Select Your Language

Notifications

webdunia
webdunia
webdunia
webdunia

ಆಂಧ್ರಪ್ರದೇಶದಲ್ಲಿ ಭೀಕರ ಸರಣಿ ಅಪಘಾತಕ್ಕೆ ಐವರ ದುರ್ಮರಣ

ಆಂಧ್ರಪ್ರದೇಶದಲ್ಲಿ ಭೀಕರ ಸರಣಿ ಅಪಘಾತಕ್ಕೆ ಐವರ ದುರ್ಮರಣ
ಹೈದರಾಬಾದ್ , ಭಾನುವಾರ, 1 ಫೆಬ್ರವರಿ 2015 (15:27 IST)
ಆಂಧ್ರಪ್ರದೇಶದ ರಾಜಮಂಡ್ರಿ ನಗರದಲ್ಲಿ ಭೀಕರ ಸರಣಿ ಅಪಘಾತ ಸಂಭವಿಸಿದ್ದರಿಂದ ಐವರು ದುರ್ಮರಣವಪ್ಪಿದ್ದಾರೆ. ಬಸ್ ಬ್ರೇಕ್ ಫೇಲ್ ಆಗಿದ್ದರಿಂದ ಒಂದು ಕಾರು ಮತ್ತು ಬೈಕ್‌ಗೆ ಡಿಕ್ಕಿ ಹೊಡೆದ ರಭಸಕ್ಕೆ ಬೈಕ್ ಸವಾರರಿಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಶಾಲಾ ಬಸ್ ಜಗನ್ ಮೋಹನ್ ರೆಡ್ಡಿ ರಾಲಿಗೆ ಜನರನ್ನು ಕರೆದೊಯ್ಯುತ್ತಿದ್ದಾಗ ಈ ಭೀಕರ ದುರಂತ ಸಂಭವಿಸಿತು. ಬ್ರೇಕ್ ಫೇಲ್ ಆಗಿದ್ದ ಬಸ್ ಸಂಪೂರ್ಣ ನಿಯಂತ್ರಣ ಕಳೆದುಕೊಂಡು ಎದುರಿಗೆ ಬಂದ ವಾಹನಗಳಿಗೆ ಡಿಕ್ಕಿಹೊಡೆಯತೊಡಗಿತು.

ಮೋರಂಪುಡಿ ಸರ್ಕಲ್ ಬಳಿ ಮಧ್ಯಾಹ್ನ 1.30 ಗಂಟೆಗೆ ಈ ದುರಂತ ಸಂಭವಿಸಿದೆ. ಅಪಘಾತದಲ್ಲಿ ಮೂವರು ಗಾಯಗೊಂಡಿದ್ದು, ಇನ್ನೂ ಮೂವರ ಸ್ಥಿತಿ ಗಂಭೀರವಾಗಿದೆ ಎಂದು ಹೇಳಲಾಗುತ್ತಿದೆ. ಬಸ್ ಮೊದಲು ಕಾರಿಗೆ ಡಿಕ್ಕಿ ಹೊಡೆದ ರಭಸಕ್ಕೆ ಕಾರು ಹಿಂದಕ್ಕೆ ಚಲಿಸಲಾರಂಭಿಸಿತು. ನಂತರ ಎದುರಿಗೆ ಹಾದುಹೋಗುತ್ತಿದ್ದ ಬೈಕ್‌ಗೆ ಡಿಕ್ಕಿಹೊಡೆದಿದ್ದು ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

Share this Story:

Follow Webdunia kannada