Webdunia - Bharat's app for daily news and videos

Install App

ಬುಲೆಟ್ ರೈಲು ಯೋಜನೆ ನೋಟು ನಿಷೇಧದಂತೆ ವಿನಾಶಕಾರಿ: ಚಿದಂಬರಂ

Webdunia
ಶನಿವಾರ, 30 ಸೆಪ್ಟಂಬರ್ 2017 (17:16 IST)
ಕೇಂದ್ರ ಸರಕಾರದ ಬುಲೆಟ್ ರೈಲು ಯೋಜನೆ ಕೂಡಾ ನೋಟು ನಿಷೇಧದಂತಹ ನಡೆಯಾಗಿದ್ದು ಸರ್ವನಾಶ ಮಾಡಲಿದೆ. ಬುಲೆಟ್ ರೈಲು ಯೋಜನೆ ಕೈ ಬಿಟ್ಟು  ರೈಲು ಸುರಕ್ಷತೆಗೆ ಹೆಚ್ಚಿನ ಹಣ ವ್ಯಯ ಮಾಡುವುದು ಸೂಕ್ತ ಎಂದು ಹಿರಿಯ ಕಾಂಗ್ರೆಸ್ ಮುಖಂಡ ಪಿ.ಚಿದಂಬರಂ ಸರಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಪರೇಲ್ ಮತ್ತು ಎಲ್ಫಿನ್‌ಸ್ಟೋನ್ ರೈಲ್ವೆ ನಿಲ್ದಾಣಗಳಲ್ಲಿ ನಡೆದ ಕಾಲ್ತುಳಿತದಲ್ಲಿ 23 ಜನರು ಸಾವನ್ನಪ್ಪಿದ ಘಟನೆ ನಂತರ ಚಿದಂಬರಂ ಹೇಳಿಕೆ ಹೊರಬಿದ್ದಿದೆ.
 
ಮುಂಬೈ ಮತ್ತು ಅಹ್ಮದಾಬಾದ್‌ ನಗರಗಳನ್ನು ಸಂಪರ್ಕಿಸುವ ಬುಲೆಟ್ ರೈಲು ಯೋಜನೆ ಸಾಮಾನ್ಯ ಜನರಿಗೆ ಅಲ್ಲ, ಆದರೆ "ಉನ್ನತ ಮತ್ತು ಪ್ರಬಲರ ಪ್ರತಿಷ್ಠೆಯ ಪ್ರವಾಸವಾಗಿದೆ ಎಂದು ಆರೋಪಿಸಿದ್ದಾರೆ.
 
ಕೇಂದ್ರದ ರೈಲ್ವೆ ಸಚಿವರಾದ ಪಿಯೂಷ್ ಗೋಯಲ್ ಬುಲೆಟ್ ರೈಲಿಗೆ ಮೀಸಲಾಗಿಟ್ಟ ಒಂದು ಲಕ್ಷ ಕೋಟಿ ಹಣವನ್ನು ರೈಲ್ವೆ ಸುರಕ್ಷತೆಗಾಗಿ ಬಳಸಿಕೊಳ್ಳುವುದು ಸೂಕ್ತ ಎಂದು ಸಲಹೆ ನೀಡಿದ್ದಾರೆ. 
 
"ಬುಲೆಟ್ ಟ್ರೈನ್ ಯೋಜನೆ ನೋಟು ನಿಷೇಧದಂತೆ. ಅದು ಸುರಕ್ಷತೆ ಸೇರಿದಂತೆ ಎಲ್ಲವನ್ನೂ ಕೊಲ್ಲುತ್ತದೆ ಎಂದು ಕೇಂದ್ರದ ಮಾಜಿ ಸಚಿವ ಪಿ.ಚಿದಂಬರಂ ಆತಂಕ ವ್ಯಕ್ತಪಡಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇಂಡೋನೇಷ್ಯಾದಲ್ಲಿ ಪ್ರಬಲ ಭೂಕಂಪಕ್ಕೆ 38ಮಂದಿ ಬಲಿ, ಹಲವು ಮಂದಿಗೆ ಗಾಯ, ಭೀಕರ ವಿಡಿಯೋ

ಇನ್ನೇನು ಹತ್ತಬೇಕೆನ್ನುಷ್ಟರಲ್ಲಿ ಹೊರಟ ವಂದೇ ಭಾರತ್ ಎಕ್ಸ್‌ಪ್ರೆಸ್‌, ಕೈಮುಗಿದು ಬೇಡುತ್ತಿರುವ ಪ್ರಯಾಣಿಕೆಯನ್ನು ಕಂಡು ಲೋಕೋ ಪೈಲೆಟ್ ಏನ್ ಮಾಡಿದ್ರು, Video

ನಾನು ದೇಶಭಕ್ತಿಯ ಪಾಠವನ್ನು ಬಿಜೆಪಿಯವರಿಂದ ಕಲಿಯಬೇಕಿಲ್ಲ: ಜಮೀರ್ ಅಹ್ಮದ್

ಪಡುಬಿದ್ರಿ ಡೇವಿಡ್ ಡಿಸೋಜ ಹತ್ಯೆ, ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ

80ನೇ ಸ್ವಾತಂತ್ರ್ಯ ಸಂದರ್ಭದಲ್ಲಿ ಭಾರತದ ಅಸಾಧಾರಣ ಪ್ರಗತಿಗೆ ಪುಟಿನ್ ಶ್ಲಾಘನೆ

ಮುಂದಿನ ಸುದ್ದಿ
Show comments