Webdunia - Bharat's app for daily news and videos

Install App

ಬಜೆಟ್ 2017: ಪ್ರಧಾನಿ ಮೋದಿ ಇ-ಗವರ್ನಮೆಂಟ್ ಚಿತ್ರಕ್ಕೆ ಅರುಣ್ ಜೇಟ್ಲಿ ಬಣ್ಣ

Webdunia
ಬುಧವಾರ, 1 ಫೆಬ್ರವರಿ 2017 (12:17 IST)
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅಂದಿನಿಂದಲೂ ನಗದು ರಹಿತ ವ್ಯವಹಾರದ ಬಗ್ಗೆ ಮಾತನಾಡುತ್ತಲೇ ಇದ್ದಾರೆ. ಅವರ ಈ ಕನಸಿನ ಯೋಜನೆಗೆ ವಿತ್ತ ಸಚಿವ ಅರುಣ್ ಜೇಟ್ಲಿ ಘೋಷಿಸಿದ ಬಜೆಟ್ ನಲ್ಲಿ ಬಣ್ಣ ಬಳಿಯುವ ಪ್ರಯತ್ನ ನಡೆದಿದೆ.

 
ಪರಿಣಾಮ, ಇನ್ನು ಮುಂದೆ ರೈಲ್ವೇ ಟಿಕೆಟ್ ಬುಕಿಂಗ್ ಮಾಡುವವರು ವೆಬ್ ಸೈಟ್ ನಲ್ಲಿ ಬುಕಿಂಗ್ ಮಾಡಿ ಹಣ ಉಳಿತಾಯ ಮಾಡಿಕೊಳ್ಳಬಹುದು. ಮೊದಲೆಲ್ಲಾ ವೆಬ್ ಸೈಟ್ ನಲ್ಲಿ ಬುಕಿಂಗ್ ಮಾಡಿದರೆ ಸೇವಾ ಶುಲ್ಕ ಕಡಿತ ಮಾಡಲಾಗುತ್ತಿತ್ತು.

ಇನ್ನು ಮುಂದೆ, ವೆಬ್ ಸೈಟ್ ನಲ್ಲಿ ಬುಕಿಂಗ್ ಮಾಡುವವರಿಗೆ ಸೇವಾ ಶುಲ್ಕವಿರುವುದಿಲ್ಲ. ಹೀಗಾಗಿ ಅನಗತ್ಯ ವೆಚ್ಚ ತಪ್ಪಿಸಬಹುದು. ಇದರಿಂದ ಪ್ರಯಾಣಿಕನ ಜೇಬಿಗೆ ಅಲ್ಪ ಮಟ್ಟಿಗೆ ಉಳಿತಾಯವಾಗಲಿದೆ. ಈ ಮೂಲಕ ಇ-ಸರ್ವಿಸ್ ಉತ್ತೇಜಿಸಲು ಉದ್ದೇಶಿಸಲಾಗಿದೆ.

ಅಲ್ಲದೆ ಬೀಮ್ ಆಪ್ ಬಳಕೆಯನ್ನು ಉತ್ತೇಜಿಸಲು ಕ್ರಮ. ಅಲ್ಲದೆ ಗ್ರಾಮ ಪಂಚಾಯತ್ ಗಳಿಗೆ ಇಂಟರ್ ನೆಟ್ ಸೇವೆ ಒದಗಿಸಲು ಉದ್ದೇಶಿಸಲಾಗಿದೆ. ಅಲ್ಲದೆ ಎಲ್ಲಾ ಸರ್ಕಾರಿ ಸೇವೆಗಳಿಗೆ ಡಿಜಿಟಲ್ ಪಾವತಿ, ಬ್ಯಾಂಕಿಂಗ್ ಕ್ಷೇತ್ರದಲ್ಲಿ ಡಿಜಿಟಲ್ ಕ್ರಾಂತಿ ನಡೆಸಲು ಉದ್ದೇಶಿಸಲಾಗಿದೆ. ಕ್ರೆಡಿಟ್, ಡೆಬಿಟ್ ಕಾರ್ಡ್ ಇಲ್ಲದವರಿಗೆ ಆಧಾರ್ ಪೇ ಜಾರಿ ಮಾಡಲಾಗುವುದು.

ನೇರ ನಗದು ಯೋಜನೆಗೆ ಹೆಚ್ಚುಒತ್ತು ನೀಡಲಾಗುವುದು ಮತ್ತು ಪೇಮೆಂಟ್ ನಿಯಂತ್ರಣ ಮಂಡಳಿ ಸ್ಥಾಪಿಸಲಾಗುವುದು ಎಂದು ವಿತ್ತ ಸಚಿವರು ಘೋಷಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Siddaramaiah: ಕಾಳಿದಾಸನ ನಾಲಿಗೆ ಮೇಲೆ ಬ್ರಹ್ಮ ಅಕ್ಷರ ಬರೆದ ಅನ್ನೋದನ್ನೆಲ್ಲಾ ನಂಬಬೇಡಿ: ಸಿಎಂ ಸಿದ್ದರಾಮಯ್ಯ

ಕೆನಡಾದಲ್ಲಿ ಬಸ್‌ಗಾಗಿ ಕಾಯುತ್ತಿದ್ದ ಭಾರತದ ವಿದ್ಯಾರ್ಥಿನಿಗೆ ಗುಂಡು ತಗುಲಿ ಸಾವು

ಪಶ್ಚಿಮ ಬಂಗಾಳದಲ್ಲಿ ರಾಷ್ಟ್ರಪತಿ ಆಳ್ವಿಕೆ ಹೇರಿ: ಮಿಥುನ್ ಚಕ್ರವರ್ತಿ

India's Project Cheetah: Botswanaನಿಂದ ಮುಂದಿನ ತಿಂಗಳೇ ಬರಲಿದೆ ನಾಲ್ಕು ಚೀತಾ

ಮುತ್ತಪ್ಪ ರೈ ಮಗ ರಿಕ್ಕಿ ಮೇಲೆ ಗುಂಡಿನ ದಾಳಿ: ಇಂಚಿಂಚೂ ಮಾಹಿತಿ ಬಿಚ್ಚಿಟ್ಟ ಪ್ರಕಾಶ್ ರೈ

ಮುಂದಿನ ಸುದ್ದಿ
Show comments