Webdunia - Bharat's app for daily news and videos

Install App

ಗಾಂಧೀಜಿ ಕನಸಿನ ಭಾರತವನ್ನು ನಿರ್ಮಿಸಿ: ಮೋದಿ

Webdunia
ಗುರುವಾರ, 2 ಅಕ್ಟೋಬರ್ 2014 (13:45 IST)
ಪ್ರಧಾನಿ ನರೇಂದ್ರ ಮೋದಿ ಇಂದು ಬೆಳಿಗ್ಗೆ ರಾಜಘಾಟ್‌ಗೆ ತೆರಳಿ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಗೆ ನಮನ ಸಲ್ಲಿಸಿ  ಬಾಪೂಜಿ ಅವರ ಕನಸಿನ ಭಾರತವನ್ನು ನಿರ್ಮಿಸಲು ಸಹಾಯ ಮಾಡಿ ಎಂದು ದೇಶವಾಸಿಗಳಲ್ಲಿ ವಿನಂತಿಸಿಕೊಂಡರು.  

"ಮಹಾತ್ಮ ಗಾಂಧಿಯವರ ಜನ್ಮ ವಾರ್ಷಿಕೋತ್ಸವದಂದು ನಾನು ಅವರಿಗೆ ನಮಸ್ಕರಿಸುತ್ತೇನೆ " ಎಂದು ಮೋದಿ ಟ್ವೀಟ್ ಮಾಡಿದ್ದಾರೆ.
 
"ಗಾಂಧೀಜಿಯವರ ಆಲೋಚನೆ ಮತ್ತು ನಂಬಿಕೆಗಳು ನಮಗೆ ದೊಡ್ಡ ಸ್ಫೂರ್ತಿಯಾಗಿವೆ. ಗಾಂಧೀಜಿಯವರ ಕನಸಿನ ಭಾರತ ನಿರ್ಮಿಸಲು ನಮ್ಮನ್ನು ನಾವು ಅರ್ಪಿಸಿಕೊಳ್ಳೋಣ " ಎಂದು ಅವರು ಹೇಳಿದರು.
 
ತಮ್ಮ ಮಹಾತ್ವಾಕಾಂಕ್ಷೆಯ ಸ್ವಚ್ಛ ಭಾರತ ಅಭಿಯಾನಕ್ಕೆ ಚಾಲನೆ ನೀಡುವ ಮುನ್ನ ಮೋದಿ ಗಾಂಧೀಜಿಯವರ ಸಮಾಧಿ ಇರುವ ರಾಜಘಾಟ್‌ಗೆ ಭೇಟಿ ನೀಡಿದ್ದರು. 
 
2019ರಲ್ಲಿ ನಡೆಯಲಿರುವ ಗಾಂಧೀಜಿಯವರ 150 ನೇ ಜನ್ಮದಿನೋತ್ಸವಕ್ಕೆ ನಿರ್ಮಲ ಭಾರತ ನಿರ್ಮಾಣ ಅಭಿಯಾನವನ್ನು ಸಂಪನ್ನಗೊಳಿಸುವುದು ಅವರಿಗೆ ನೀಡುವ ಅತ್ಯುತ್ತಮ ಗೌರವ ಎಂದು ಮೋದಿ ಅಭಿಪ್ರಾಯ ಪಟ್ಟಿದ್ದಾರೆ. ಇಂದು ದೇಶ ಮಹಾತ್ಮಾ ಗಾಂಧಿಯವರ 145 ನೇ ಜಯಂತಿಯ ಸಡಗರದಲ್ಲಿದೆ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments