'ಮಹಾ' ಮಳೆಗೆ ಕುಸಿದ ಸೇತುವೆ: ಎರಡು ಬಸ್ ಸೇರಿದಂತೆ 10ಕ್ಕೂ ಹೆಚ್ಚು ವಾಹನ ಕೊಚ್ಚಿ ಹೋದ ಶಂಕೆ

Webdunia
ಬುಧವಾರ, 3 ಆಗಸ್ಟ್ 2016 (11:03 IST)
ಮಹಾರಾಷ್ಟ್ರದ ರಾಯ್‌ಗಡ್ ಜಿಲ್ಲೆಯ ಮಹಾದ್ ನಗರದಿಂದ 5 ಕೀಲೋಮೀಟರ್ ಅಂತರದಲ್ಲಿ ಭಾರಿ ದುರಂತ ಸಂಭವಿಸಿದ್ದು ಹೆದ್ದಾರಿ ಸೇತುವೆ ಕುಸಿದು ಕನಿಷ್ಠ 22 ರಿಂದ 25 ಮಂದಿ ಮಂದಿ ನಾಪತ್ತೆಯಾಗಿರುವ ಶಂಕೆ ವ್ಯಕ್ತವಾಗಿದೆ. ದಕ್ಷಿಣ ಮುಂಬೈನಿಂದ 170ಕೀಲೋಮೀಟರ್ ದೂರದಲ್ಲಿ ಈ ಅವಘಡ ನಡೆದಿದೆ.


ಭಾರಿ ಮಳೆಯಿಂದ ಅಬ್ಬರಿಸಿ ಸುರಿಯುತ್ತಿರುವ ಮಳೆಗೆ ಸಾವಿತ್ರಿ ನದಿ ಅಪಾಯ ಮಟ್ಟ ಮೀರಿ ನಡೆಯುತ್ತಿದ್ದು ಮುಂಬೈ -ಗೋವಾ ರಾಷ್ಟ್ರೀಯ ಹೆದ್ದಾರಿಯಲ್ಲಿರುವ ಬ್ರಿಟಿಷ್ ಕಾಲದಲ್ಲಿ ಕಟ್ಟಿದ್ದ ಸೇತುವೆ 80% ಕುಸಿದು ಹೋಗಿದೆ. ಮಂಗಳವಾರ- ಬುಧವಾರದ ನಡುವಿನ ರಾತ್ರಿ 2 ಗಂಟೆಗೆ ಈ ದುರ್ಘಟನೆ ನಡೆದಿದೆ. ಸೇತುವೆ ಕುಸಿತದಿಂದಾಗಿ 2 ಸರ್ಕಾರಿ ಬಸ್‌ಗಳು, ಹಲವು ಕಾರ್‌ಗಳು ಸೇರಿದಂತೆ 10ಕ್ಕೂ ಹೆಚ್ಚು ವಾಹನಗಳು ನದಿಪಾಲಾಗಿರುವ ಶಂಕೆ ವ್ಯಕ್ತವಾಗಿದ್ದು 22 ರಿಂದ 25 ಜನರ ಸುಳಿವು ಸಿಗುತ್ತಿಲ್ಲ.

ರತ್ನಗಿರಿ ಮತ್ತು ಚಿಪ್ಲುನ್‌ನಿಂದ ಹೊರಟ ಮಹಾರಾಷ್ಟ್ರ ಸರ್ಕಾರಿ ಬಸ್‍ಗಳೆರಡು ನಾಪತ್ತೆಯಾಗಿದ್ದು, ಈ ಬಸ್‍ಗಳು ಸೇತುವೆ ಕುಸಿತದಿಂದ ಕೊಚ್ಚಿಹೋಗಿರಬಹುದು ಎಂದು ಹೇಳಲಾಗುತ್ತಿದೆ.

 ಸ್ಥಳಕ್ಕೆ ಎನ್‍ಡಿಆರ್‍ಎಫ್‌ನ ಎರಡು ಪಡೆ ದೌಡಾಯಿಸಿದೆದ್ದು ಹೆಲಿಕಾಫ್ಟರ್ ಮೂಲಕ ರಕ್ಷಣಾ ಕಾರ್ಯಾಚರಣೆಯನ್ನು ನಡೆಸಲಾಗುತ್ತಿದೆ.

ಸೇತುವೆ ಕುಸಿದಿರೋದ್ರಿಂದ ಹೆದ್ದಾರಿಯಲ್ಲಿ ಟ್ರಾಫಿಕ್ ಉಂಟಾಗಿದ್ದು, ಮುಂಬೈ-ಗೋವಾ ಸಂಚಾರ ಅಸ್ತವ್ಯಸ್ತಗೊಂಡಿದೆ.

ಪ್ರವಾಹಕ್ಕೆ ಸೇತುವೆ ಕುಸಿದ ಪರಿಣಾಮ ಎರಡು ಸರ್ಕಾರಿ ಬಸ್ ಗಳು ಕೊಚ್ಚಿ ಹೋದ ಘಟನೆ ಮುಂಬೈ- ಗೋವಾ ಹೆದ್ದಾರಿಯಲ್ಲಿ ನಡೆದಿದೆ.

ಸ್ವತಃ ಮಹಾ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಮೇಲುಸ್ತುವಾರಿ ವಹಿಸಿ ಕಾರ್ಯಾಚರಣೆ ಕುರಿತು ಅಧಿಕಾರಿಗಳೊಂದಿಗೆ ಚರ್ಚಿಸುತ್ತಿದ್ದಾರೆ. ಘಟನೆಯ ಬಗ್ಗೆ ಕಳವಳ ವ್ಯಕ್ತಪಡಿಸಿರುವ ಪ್ರಧಾನಿ ಮೋದಿ ಫಡ್ನವೀಸ್ ಬಳಿ ಚರ್ಚೆ ನಡೆಸಿದ್ದು ಕೇಂದ್ರದಿಂದ ಅಗತ್ಯ ನೆರವು ನೀಡುವ ಭರವಸೆ ನೀಡಿದ್ದಾರೆ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪಹಲ್ಗಾಮ್‌ ಭಯೋತ್ಪಾದನಾ ದಾಳಿ: ಎನ್‌ಐಎ ತನಿಖೆಯಲ್ಲಿ ಮಹತ್ವದ ಬೆಳವಣಿಗೆ

ಪಾರ್ಟಿ ಮಾಡುತ್ತಿದ್ದಾಗ ಪೊಲೀಸರ ಎಂಟ್ರಿ, ಹೆದರಿ ನಾಲ್ಕನೇ ಫ್ಲೋರ್‌ನಿಂದ ಹಾರಿದ್ರಾ ಯುವತಿ

ಮಹಿಳೆಯರಿರುವುದು ಗಂಡನ ಜತೆ ಮಲಗುವುದಕ್ಕೆ: ಕೇರಳ ಸಿಪಿಎಂ ಮುಖಂಡನ ವಿವಾದಾತ್ಮಕ ಹೇಳಿಕೆ

ಮೊಟ್ಟೆ ಪ್ರಿಯರೇ ಹುಷಾರ್ : ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಶಾಕಿಂಗ್ ಮಾಹಿತಿ

ಕೌಟುಂಬಿಕ ಕಲಹಕ್ಕೆ ಪತ್ನಿಯನ್ನು ಮುಗಿಸಿ, ತಾನೂ ಆತ್ಮಹತ್ಯೆಗೆ ಶರಣಾದ ಪತಿ

ಮುಂದಿನ ಸುದ್ದಿ
Show comments