Webdunia - Bharat's app for daily news and videos

Install App

ಬುಲೆಟ್ ರೈಲು ಯೋಜನೆ ನೋಟು ನಿಷೇಧದಂತೆ ವಿನಾಶಕಾರಿ: ಚಿದಂಬರಂ

Webdunia
ಶನಿವಾರ, 30 ಸೆಪ್ಟಂಬರ್ 2017 (17:16 IST)
ಕೇಂದ್ರ ಸರಕಾರದ ಬುಲೆಟ್ ರೈಲು ಯೋಜನೆ ಕೂಡಾ ನೋಟು ನಿಷೇಧದಂತಹ ನಡೆಯಾಗಿದ್ದು ಸರ್ವನಾಶ ಮಾಡಲಿದೆ. ಬುಲೆಟ್ ರೈಲು ಯೋಜನೆ ಕೈ ಬಿಟ್ಟು  ರೈಲು ಸುರಕ್ಷತೆಗೆ ಹೆಚ್ಚಿನ ಹಣ ವ್ಯಯ ಮಾಡುವುದು ಸೂಕ್ತ ಎಂದು ಹಿರಿಯ ಕಾಂಗ್ರೆಸ್ ಮುಖಂಡ ಪಿ.ಚಿದಂಬರಂ ಸರಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಪರೇಲ್ ಮತ್ತು ಎಲ್ಫಿನ್‌ಸ್ಟೋನ್ ರೈಲ್ವೆ ನಿಲ್ದಾಣಗಳಲ್ಲಿ ನಡೆದ ಕಾಲ್ತುಳಿತದಲ್ಲಿ 23 ಜನರು ಸಾವನ್ನಪ್ಪಿದ ಘಟನೆ ನಂತರ ಚಿದಂಬರಂ ಹೇಳಿಕೆ ಹೊರಬಿದ್ದಿದೆ.
 
ಮುಂಬೈ ಮತ್ತು ಅಹ್ಮದಾಬಾದ್‌ ನಗರಗಳನ್ನು ಸಂಪರ್ಕಿಸುವ ಬುಲೆಟ್ ರೈಲು ಯೋಜನೆ ಸಾಮಾನ್ಯ ಜನರಿಗೆ ಅಲ್ಲ, ಆದರೆ "ಉನ್ನತ ಮತ್ತು ಪ್ರಬಲರ ಪ್ರತಿಷ್ಠೆಯ ಪ್ರವಾಸವಾಗಿದೆ ಎಂದು ಆರೋಪಿಸಿದ್ದಾರೆ.
 
ಕೇಂದ್ರದ ರೈಲ್ವೆ ಸಚಿವರಾದ ಪಿಯೂಷ್ ಗೋಯಲ್ ಬುಲೆಟ್ ರೈಲಿಗೆ ಮೀಸಲಾಗಿಟ್ಟ ಒಂದು ಲಕ್ಷ ಕೋಟಿ ಹಣವನ್ನು ರೈಲ್ವೆ ಸುರಕ್ಷತೆಗಾಗಿ ಬಳಸಿಕೊಳ್ಳುವುದು ಸೂಕ್ತ ಎಂದು ಸಲಹೆ ನೀಡಿದ್ದಾರೆ. 
 
"ಬುಲೆಟ್ ಟ್ರೈನ್ ಯೋಜನೆ ನೋಟು ನಿಷೇಧದಂತೆ. ಅದು ಸುರಕ್ಷತೆ ಸೇರಿದಂತೆ ಎಲ್ಲವನ್ನೂ ಕೊಲ್ಲುತ್ತದೆ ಎಂದು ಕೇಂದ್ರದ ಮಾಜಿ ಸಚಿವ ಪಿ.ಚಿದಂಬರಂ ಆತಂಕ ವ್ಯಕ್ತಪಡಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments