Webdunia - Bharat's app for daily news and videos

Install App

ಬಿಆರ್‌ಎಸ್ ನಾಯಕಿ ಕೆ.ಕವಿತಾ ಮತ್ತೇ 14 ದಿನ ಇಡಿ ಕಸ್ಟಡಿಗೆ: ಕೋರ್ಟ್‌ ಆದೇಶ

Sampriya
ಮಂಗಳವಾರ, 26 ಮಾರ್ಚ್ 2024 (15:53 IST)
ತೆಲಂಗಾಣ: ದೆಹಲಿಯ ಅಬಕಾರಿ ನೀತಿ ಹಗರಣ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಬಿಆರ್‌ಎಸ್ ನಾಯಕಿ ಕೆ.ಕವಿತಾ ಅವರ ಇಡಿ ಬಂಧನವನ್ನು ಏಪ್ರಿಲ್ 9 ವಿಸ್ತರಿಸಿ ಕೋರ್ಟ್​ ಆದೇಶ ಹೊರಡಿಸಿದೆ.

ಜಾರಿ ನಿರ್ದೇಶನಾಲಯದ (ಇ.ಡಿ) ಕಸ್ಟಡಿ ಅವಧಿಯನ್ನು ಮಾರ್ಚ್ 26ರವರೆಗೆ ವಿಸ್ತರಿಸಿ ನ್ಯಾಯಾಧೀಶೆ ಕಾವೇರಿ ಬವೇಜಾ ಅವರು ಜಾರಿ ನಿರ್ದೇಶನಾಲಯಕ್ಕೆ ಮಾರ್ಚ್‌ 23ರಂದು (ಶನಿವಾರ) ಅನುಮತಿ ನೀಡಿದ್ದರು.

ಮಾರ್ಚ್ 15ರಂದು ತೆಲಂಗಾಣದ ಮಾಜಿ ಮುಖ್ಯಮಂತ್ರಿ ಕೆ.ಚಂದ್ರಶೇಖರ ರಾವ್ ಅವರ ಪುತ್ರಿ, 46 ವರ್ಷದ ಕವಿತಾ ಅವರನ್ನು ಇ.ಡಿ ಅಧಿಕಾರಿಗಳು ಅವರ ನಿವಾಸದಲ್ಲಿ ಬಂಧಿಸಿದ್ದರು. ಬಳಿಕ ಮಾರ್ಚ್ 23ರವರೆಗೆ ಇ.ಡಿ ವಶಕ್ಕೆ ಒಪ್ಪಿಸಲಾಗಿತ್ತು.

ಇದೇ ಪ್ರಕರಣದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್​ ಕೇಜ್ರಿವಾಲ್​ ಬಂಧನಕ್ಕೊಳಗಾಗಿದ್ದಾರೆ.  

ಜಾಮೀನಿಗೆ ನಿರಾಕರಣೆ:
ಕವಿತಾ ಪರ ವಕೀಲ ನಿತೇಶ್ ರಾಣಾ ಅವರು ಕವಿತಾ ಅವರ ಅಪ್ರಾಪ್ತ ಮಗನ ಪರೀಕ್ಷೆಯ ಆಧಾರದ ಮೇಲೆ ಮಧ್ಯಂತರ ಜಾಮೀನು ಕೋರಿದ್ದರು. ಆದರೆ ಜಾಮೀನು ನೀಡಬಾರದು ಎಂದು ಇಡಿ ಪರ ವಕೀಲರು ವಾದ ಮಂಡಿಸಿದ್ದರು. ಮಧ್ಯಂತರ ಜಾಮೀನು, ಜಾಮೀನು ಎರಡಕ್ಕೂ ಮನಿ ಲಾಂಡರಿಂಗ್ ತಡೆ ಕಾಯ್ದೆ (ಪಿಎಂಎಲ್‌ಎ) ಅಡಿಯಲ್ಲಿ ಕಠಿಣ ನಿಯಮಗಳಿವೆ ಎಂದು ಇಡಿ ಒತ್ತಿಹೇಳಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments