Webdunia - Bharat's app for daily news and videos

Install App

ಅಪಘಾತದಲ್ಲಿ ಸಾವನ್ನಪ್ಪಿದ ಅಣ್ಣನ ಚಿತೆಗೆ ಹಾರಿದ ತಂಗಿ

Webdunia
ಶನಿವಾರ, 2 ಜುಲೈ 2016 (14:05 IST)
ಅಪಘಾತದಲ್ಲಿ ಸಾವನ್ನಪ್ಪಿದ ಹಿರಿಯ ಸಹೋದರ ಚಿತೆಯಲ್ಲಿ ಹಾರಿ ತಂಗಿಯೂ ಸಾವನ್ನಪ್ಪಿದ ಘಟನೆ ರಾಜಸ್ಥಾನದ ದುಂಗರ್ಪುರ ಜಿಲ್ಲೆಯಲ್ಲಿ ಶುಕ್ರವಾರ ಸಂಜೆ ನಡೆದಿದೆ. ಮೃತಳನ್ನು ದುರ್ಗಾ (28) ಎಂದು ಗುರುತಿಸಲಾಗಿದ್ದು ಆಕೆ ಮಾನಸಿಕ ಕಾಯಿಲೆಯಿಂದ ಬಳಲುತ್ತಿದ್ದಳು ಎಂದು ತಿಳಿದು ಬಂದಿದೆ. 

ವಿವಾಹಿತಳಾಗಿದ್ದ ಆಕೆಗೆ ಮೂವರು ಮಕ್ಕಳಿದ್ದು ಕಳೆದ ನಾಲ್ಕು ವರ್ಷಗಳಿಂದ ತಾಯಿ ಮತ್ತು ಮೂವರು ಸಹೋದರರ ಜತೆಗೆ ತವರಿನಲ್ಲಿಯೇ ವಾಸಿಸುತ್ತಿದ್ದಳು.ಆಕೆ ಮಾನಸಿಕ ಕಾಯಿಲೆಯಿಂದ ಬಳಲುತ್ತಿದ್ದ ಕಾರಣಕ್ಕೆ ಪತಿ ಆಕೆಯನ್ನು ಹಿಂತಿರುಗಿ ಕರದೊಯ್ಯಲು ಒಪ್ಪಿರಲಿಲ್ಲ. 
 
ಆಕೆಯ ಸಹೋದರರಲ್ಲಿ ಒಬ್ಬನಾದ ವೇಲಾ ರಾಮ್ ಮನತ್ (32) ದುಂಗರ್ಪುರ ನಗರದಿಂದ ತನ್ನ ಗ್ರಾಮಕ್ಕೆ ಹಿಂತಿರುಗುತ್ತಿದ್ದಾಗ ಅಪಘಾತದಲ್ಲಿ ಮೃತ ಪಟ್ಟಿದ್ದ. ಆದರೆ ಆತನ ಗುರುತು ಪತ್ತೆಯಾಗಿರಲಿಲ್ಲ. ಗುರುವಾರ ರಾತ್ರಿ ಈ ಘಟನೆ ನಡೆದಿತ್ತು. 
 
ಶುಕ್ರವಾರ ಮುಂಜಾನೆ ಆತನ್ಯಾರು ಎಂಬುದು ತಿಳಿದು ಬಂದಿದ್ದು ಮರಣೋತ್ತರ ಪರೀಕ್ಷೆ ನಡೆಸಿ ಕುಟುಂಬಸ್ಥರಿಗೆ ಒಪ್ಪಿಸಲಾಗಿತ್ತು. ಅದೇ ದಿನ ಸಂಜೆ ಆತನ ಅಂತ್ಯಸಂಸ್ಕಾರವನ್ನು ಸಹ ನಡೆಸಲಾಯಿತು. ಶವವನ್ನು ಸುಟ್ಟ ಬಳಿಕ ಕುಟುಂಬಸ್ಥರು ಮನೆಗೆ ಮರಳಿದ್ದಾರೆ. ಸ್ವಲ್ಪ ಸಮಯದ ಬಳಿಕ ಆಕೆಯ ತಂಗಿ ದುರ್ಗಾ ಚಿತೆಯಲ್ಲಿ ಹಾರುತ್ತಿದ್ದುದನ್ನು ಅಲ್ಲೇ ಹತ್ತಿರದಲ್ಲಿದ್ದ ಮನೆಯ ಬಾಲಕನೋರ್ವ ನೋಡಿದ್ದಾನೆ.  ತಕ್ಷಣ ಪೊಲೀಸರಿಗೂ ಮಾಹಿತಿ ನೀಡಲಾಯಿತು. 
 
ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿದ ಪೊಲೀಸರು ವೈದ್ಯರನ್ನು ಕರೆಸಲಾಗಿ ಆಕೆ ಮೃತ ಪಟ್ಟಿರುವುದು ತಿಳಿದು ಬಂದಿದೆ. 

 ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಏರ್‌ ಇಂಡಿಯಾ ವಿಮಾನಕ್ಕೆ ಡಿಕ್ಕಿ ಹೊಡೆದ ಹಕ್ಕಿ, ತಪ್ಪಿದ ಅವಘಡ‌

ಜಗನ್ನಾಥನ ದರ್ಶನಕ್ಕಾಗಿ ಡೊನಾಲ್ಡ್‌ ಟ್ರಂಪ್ ಆಹ್ವಾನವನ್ನೇ ತಿರಸ್ಕರಿಸಿದೆ: ನರೇಂದ್ರ ಮೋದಿ

ಹೀಗಾದ್ರೆ ಯುವಕರ ಕತೆ ಏನು, ಮಗನಿಗೆ ನಿಶ್ಚಿಯವಾಗಿದ್ದ ಯುವತಿಯನ್ನೇ ಕೈಹಿಡಿದ ತಂದೆ

ಕ್ರೈಸ್ತ ಧರ್ಮಕ್ಕೆ ಮತಾಂತರವಾದರೆ ಆರೋಗ್ಯದಲ್ಲಿ ಚೇತರಿಕೆ: ಮಹಿಳೆಗೆ ಒತ್ತಡ, ದೂರು

ಏರ್‌ ಇಂಡಿಯಾ ದುರಂತದ ಬಳಿಕ ವಿಮಾನದಲ್ಲಿ ಈ ಸೀಟಿಗಾಗಿ ಹೆಚ್ಚಿದ ಬೇಡಿಕೆ

ಮುಂದಿನ ಸುದ್ದಿ
Show comments