Select Your Language

Notifications

webdunia
webdunia
webdunia
webdunia

ಪ್ರಧಾನಿ ನರೇಂದ್ರ ಮೋದಿ ಭೇಟಿ ಹಿಂದಿನ ಉದ್ದೇಶ ಬಿಚ್ಚಿಟ್ಟ ಬಿಎಸ್‌ ಯಡಿಯೂರಪ್ಪ

BJP Leader BS Yediyurappa

Sampriya

ನವದೆಹಲಿ , ಸೋಮವಾರ, 13 ಅಕ್ಟೋಬರ್ 2025 (19:57 IST)
Photo Credit X
ನವದೆಹಲಿ: ಮಾಜಿ ಸಿಎಂ, ಬಿಜೆಪಿ ನಾಯಕ ಬಿಎಸ್‌ ಯಡಿಯೂರಪ್ಪ ಅವರು ಇಂದು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ, ಕೆಲ ಹೊತ್ತು ಮಾತುಕತೆ ನಡೆಸಿದರು.

ಇದೇ ಸಂದರ್ಭದಲ್ಲಿ ಪ್ರಧಾನಿ ಮೋದಿಗೆ ಅವರು ಹೂಗುಚ್ಚ ನೀಡಿ ದೀಪಾವಳಿ ಶುಭಾಶಯ ಕೋರಿದರು. 

ಈ ಕುರಿತು ಯಡಿಯೂರಪ್ಪ ಅವರು ಎಕ್ಸ್ ಖಾತೆಯಲ್ಲಿ ಮೋದಿ ಜತೆಗಿನ ಫೋಟೋ ಹಂಚಿಕೊಂಡು ಪ್ರಧಾನಿಯನ್ನು ಭೇಟಿಯಾಗಿ ಮುಂಬರುವ ದೀಪಾವಳಿ ಶುಭಾಶಯಗಳನ್ನು ತಿಳಿಸಿದ್ದೇನೆ ಎಂದು ಹೇಳಿಕೊಂಡಿದ್ದಾರೆ. 

ಇನ್ನೂ ಬಿಎಸ್‌ವೈ ಅವರು ಇದಕ್ಕೂ ಮುನ್ನಾ ಬಿಹಾರ ವಿಧಾನಸಭಾ ಚುನಾವಣೆ ಹಿನ್ನಲೆಯಲ್ಲಿ ನವದೆಹಲಿಯಲ್ಲಿ ನಡೆದ ಕೇಂದ್ರೀಯ ಸಂಸದೀಯ ಮಂಡಳಿ ಹಾಗೂ ಚುನಾವಣಾ ಸಮಿತಿ ಸಭೆಯಲ್ಲಿ ಪಾಲ್ಗೊಂಡರು.


Share this Story:

Follow Webdunia kannada

ಮುಂದಿನ ಸುದ್ದಿ

ದೀಪಾವಳಿಗೆ ದಿನಗಣನೆ: ನೈಋತ್ಯ ರೈಲ್ವೆಯಿಂದ ಪ್ರಯಾಣಿಕರಿಗೆ ಗುಡ್‌ನ್ಯೂಸ್