ಬಿಆರ್‌ಎಸ್ ನಾಯಕಿ ಕೆ.ಕವಿತಾ ಮತ್ತೇ 14 ದಿನ ಇಡಿ ಕಸ್ಟಡಿಗೆ: ಕೋರ್ಟ್‌ ಆದೇಶ

Sampriya
ಮಂಗಳವಾರ, 26 ಮಾರ್ಚ್ 2024 (15:53 IST)
ತೆಲಂಗಾಣ: ದೆಹಲಿಯ ಅಬಕಾರಿ ನೀತಿ ಹಗರಣ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಬಿಆರ್‌ಎಸ್ ನಾಯಕಿ ಕೆ.ಕವಿತಾ ಅವರ ಇಡಿ ಬಂಧನವನ್ನು ಏಪ್ರಿಲ್ 9 ವಿಸ್ತರಿಸಿ ಕೋರ್ಟ್​ ಆದೇಶ ಹೊರಡಿಸಿದೆ.

ಜಾರಿ ನಿರ್ದೇಶನಾಲಯದ (ಇ.ಡಿ) ಕಸ್ಟಡಿ ಅವಧಿಯನ್ನು ಮಾರ್ಚ್ 26ರವರೆಗೆ ವಿಸ್ತರಿಸಿ ನ್ಯಾಯಾಧೀಶೆ ಕಾವೇರಿ ಬವೇಜಾ ಅವರು ಜಾರಿ ನಿರ್ದೇಶನಾಲಯಕ್ಕೆ ಮಾರ್ಚ್‌ 23ರಂದು (ಶನಿವಾರ) ಅನುಮತಿ ನೀಡಿದ್ದರು.

ಮಾರ್ಚ್ 15ರಂದು ತೆಲಂಗಾಣದ ಮಾಜಿ ಮುಖ್ಯಮಂತ್ರಿ ಕೆ.ಚಂದ್ರಶೇಖರ ರಾವ್ ಅವರ ಪುತ್ರಿ, 46 ವರ್ಷದ ಕವಿತಾ ಅವರನ್ನು ಇ.ಡಿ ಅಧಿಕಾರಿಗಳು ಅವರ ನಿವಾಸದಲ್ಲಿ ಬಂಧಿಸಿದ್ದರು. ಬಳಿಕ ಮಾರ್ಚ್ 23ರವರೆಗೆ ಇ.ಡಿ ವಶಕ್ಕೆ ಒಪ್ಪಿಸಲಾಗಿತ್ತು.

ಇದೇ ಪ್ರಕರಣದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್​ ಕೇಜ್ರಿವಾಲ್​ ಬಂಧನಕ್ಕೊಳಗಾಗಿದ್ದಾರೆ.  

ಜಾಮೀನಿಗೆ ನಿರಾಕರಣೆ:
ಕವಿತಾ ಪರ ವಕೀಲ ನಿತೇಶ್ ರಾಣಾ ಅವರು ಕವಿತಾ ಅವರ ಅಪ್ರಾಪ್ತ ಮಗನ ಪರೀಕ್ಷೆಯ ಆಧಾರದ ಮೇಲೆ ಮಧ್ಯಂತರ ಜಾಮೀನು ಕೋರಿದ್ದರು. ಆದರೆ ಜಾಮೀನು ನೀಡಬಾರದು ಎಂದು ಇಡಿ ಪರ ವಕೀಲರು ವಾದ ಮಂಡಿಸಿದ್ದರು. ಮಧ್ಯಂತರ ಜಾಮೀನು, ಜಾಮೀನು ಎರಡಕ್ಕೂ ಮನಿ ಲಾಂಡರಿಂಗ್ ತಡೆ ಕಾಯ್ದೆ (ಪಿಎಂಎಲ್‌ಎ) ಅಡಿಯಲ್ಲಿ ಕಠಿಣ ನಿಯಮಗಳಿವೆ ಎಂದು ಇಡಿ ಒತ್ತಿಹೇಳಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಲಗಿ, ಮಲಗಿರಿ, ಜನ ಒದ್ದೋಡಿಸುವವರೆಗೂ ಎಳೆಬೇಡಿ, ಡಿಕೆ ಶಿವಕುಮಾರ್ ಕುಟುಕಿದ ಆರ್‌ ಅಶೋಕ್‌

ಆರ್‌ಎಸ್‌ಎಸ್‌ ಪ್ರಧಾನ ಕಚೇರಿ ಐಷರಾಮಿ ಹೋಟೆಲ್‌ನಂತಿದೆ: ಪ್ರಿಯಾಂಕ್ ಖರ್ಗೆ ವ್ಯಂಗ್ಯ

Indigo Crisis: ಇಂದು ಬೆಂಗಳೂರಿನಲ್ಲಿ ರದ್ದಾದ ವಿಮಾನದ ಪಟ್ಟಿ ಕೇಳಿದ್ರೆ ಶಾಕ್

ಗೋವಾ ಪಬ್‌ ದುರಂತ, ಮಾಲೀಕರ ವಿರುದ್ಧ ಕ್ರಮಕ್ಕೆ ಪ್ರತ್ಯಕ್ಷದರ್ಶಿಗಳು ಒತ್ತಾಯ

ಜನೌಷಧಿ ಕೇಂದ್ರ ಸ್ಥಗಿತ ರದ್ದುಗೊಳಿಸಿದ ಕೋರ್ಟ್ ನಿರ್ಧಾರದ ಬಗ್ಗೆ ವಿಜಯೇಂದ್ರ ಹೇಳಿದ್ದೇನು

ಮುಂದಿನ ಸುದ್ದಿ
Show comments