲೆಗಳಲ್ಲಿ ಈಗಾಗಲೇ ದಲಿತ ಪದದ ಬದಲು ಪರಿಶಿಷ್ಟ ಜಾತಿ ಎಂಬ ಪದಪ್ರಯೋಗ ಮಾಡಲಾಗುತ್ತಿದೆ. ಮಾಧ್ಯಮಗಳು ಆ ಪದವನ್ನು ಬಳಸದಂತೆ ಕಡಿವಾಣ ಹಾಕುವುದು ಸರಿ ಎಂದು ನನಗನ್ನಿಸುವುದಿಲ್ಲ. ಆದ್ದರಿಂದ ಬಾಂಬೆ ಹೈಕೋರ್ಟ್ ನ ಆದೇಶ ವಿರೋಧಿಸಿ ನಾನು ಸುಪ್ರೀಂ ಕೋರ್ಟ್ ಮೊರೆಹೋಗುತ್ತೇನೆ" ಎಂದು ಹೇಳಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕನ್ನಡ ಮಾತನಾಡಿದ್ದಕ್ಕೆ ಉಪನ್ಯಾಸಕನನ್ನು ಕೆಲಸದಿಂದ ಕಿತ್ತು ಹಾಕಿದ ಆರ್ ವಿ ಕಾಲೇಜು

Mangaluru Rain: ತಗ್ಗು ಪ್ರದೇಶಗಳು ಜಲಾವೃತ, ರಸ್ತೆಯಲ್ಲಿ ನಡೆಯಲು ಪರದಾಡಿದ ಜನರು, Video

ಏರ್‌ ಇಂಡಿಯಾ ವಿಮಾನ ದುರಂತ: ಕೊನೆಯ ಕ್ಷಣದ ವಿಡಿಯೋ ಮಾಡಿದ ಬಾಲಕನೇ ಪ್ರಮುಖ ಸಾಕ್ಷಿ

ಏರ್‌ ಇಂಡಿಯಾ ವಿಮಾನ ದುರಂತ: ಕೇಂದ್ರದಿಂದ ಪರಿಹಾರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

ಪದ್ಮಶ್ರೀ ಸತ್ಯನಾರಾಯಣ ಬೇಲೇರಿಯ ಕೃಷಿ ಸಾಧನೆ ಕೇರಳ ಪಠ್ಯ ಪುಸ್ತಕದಲ್ಲಿ

ಮುಂದಿನ ಸುದ್ದಿ
Show comments