Webdunia - Bharat's app for daily news and videos

Install App

ಬುಲ್ಡೋಜರ್‌ನಿಂದ ರಾಮ ರಾಜ್ಯದ ಕಲ್ಪನೆ ಧ್ವಂಸ : ಅಖಿಲೇಶ್

Webdunia
ಸೋಮವಾರ, 13 ಜೂನ್ 2022 (11:59 IST)
ಲಕ್ನೋ : ಬಿಜೆಪಿಯು ತನ್ನ ಮಾತೃ ಸಂಘಟನೆಯಾದ ಆರ್ಎಸ್ಎಸ್ ಸೂಚನೆಗಳ ಮೇರೆಗೆ ದ್ವೇಷದ ರಾಜಕಾರಣ ಮಾಡುತ್ತಿದೆ ಎಂದು ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್ ಕಿಡಿಕಾರಿದ್ದಾರೆ.

ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬಿಜೆಪಿ ಸದಸ್ಯರ ಮಾತಿನಿಂದ ದೊಡ್ಡ ಸಮುದಾಯಕ್ಕೆ ನೋವಾಗಿದ್ದು, ರಾಜ್ಯವನ್ನು ಧ್ವಂಸಗೊಳಿಸುತ್ತಿರುವ ಭಯಾನಕ ಅಶಾಂತಿ ಘಟನೆಗಳ ಹಿಂದೆ ಇದೇ ರಾಜಕೀಯವಿದೆ.

ಈ ದುರದೃಷ್ಟಕರ ವಿವಾದವನ್ನು ಪರಿಹರಿಸಲು ಬಿಜೆಪಿ ಸರ್ಕಾರವು ಯಾವುದೇ ಗಟ್ಟಿಯಾದ ನಿರ್ಧಾರವನ್ನು ತೆಗೆದುಕೊಂಡಿಲ್ಲ ಎಂದು ದೂರಿದರು.

ನಮ್ಮ ಸಂಸ್ಕೃತಿ, ಧರ್ಮ ಮತ್ತು ಸಂವಿಧಾನವು ಯಾವುದೇ ಶಾಸನಬದ್ಧ ನಿಬಂಧನೆಗಳಿಲ್ಲದೆ ಯಾರೊಬ್ಬರ ಮನೆ ಅಥವಾ ಅಂಗಡಿಯನ್ನು ಧ್ವಂಸ ಮಾಡಲು ಅಥವಾ ಅಮಾಯಕರನ್ನು ಬಂಧಿಸಲು ಅವಕಾಶವಿಲ್ಲ.

ಆದರೆ ಈ ಶಾಂತಿಯುತ ಪ್ರತಿಭಟನೆ ನಡೆಸುವ ಜನರ ಪ್ರಜಾಸತ್ತಾತ್ಮಕ ಹಕ್ಕನ್ನು ಕಿತ್ತುಕೊಳ್ಳುತ್ತಿದ್ದು, ಬಿಜೆಪಿ ಆಡಳಿತದಲ್ಲಿ ಉತ್ತರ ಪ್ರದೇಶ ಇಡೀ ವಿಶ್ವದ ಮುಂದೆ ತಲೆತಗ್ಗಿಸುವಂತಾಗಿದೆ ಎಂದು ಹೇಳಿದ್ದಾರೆ. 

ಇದರ ಮಧ್ಯೆ ಅಧಿಕಾರಿಗಳು ಆರೋಪಿಗಳು ಅವರ ಸಂಬಂಧಿಕರು ಅಥವಾ ಸಹಚರರಿಗೆ ಸೇರಿದ ಅನೇಕ ಕಟ್ಟಡಗಳನ್ನು ಧ್ವಂಸ ಮಾಡಲು ಸೂಚಿಸಲಾಗಿತ್ತು. ರಾಜ್ಯವು ಸಹರಾನ್ಪುರ, ಪ್ರಯಾಗ್ರಾಜ್ ಮತ್ತು ಕಾನ್ಪುರ್ ಜಿಲ್ಲೆಯಲ್ಲಿನ ಆಸ್ತಿಗಳನ್ನು ಧ್ವಂಸ ಮಾಡಲಾಯಿತು.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments