Publish Date: Wed, 26 Apr 2023 (08:47 IST)
Updated Date: Wed, 26 Apr 2023 (09:23 IST)
ನವದೆಹಲಿ : ಯುದ್ಧ, ಆರ್ಥಿಕ ಅಸ್ಥಿರತೆ, ಭಯೋತ್ಪಾದನೆ, ಧಾರ್ಮಿಕ ಉಗ್ರವಾದ ಮತ್ತು ಹವಾಮಾನ ಬದಲಾವಣೆಯಂತಹ ಸವಾಲುಗಳಿಗೆ ಭಗವಾನ್ ಬುದ್ಧನ ಆಲೋಚನೆಗಳು ಪರಿಹಾರವನ್ನು ನೀಡುತ್ತವೆ ಎಂದು ಪ್ರಧಾನಿ ನರೇಂದ್ರ ಮೋದಿ ಗುರುವಾರ ಹೇಳಿದ್ದಾರೆ.
ದೆಹಲಿಯಲ್ಲಿ ನಡೆದ ಜಾಗತಿಕ ಬೌದ್ಧ ಶೃಂಗಸಭೆಯ ಉದ್ಘಾಟನಾ ಅಧಿವೇಶನದಲ್ಲಿ ಮಾತನಾಡಿದ ಅವರು, ಕೆಲವು ದೇಶಗಳು ಮುಂಬರುವ ಪೀಳಿಗೆಯ ಬಗ್ಗೆ ಯೋಚಿಸದ ಕಾರಣ ಜಗತ್ತು ಈಗ ಹವಾಮಾನ ಬದಲಾವಣೆಯ ಬಿಕ್ಕಟ್ಟನ್ನು ಎದುರಿಸುತ್ತಿದೆ ಎಂದಿದ್ದಾರೆ.
ಶ್ರೀಮಂತ ರಾಷ್ಟ್ರಗಳು ದಶಕಗಳ ಕಾಲ ಅವರು ಪ್ರಕೃತಿಯೊಂದಿಗೆ ಮಧ್ಯ ಪ್ರವೇಶಿಸಿ ತಮ್ಮ ಮೇಲೆ ಪರಿಣಾಮ ಬೀರುವುದಿಲ್ಲ ಎಂದು ಯೋಚಿಸುತ್ತಿದ್ದರು. ಆದರೆ ಈಗ ಅವರು ಅದನ್ನು ಇತರರ ಮೇಲೆ ಹಾಕುತ್ತಿದ್ದಾರೆ.