Webdunia - Bharat's app for daily news and videos

Install App

ಪ್ರಿಯಾಂಕಾ ಲಾವೋ ಕಾಂಗ್ರೆಸ್ ಬಚಾವೋ ಘೋಷಣೆ ಕೂಗಿದ ಕಾಂಗ್ರೆಸ್ ಕಾರ್ಯಕರ್ತರು

Webdunia
ಸೋಮವಾರ, 20 ಅಕ್ಟೋಬರ್ 2014 (15:25 IST)
ಮಹಾರಾಷ್ಟ್ರ ಮತ್ತು ಹರ್ಯಾಣದಲ್ಲಿ ಕಾಂಗ್ರೆಸ್ ಹೀನಾಯ ಸೋಲು ಕಾಣುತ್ತಿದ್ದಂತೆ ಪಕ್ಷದಲ್ಲಿ ಪ್ರಿಯಾಂಕಾ ಗಾಂಧಿ ಅವರನ್ನು ರಾಜಕೀಯಕ್ಕೆ ತರಬೇಕೆನ್ನುವ ಕೂಗೆದ್ದಿದೆ. 
 
ಕೆಲ ಕಾಂಗ್ರೆಸ್ ಕಾರ್ಯಕರ್ತರು ಪಕ್ಷದ ಕೇಂದ್ರ ಕಚೇರಿ ಎದುರು ಪ್ರಿಯಾಂಕಾ ಲಾವೋ ಕಾಂಗ್ರೆಸ್ ಬಚಾವೋ ಎನ್ನುವ ಘೋಷಣೆ ಕೂಗಿದ್ದಾರೆ. ಸುಮಾರು 200ರಿಂದ 250 ಮಂದಿ ಕಾಂಗ್ರೆಸ್ ಕಾರ್ಯಕರ್ತರು ಅದರಲ್ಲೂ ಮುಖ್ಯವಾಗಿ ಮಹಿಳಾ ಕಾರ್ಯಕರ್ತರು ಪ್ರಿಯಾಂಕಾ ಗಾಂಧಿ ಅವರನ್ನು ರಾಜಕಾರಣಕ್ಕೆ ಕರೆತರುವಂತೆ ಒತ್ತಾಯಿಸಿದ್ದಾರೆ. ಪಕ್ಷ ಈಗ ಸಂಕಷ್ಟದ ದಿನಗಳನ್ನು ಎದುರಿಸುತ್ತಿವೆ. ಇಂಥ ಪರಿಸ್ಥಿತಿಯಲ್ಲಿ ಪ್ರಿಯಾಂಕಾರನ್ನು ರಾಜಕೀಯ ಸೇರುವಂತೆ ರಾಹುಲ್‌ಗಾಂಧಿ ಒತ್ತಾಯಿಸಬೇಕೆಂದು ಅವರು ಆಗ್ರಹಿಸಿದ್ದಾರೆ.
 
ಮಹಾರಾಷ್ಟ್ರ ಮತ್ತು ಹರ್ಯಾಣ ವಿಧಾನಸಭೆ ಚುನಾವಣೆಯಲ್ಲೂ ಜನ ಮಕಾಡೆ ಮಲಗಿಸಿರುವ ಸುದ್ದಿ ಹೊರಬೀಳುತ್ತಿದ್ದರೆ ಇತ್ತ ಪಕ್ಷದ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರು ಚಂಡ ಮಾರುತ ಪೀಡಿತ ವಿಶಾಖಪಟ್ಟಣದಲ್ಲಿ ಜನರ ಸಮಸ್ಯೆ ಆಲಿಸುವಲ್ಲಿ ಬ್ಯುಸಿಯಾಗಿದ್ದರು. 
 
ವಿಧಾನಸಭೆ ಚುನಾವಣೆಯಲ್ಲಿ ಭಾರಿ ಸೋಲಿನ ಸುಳಿವು ಮೊದಲೇ ಇತ್ತು ಎನ್ನುವಂತೆ ಮಾತನಾಡಿದ ಅವರು, ಜನರ ತೀರ್ಪನ್ನು ನಾವು ಒಪ್ಪಿಕೊಳ್ಳುತ್ತೇವೆ. ಮಹಾರಾಷ್ಟ್ರದಲ್ಲಿ 15 ವರ್ಷ ಮತು ಹರ್ಯಾಣದಲಿ ನಮ್ಮ ಸರ್ಕಾರ 10 ವರ್ಷ ಅಧಿಕಾರ ನಡೆಸಿತ್ತು. ಈಗ ಜನರು ಬದಲಾವಣೆಗಾಗಿ ಮತ ಹಾಕಿದ್ದಾರೆ. ವಿಧಾನಸಭೆ ಚುನಾವಣೆಯಲ್ಲಿ ಸಿಕ್ಕ ಯಶಸ್ಸಿಗಾಗಿ ನಾನು ಬಿಜೆಪಿಗೆ ಶುಭಾಶಯ ತಿಳಿಸುತ್ತೇನೆ. ಜನರ ವಿಶ್ವಾಸವನ್ನು ಮರುಗಳಿಸಲು ಕಾಂಗ್ರೆಸ್ ಕಠಿಣ ಪರಿಶ್ರಮ ಪಡಲಿದೆ ಎಂದು ಹೇಳಿದ್ದಾರೆ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments