Webdunia - Bharat's app for daily news and videos

Install App

ಬಿಎಸ್ಎಫ್ ಯೋಧನ ವಿಡಿಯೋ ಆರೋಪ; ತನಿಖೆಗೆ ಆದೇಶ

Webdunia
ಮಂಗಳವಾರ, 10 ಜನವರಿ 2017 (14:56 IST)
ಗಡಿ ಕಾಯುವ ಯೋಧರಿಗೆ ಕಳಪೆ ಗುಣಮಟ್ಟದ ಆಹಾರವನ್ನು ನೀಡಲಾಗುತ್ತದೆ ಎಂದು ಬಿಎಸ್ಎಫ್ ಯೋಧ ಮಾಡಿರುವ ಆರೋಪಕ್ಕೆ ಸಂಬಂಧಿಸಿದಂತೆ ಸಮಗ್ರ ತನಿಖೆ ನಡೆಸಲಾಗುವುದು ಎಂದು ಬಿಎಸ್​ಎಫ್ ಇನ್​ಸ್ಪೆಕ್ಟರ್ ಜನರಲ್ ಡಿ.ಕೆ. ಉಪಾಧ್ಯಾಯ ಮತ್ತು ಡಿಐಜಿ ಎಂಡಿಎಸ್ ಮಾನ್ ಮಂಗಳವಾರ ಸ್ಪಷ್ಟಪಡಿಸಿದ್ದಾರೆ.

 
ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ಆರೋಪಕ್ಕೆ ಸಂಬಂಧಿಸಿದಂತೆ ಗಂಭೀರವಾಗಿ ತನಿಖೆ ನಡೆಸಲಾಗುವುದು. ಆರೋಪದಲ್ಲಿ ಹುರುಳಿದ್ದರೆ ಕ್ರಮ ಕೈಗೊಳ್ಳಲಾಗುವುದು ಎಂದಿದ್ದಾರೆ.
 
ಜತೆಗೆ ಕರ್ತವ್ಯ ನಿರತರಾಗಿದ್ದಾಗ ಮೊಬೈಲ್ ಇಟ್ಟುಕೊಳ್ಳುವುದು ನಿಯಮಬಾಹಿರ. ಈ ಕುರಿತು ಸಹ ತನಿಖೆ ನಡೆಸಲಾಗುವುದು. 
ನಿಷ್ಪಕ್ಷಪಾತ ತನಿಖೆಗಾಗಿ ಸೈನಿಕನನ್ನು ಬೇರೆ ಕೇಂದ್ರ ಕಚೇರಿಯಲ್ಲಿ ವಿಚಾರಣೆಗೊಳಪಡಿಸಲಾಗುವುದು ಎಂದಿದ್ದಾರೆ  ಡಿ.ಕೆ. ಉಪಾಧ್ಯಾಯ. 
 
ಬಿಎಸ್ಎಫ್ 29 ನೇ ಬೆಟಾಲಿಯನ್ ಯೋಧ ತೇಜ್ ಬಹಾದ್ದೂರ್ ಯಾದವ್ ತಮ್ಮ ಫೇಸ್‌ಬುಕ್ ಖಾತೆಯಲ್ಲಿ ತಮ್ಮ ದುಃಸ್ಥಿತಿಯನ್ನು ಬಿಚ್ಚಿಟ್ಟಿದ್ದು ಈ ವಿಡಿಯೋ ಈಗ ವೈರಲ್ ಆಗಿ ಹರಿದಾಡುತ್ತಿದೆ. 
 
ಬೆಳಗಿಂದ ಸಂಜೆಯವರೆಗೂ 11-12 ಗಂಟೆಗಳ ಕಾಲ ಚಳಿ, ಮಳೆ, ಗಾಳಿಯನ್ನು ಲೆಕ್ಕಿಸದೆ ನಿರಂತರವಾಗಿ ಗಡಿ ಕಾಯುತ್ತೇವೆ. ಆದರೆ ನಮಗೆ ನೀಡುವ ಬೆಳಗಿನ ಉಪಹಾರ ಅರಿಶಿಣ ಮಿಶ್ರಿತ ದಾಲ್, ಒಣಗಿದ ಪರೋಟಾ. ನಮಗೆ ಸರಿಯಾದ ಆಹಾರ ಸಿಗುತ್ತಿಲ್ಲ. ಬೆಳಗಿನ ಉಪಹಾರಕ್ಕೆ ಸೀದು ಹೋಗಿರುವ ಆಹಾರವನ್ನು ನೀಡಲಾಗುತ್ತದೆ. ನಮಗೆ ಸಿಗುವ ರೇಷನ್‌ನಲ್ಲೂ ಮೇಲಾಧಿಕಾರಿಗಳ ಗೋಲ್ ಮಾಲ್ ಇರುತ್ತದೆ. ನಮ್ಮ ಪರಿಸ್ಥಿತಿ ಬಗ್ಗೆ ಯಾವುದೇ ಮಾಧ್ಯಮಗಳಲ್ಲಿ ತೋರಿಸಲಾಗುವುದಿಲ್ಲ, ಎಂದು ಸ್ಪೋಟಕ ಸತ್ಯವನ್ನು ಹೊರಹಾಕುವ ಧೈರ್ಯ ತೋರಿದ್ದಾನೆ ಸೈನಿಕ. ಈ ಕುರಿತು ಗಮನ ನೀಡುವಂತೆ ಅವರು ಪ್ರಧಾನಿ ಮೋದಿಯವರಲ್ಲಿ ಮನವಿ ಮಾಡಿದ್ದಾರೆ.
 
ಈ ಕುರಿತು ಪ್ರತಿಕ್ರಿಯಿಸಿರುವ ಬಿಎಸ್ಎಫ್ ಯಾದವ್ ಮದ್ಯವ್ಯಸನಿಯಾಗಿದ್ದು, ಅವರಿಗೆ ನಿಯಮಿತ ಆಪ್ತಸಮಾಲೋಚನೆ ಅಗತ್ಯವಿದೆ ಎಂದಿದೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸೋನಿಯಾ ಗಾಂಧಿ, ಕಾಂಗ್ರೆಸ್ ಹಿರಿಯ ನಾಯಕಿಗೆ ಆಗಿದ್ದೇನು

ಇಂದು ಲಂಡನ್‌ಗೆ ಹೊರಟಿದ್ದ ಏರ್‌ ಇಂಡಿಯಾ ವಿಮಾನ ಹಾರಾಟ ದಿಢೀರ್‌ ಕ್ಯಾನ್ಸಲ್‌, ಕಾರಣ ಇಲ್ಲಿದೆ

ಚಿನ್ನಸ್ವಾಮಿ ಕಾಲ್ತುಳಿತದ ಬಗ್ಗೆ ವಿಶೇಷ ಅಧಿವೇಶನ ಕರೆಯಬೇಕು: ಸುನಿಲ್ ಕುಮಾರ್

ಮಂಡ್ಯದ ಜನತೆ ಪರ ಧ್ವನಿ ಎತ್ತಿ ಸರ್ಕಾರದ ವಿರುದ್ಧ ಸುಮಲತಾ ಅಂಬರೀಶ್ ಆಕ್ರೋಶ

ಥಗ್ ಲೈಫ್ ಸಿನಿಮಾಗೆ ಸುಪ್ರೀಂಕೋರ್ಟ್ ಪರ್ಮಿಷನ್ ಕೊಟ್ರೂ ಕರ್ನಾಟಕದಲ್ಲಿ ಬಿಡುಗಡೆಯಾಗಲ್ಲ

ಮುಂದಿನ ಸುದ್ದಿ
Show comments