ಬುಲೆಟ್ ರೈಲು ಯೋಜನೆ ನೋಟು ನಿಷೇಧದಂತೆ ವಿನಾಶಕಾರಿ: ಚಿದಂಬರಂ

Webdunia
ಶನಿವಾರ, 30 ಸೆಪ್ಟಂಬರ್ 2017 (17:16 IST)
ಕೇಂದ್ರ ಸರಕಾರದ ಬುಲೆಟ್ ರೈಲು ಯೋಜನೆ ಕೂಡಾ ನೋಟು ನಿಷೇಧದಂತಹ ನಡೆಯಾಗಿದ್ದು ಸರ್ವನಾಶ ಮಾಡಲಿದೆ. ಬುಲೆಟ್ ರೈಲು ಯೋಜನೆ ಕೈ ಬಿಟ್ಟು  ರೈಲು ಸುರಕ್ಷತೆಗೆ ಹೆಚ್ಚಿನ ಹಣ ವ್ಯಯ ಮಾಡುವುದು ಸೂಕ್ತ ಎಂದು ಹಿರಿಯ ಕಾಂಗ್ರೆಸ್ ಮುಖಂಡ ಪಿ.ಚಿದಂಬರಂ ಸರಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಪರೇಲ್ ಮತ್ತು ಎಲ್ಫಿನ್‌ಸ್ಟೋನ್ ರೈಲ್ವೆ ನಿಲ್ದಾಣಗಳಲ್ಲಿ ನಡೆದ ಕಾಲ್ತುಳಿತದಲ್ಲಿ 23 ಜನರು ಸಾವನ್ನಪ್ಪಿದ ಘಟನೆ ನಂತರ ಚಿದಂಬರಂ ಹೇಳಿಕೆ ಹೊರಬಿದ್ದಿದೆ.
 
ಮುಂಬೈ ಮತ್ತು ಅಹ್ಮದಾಬಾದ್‌ ನಗರಗಳನ್ನು ಸಂಪರ್ಕಿಸುವ ಬುಲೆಟ್ ರೈಲು ಯೋಜನೆ ಸಾಮಾನ್ಯ ಜನರಿಗೆ ಅಲ್ಲ, ಆದರೆ "ಉನ್ನತ ಮತ್ತು ಪ್ರಬಲರ ಪ್ರತಿಷ್ಠೆಯ ಪ್ರವಾಸವಾಗಿದೆ ಎಂದು ಆರೋಪಿಸಿದ್ದಾರೆ.
 
ಕೇಂದ್ರದ ರೈಲ್ವೆ ಸಚಿವರಾದ ಪಿಯೂಷ್ ಗೋಯಲ್ ಬುಲೆಟ್ ರೈಲಿಗೆ ಮೀಸಲಾಗಿಟ್ಟ ಒಂದು ಲಕ್ಷ ಕೋಟಿ ಹಣವನ್ನು ರೈಲ್ವೆ ಸುರಕ್ಷತೆಗಾಗಿ ಬಳಸಿಕೊಳ್ಳುವುದು ಸೂಕ್ತ ಎಂದು ಸಲಹೆ ನೀಡಿದ್ದಾರೆ. 
 
"ಬುಲೆಟ್ ಟ್ರೈನ್ ಯೋಜನೆ ನೋಟು ನಿಷೇಧದಂತೆ. ಅದು ಸುರಕ್ಷತೆ ಸೇರಿದಂತೆ ಎಲ್ಲವನ್ನೂ ಕೊಲ್ಲುತ್ತದೆ ಎಂದು ಕೇಂದ್ರದ ಮಾಜಿ ಸಚಿವ ಪಿ.ಚಿದಂಬರಂ ಆತಂಕ ವ್ಯಕ್ತಪಡಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹುಬ್ಬಳ್ಳಿ ಜಿಮ್‌ ಟ್ರೈನರ್‌ ವಿರುದ್ಧ ಅತ್ಯಾಚಾರ ಆರೋಪ: ಸೂಕ್ತ ಕ್ರಮಕ್ಕೆ ಪರಮೇಶ್ವರ್ ಸೂಚನೆ

ತಮಿಳುನಾಡು ವಿಧಾನಸಭೆ ಚುನಾವಣೆ: ಬಿಜೆಪಿ ಅಭ್ಯರ್ಥಿ ಪಟ್ಟಿಯಲಿಲ್ಲ ಅಣ್ಣಾಮಲೈ ಹೆಸರಿಲ್ಲ, ಭಾರೀ ಕುತೂಹಲ

ಯೋಗಿ ಆದಿತ್ಯನಾಥ್‌ರನ್ನು ಭೇಟಿಯಾದ ಗೌತಮ್ ಅದಾನಿ

ವೇದಿಕೆಯಲ್ಲೇ ಕುಸಿದು ಬಿದ್ದ ನಿವೃತ್ತ ನ್ಯಾಯಮೂರ್ತಿ ಸಂತೋಷ್ ಹೆಗ್ದೆ, Video

ಮುಸ್ಲಿಂ ಮತ ಬೇಡ ಎನ್ನುವ ಬಸನಗೌಡ ಪಾಟೀಲ ಯತ್ನಾಳ್ ಹುಚ್ಚ

ಮುಂದಿನ ಸುದ್ದಿ
Show comments