Webdunia - Bharat's app for daily news and videos

Install App

ಬಿಜೆಪಿ ಮುಖಂಡ ದಯಾಶಂಕರ್‌ ಸಿಂಗ್ ನಾಲಿಗೆ ಕತ್ತರಿಸಿದ್ರೆ 50 ಲಕ್ಷ ಬಹುಮಾನ: ಬಿಎಸ್‌ಪಿ

Webdunia
ಗುರುವಾರ, 21 ಜುಲೈ 2016 (14:49 IST)
ಮಾಜಿ ಮುಖ್ಯಮಂತ್ರಿ ಮಾಯಾವತಿಯವರನ್ನು ವೇಶ್ಯೆಗಿಂತಲೂ ಕೀಳು ಎಂದು ಜರಿದ ಬಿಜೆಪಿ ನಾಯಕ ದಯಾಶಂಕರ್ ಸಿಂಗ್ ಅವರ ನಾಲಿಗೆಯನ್ನು ಕತ್ತರಿಸಿ ತಂದುಕೊಟ್ಟವರಿಗೆ 50 ಲಕ್ಷ ರೂ.ನಗದು ಬಹುಮಾನ ನೀಡಲಾಗುವುದು ಎಂದು ಬಿಎಸ್‌ಪಿ ನಾಯಕರು ಘೋಷಿಸಿದ್ದಾರೆ.
 
ಮಾಯವತಿ ವಿರುದ್ಧ ಅಸಭ್ಯ ಶಬ್ದಗಳನ್ನು ಬಳಸಿದ ಹಿನ್ನೆಲೆಯಲ್ಲಿ ಲೋಕಸಭೆ ಮತ್ತು ರಾಜ್ಯಸಭೆಯಲ್ಲಿ ಕೋಲಾಹಲ ಉಂಟಾದ ನಂತರ ಬಿಜೆಪಿ, ಈಗಾಗಲೇ ಉತ್ತರಪ್ರದೇಶ ಉಪಾಧ್ಯಕ್ಷ ದಯಾಶಂಕರ್‌ರನ್ನು ಪಕ್ಷದಿಂದ ವಜಾಗೊಳಿಸಿ ಆದೇಶ ಹೊರಡಿಸಿದೆ.
 
ಏತನ್ಮಧ್ಯೆ, ಬಿಎಸ್‌ಪಿ ಪಕ್ಷ ಚಂಡೀಗಢ್ ಜನ್ನತ್ ಜಹಾನ್, ದಯಾಶಂಕರ್ ನಾಲಿಗೆ ಕತ್ತರಿಸಿದವರಿಗೆ 50 ಲಕ್ಷ ರೂಪಾಯಿ ಬಹುಮಾನ ನೀಡುವುದಾಗಿ ಘೋಷಿಸಿದ್ದಾರೆ.  
 
ಬಿಜೆಪಿ ಮುಖಂಡ ದಯಾಶಂಕರ್ ನಿನ್ನೆ ಸುದ್ದಿಗಾರರೊಂದಿಗೆ ಮಾತನಾಡಿ, ವೇಶ್ಯೆಯರಂತೆ ಟಿಕೆಟ್‌ಗಳನ್ನು ಮಾರಾಟ ಮಾಡಿದ ಮಾಯಾವತಿ ಬಿಎಸ್‌ಪಿ ಸಂಸ್ಥಾಪಕ ಕಾನ್ಶಿರಾಮ್ ಅವರ ಕನಸುಗಳನ್ನು ಛಿದ್ರಗೊಳಿಸಿದ್ದಾರೆ ಎಂದು ಆರೋಪಿಸಿದ್ದರು. 
 
ಮಾಯಾವತಿ 1 ಕೋಟಿ ರೂಪಾಯಿಗೆ ಟಿಕೆಟ್ ನೀಡುತ್ತಾರೆ. ಒಂದು ವೇಳೆ ಮತ್ತೊಬ್ಬರು ಗಂಟೆಯ ನಂತರ ಎರಡು ಕೋಟಿ ನೀಡಿದಲ್ಲಿ ಅವರಿಗೆ ಟಿಕೆಟ್ ನೀಡುತ್ತಾರೆ. ಒಂದು ವೇಳೆ, ಸಂಜೆ  ಮೂರು ಕೋಟಿ ನೀಡಿದಲ್ಲಿ ಕೊನೆಗೆ ಟಿಕೆಟ್ ಅವರಿಗೆ ನೀಡುತ್ತಾರೆ. ಮಾಯಾವತಿ ವೇಶ್ಯೆಗಿಂತಲೂ ಕೀಳಾಗಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.
 
ಹಜರತ್ ಗಂಜ್‌ ಜಿಲ್ಲೆಯಲ್ಲಿ ಬಹುಜನ ಸಮಾಜ ಪಕ್ಷದ ಸಾವಿರಾರು ಕಾರ್ಯಕರ್ತರು ಬೀದಿಗಿಳಿದು ಬಿಜೆಪಿ ವಿರುದ್ಧ ಘೋಷಣೆಗಳನ್ನು ಕೂಗಿದರು. ಜನರ ಆಕ್ರೋಶ ಕಂಡ ಪೊಲೀಸ್ ಅಧಿಕಾರಿಗಳಿಗೆ ಅವರನ್ನು ನಿಯಂತ್ರಿಸಲು ಹರಸಾಹಸ ಪಡಬೇಕಾಯಿತು.

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಏರ್‌ ಇಂಡಿಯಾ ವಿಮಾನ ದುರಂತ: ಪ್ರಾಣ ಉಳಿಸಿಕೊಳ್ಳಲು ಬಿಲ್ಡಿಂಗ್‌ನಿಂದ ವಿದ್ಯಾರ್ಥಿಗಳು ಹಾರುತ್ತಿರುವ ಭೀಕರ ವಿಡಿಯೋ ವೈರಲ್‌

ಶೀಘ್ರದಲ್ಲೇ ನಿವೃತ್ತಿ ಪಡೆಯುವುದಾಗಿ ಹೇಳಿದ್ದ: ಕ್ಯಾಪ್ಟನ್ ಸುಮೀತ್‌ ಸಬರ್ವಾಲ್‌ಗೆ ತಂದೆಯ ಕಣ್ಣೀರ ಅಂತಿಮ ವಿದಾಯ

ರಾತೋರಾತ್ರಿ ಹಿಂದೂ ಕಾರ್ಯಕರ್ತರ ಮನೆಗೆ ಪೊಲೀಸರ ಭೇಟಿ: ತನಿಖೆಗೆ ಆದೇಶ

ಬಾಂಬ್‌ ಬೆದರಿಕೆ: ನಾಗ್ಪುರ ಏರ್‌ಪೋರ್ಟ್‌ನಲ್ಲಿ ಇಂಡಿಗೋ ವಿಮಾನ ತುರ್ತು ಭೂಸ್ಪರ್ಶ

ಲಂಡನ್ ಬೆನ್ನಲ್ಲೇ ಪ್ಯಾರಿಸ್‌ಗೆ ನಿಗದಿಯಾಗಿದ್ದ ಏರ್‌ ಇಂಡಿಯಾ ವಿಮಾನ ರದ್ದು

ಮುಂದಿನ ಸುದ್ದಿ
Show comments